Judge and gavel in courtroom
ಮಂಗಳೂರು : ಅಪ್ರಾಪ್ರ ಬಾಲಕಿಗೆ ಅಟೋದಲ್ಲಿ ಲೈಂಗಿಕ ಕಿರುಕುಳ ನೀಡಿದ ಆರೋಪಿಗಳಿಗೆ ಮಂಗಳೂರಿನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ (ಪೋಕ್ಸೋ) ಎಫ್ಟಿಎಸ್ಸಿ-1 ನ್ಯಾಯಾಲಯವು ಶಿಕ್ಷೆಯನ್ನು ವಿಧಿಸಿದ್ದಾರೆ.
ಬೆಳ್ತಂಗಡಿ ತಾಲೂಕು ಇಳಂತಿಲದ ನಿವಾಸಿ ಬೀಡಿ ತೆಗೆಯುವ ವೃತ್ತಿಯ ಅಬ್ದುಲ್ ಕರೀಂ (39), ಮೊಗ್ರು ಗ್ರಾಮ ಪಚ್ಚಡ್ಕ ಮನೆಯ ನಿವಾಸಿ ಆಟೋರಿಕ್ಷಾ ಚಾಲಕ ಸಾದಿಕ್ (34) ಶಿಕ್ಷೆಗೊಳಗಾದವರು.
ಜೂ.18,2023 ರಂದು ಅಪ್ರಾಪ್ತ ಬಾಲಕಿ ಗ್ರಾಮಾಭಿವೃದ್ಧಿ ಯೋಜನೆಯೊಂದರ ಸಂಘದ ಹಣ ಕಟ್ಟಲೆಂದು ಬಂದಾರು ಗ್ರಾಮದ ನೇಲಾಳು ಪಲ್ಕೆ ಎಂಬಲ್ಲಿಗೆ ನಡೆದುಕೊಂಡು ಹೋಗುತ್ತಿದ್ದಾಗ ಆರೋಪಿ ಕರೀಂ ಎಲ್ಲಿಗೆ ಹೋಗುವುದಾಗಿ ಬಾಲಕಿಯಲ್ಲಿ ಪ್ರಶ್ನೆ ಮಾಡಿದ್ದ. ಕುಂಟಾಲ ಪಲ್ಕೆ ತಲುಪಿದಾಗ ಆಟೋರಿಕ್ಷಾ ನಿಲ್ಲಿಸಿ ರಿಕ್ಷಾದಲ್ಲಿ ಬರಲು ಕರೆದಿದ್ದ. ಈತ ಇನ್ನೋರ್ವ ಆರೋಪಿ ಆಟೋರಿಕ್ಷಾ ಚಾಲಕ ಸಾದಿಕ್ ಕೂಡಾ ಬಾಲಕಿಯನ್ನು ಕರೆದಿದ್ದ. ಬಾಲಕಿ ರಿಕ್ಷಾದಲ್ಲಿ ಕುಳಿತಿದ್ದಳು. ಕರೀಂ ಆಕೆಗೆ 200 ರೂ. ನೀಡಿ ಅದನ್ನು ಸಂಘಕ್ಕೆ ಕಟ್ಟಿ ವಾಪಾಸು ಬರುವಾಗ ಆಟೊದಲ್ಲಿ ಬರುವಂತೆ ಹೇಳಿದ್ದ. ಬಾಲಕಿ ಹಣವನ್ನು ವಾಪಸ್ ಆತನಿಗೆ ನೀಡಿದ್ದಳು.
ಆಗ ಬೆಳ್ತಂಗಡಿಗೆ ಬರುತ್ತೀಯಾ ಎಂದು ಕೇಳಿದ್ದ. ಆಕೆ ಬರಲ್ಲ ಎಂದು ಹೇಳಿದಾಗ ಆಕೆಯ ಮೈ ಮೇಲೆ ಕೈ ಹಾಕಿ ಲೈಂಗಿಕ ದೌರ್ಜನ್ಯ ಎಸಗಿದ್ದ. ಬಾಲಕಿ ಆಟೋರಿಕ್ಷಾದಿಂದ ಹಾರಿದ್ದು, ಗಾಯಗೊಂಡಿದ್ದಳು. ಕೂಡಲೇ ಇಬ್ಬರು ಆಟೋ ರಿಕ್ಷಾದಿಂದ ಹಾರಿದಾಗ ಆಟೋ ನಿಲ್ಲಿಸದೇ ತೆರಳಿದ್ದು, ಈ ಕುರಿತು ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿತ್ತು.
ಒಂದನೇ ಆರೋಪಿ ಅಬ್ದುಲ್ ಕರೀಂಗೆ ಪೋಕ್ಸೋ ಕಾಯ್ದೆಯಡಿ ಕಲಂ 8 ರ ಅಡಿಯಲ್ಲಿ 5 ವರ್ಷಗಳ ಜೈಲು, 5000 ರೂ. ದಂಡ, ದಂಡ ಪಾವತಿಸಲು ವಿಫಲನಾದರೆ ಆರು ತಿಂಗಳ ಹೆಚ್ಚುವರಿ ಸಜೆ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ದೌರ್ಜನ್ಯ ತಡೆ ಕಾಯಿದೆಯ ಕಲಂ 3(1)(ಡಬ್ಲ್ಯು) (ಐ) ಅಡಿಯಲ್ಲಿ 5 ವರ್ಷ ಸಾದಾ ಸಜೆ ಮತ್ತು 5,000 ರೂ.ದಂಡ, ಒಂದು ವೇಳೆ ದಂಡ ಪಾವತಿಸಲು ವಿಫಲನಾದರೆ ಹೆಚ್ಚುವರಿ 6 ತಿಂಗಳ ಸಜೆ, ಅಲ್ಲದೆ ಪರಿಶಿಷ್ಟ ಜಾತಿ, ಪಂಗಡದವರ ದೌರ್ಜನ್ಯ ತಡೆ ಕಾಯ್ದೆಯ ಕಲಂ 3(2)(ವಿಎ) 83 0 3542(1)(3) ಅಡಿಯಲ್ಲಿ 3 ವರ್ಷ ಜೈಲು ಶಿಕ್ಷೆ ಮತ್ತು 5,000 ರೂ. ದಂಡ, ಒಂದು ವೇಳೆ ದಂಡ ಪಾವತಿಸಲು ವಿಫಲನಾದರೆ ಹೆಚ್ಚುವರಿ 3 ತಿಂಗಳ ಜೈಲು ಶಿಕ್ಷೆ ವಿಧಿಸಿದ್ದಾರೆ. ಇನ್ನೋರ್ವ ಆರೋಪಿ ಸಾದಿಕ್ಗೆ ಪೋಕೋ ಕಾಯ್ದೆಯ ಕಲಂ 8ರಡಿಯಲ್ಲಿ 3 ವರ್ಷಗಳ ಜೈಲು ಮತ್ತು 5,000 ರೂ. ದಂಡ, ದಂಡ ಪಾವತಿಸಲು ವಿಫಲನಾದರೆ ಹೆಚ್ಚುವರಿ 6 ತಿಂಗಳ ಸಜೆ ವಿಧಿಸಿದ್ದಾರೆ.
ಕಾರವಾರ : ವೀರ ಯೋಧ ಹುತಾತ್ಮ ವಿನೋದ ನಾಯಕ್ ಅವರ 21ನೇ ಪುಣ್ಯತಿಥಿ ಹಾಗೂ ಸ್ಮಾರಕಕ್ಕೆ ನೂತನ ಕಾಂಪೌಂಡ್ ಗೋಡೆ…
ಕಾನ್ಪುರದಲ್ಲಿ ಖಾಸಗಿ ತರಬೇತಿ ವಿಮಾನ ಅಪಘಾತ: ಉಡುಪಿ ಮೂಲದ ಪೈಲಟ್ ಸಾವು ಉಡುಪಿ: ಉತ್ತರ ಪ್ರದೇಶದ ಕಾನ್ಪುರದಲ್ಲಿ ಆಗಸ್ಟ್ 27ರಂದು…
ಅಮೆರಿಕದ ಪ್ರತಿಷ್ಠಿತ ಗ್ರ್ಯಾಂಡ್ ಚೆಸ್ ಟೂರ್ ಗೆದ್ದು ಇತಿಹಾಸ ನಿರ್ಮಿಸಿದ ಪ್ರಜ್ಞಾನಂದ ವಾಷಿಂಗ್ಟನ್: ಭಾರತದ ಯುವ ಗ್ರ್ಯಾಂಡ್ಮಾಸ್ಟರ್ ಆರ್. ಪ್ರಜ್ಞಾನಂದ…
ಮೈಸೂರು ದಸರಾಕ್ಕೆ ಅದ್ದೂರಿ ಸಿದ್ಧತೆ : ಅರಮನೆ ಪ್ರವೇಶಿಸಿದ ಗಜಪಡೆಗೆ ಭರ್ಜರಿ ಸ್ವಾಗತ ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ…
ಕುಂದಾಪುರ : ಗಂಗೊಳ್ಳಿ ಸಮುದ್ರದಲ್ಲಿ ಮುಳುಗಿದ್ದ ದೋಣಿಯ ಅವಶೇಷ ಪತ್ತೆ ಕುಂದಾಪುರ : ಗಂಗೊಳ್ಳಿ ನದೀಮುಖದ ಬಳಿ ಬುಧವಾರ ಸಮುದ್ರದಲ್ಲಿ…
2019 – 2023ರ ವರೆಗೆ ಮುಡಾದಿಂದ ಹಂಚಿಕೆಯಾದ ಎಲ್ಲಾ 50:50 ಸೈಟುಗಳು ರದ್ದು .. ಅಕ್ರಮ ನಡೆದಿದ್ದರೆ 2018ರ ಹಿಂದೆ…