Featured

ಮಂಗಳೂರು : ಆಟೋದಲ್ಲಿ ಅಪ್ರಾಪ್ರ ಬಾಲಕಿಗೆ ಲೈಂಗಿಕ ಕಿರುಕುಳ ಪ್ರಕರಣ  ; ಚಾಲಕ ಸಹಿತ ಇಬ್ಬರಿಗೆ ಕಾರಾಗೃಹ ಶಿಕ್ಷೆ – vishwanews24

ಮಂಗಳೂರು : ಆಟೋದಲ್ಲಿ ಅಪ್ರಾಪ್ರ ಬಾಲಕಿಗೆ ಲೈಂಗಿಕ ಕಿರುಕುಳ ಪ್ರಕರಣ  ; ಚಾಲಕ ಸಹಿತ ಇಬ್ಬರಿಗೆ ಕಾರಾಗೃಹ ಶಿಕ್ಷೆ

ಮಂಗಳೂರು : ಅಪ್ರಾಪ್ರ ಬಾಲಕಿಗೆ ಅಟೋದಲ್ಲಿ ಲೈಂಗಿಕ ಕಿರುಕುಳ ನೀಡಿದ ಆರೋಪಿಗಳಿಗೆ ಮಂಗಳೂರಿನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ (ಪೋಕ್ಸೋ) ಎಫ್ಟಿಎಸ್‌ಸಿ-1 ನ್ಯಾಯಾಲಯವು ಶಿಕ್ಷೆಯನ್ನು ವಿಧಿಸಿದ್ದಾರೆ.

ಬೆಳ್ತಂಗಡಿ ತಾಲೂಕು ಇಳಂತಿಲದ ನಿವಾಸಿ ಬೀಡಿ ತೆಗೆಯುವ ವೃತ್ತಿಯ ಅಬ್ದುಲ್‌ ಕರೀಂ (39), ಮೊಗ್ರು ಗ್ರಾಮ ಪಚ್ಚಡ್ಕ ಮನೆಯ ನಿವಾಸಿ ಆಟೋರಿಕ್ಷಾ ಚಾಲಕ ಸಾದಿಕ್‌ (34) ಶಿಕ್ಷೆಗೊಳಗಾದವರು.

ಜೂ.18,2023 ರಂದು ಅಪ್ರಾಪ್ತ ಬಾಲಕಿ ಗ್ರಾಮಾಭಿವೃದ್ಧಿ ಯೋಜನೆಯೊಂದರ ಸಂಘದ ಹಣ ಕಟ್ಟಲೆಂದು ಬಂದಾರು ಗ್ರಾಮದ ನೇಲಾಳು ಪಲ್ಕೆ ಎಂಬಲ್ಲಿಗೆ ನಡೆದುಕೊಂಡು ಹೋಗುತ್ತಿದ್ದಾಗ ಆರೋಪಿ ಕರೀಂ ಎಲ್ಲಿಗೆ ಹೋಗುವುದಾಗಿ ಬಾಲಕಿಯಲ್ಲಿ ಪ್ರಶ್ನೆ ಮಾಡಿದ್ದ. ಕುಂಟಾಲ ಪಲ್ಕೆ ತಲುಪಿದಾಗ ಆಟೋರಿಕ್ಷಾ ನಿಲ್ಲಿಸಿ ರಿಕ್ಷಾದಲ್ಲಿ ಬರಲು ಕರೆದಿದ್ದ. ಈತ ಇನ್ನೋರ್ವ ಆರೋಪಿ ಆಟೋರಿಕ್ಷಾ ಚಾಲಕ ಸಾದಿಕ್ ಕೂಡಾ ಬಾಲಕಿಯನ್ನು ಕರೆದಿದ್ದ. ಬಾಲಕಿ ರಿಕ್ಷಾದಲ್ಲಿ ಕುಳಿತಿದ್ದಳು. ಕರೀಂ ಆಕೆಗೆ 200 ರೂ. ನೀಡಿ ಅದನ್ನು ಸಂಘಕ್ಕೆ ಕಟ್ಟಿ ವಾಪಾಸು ಬರುವಾಗ ಆಟೊದಲ್ಲಿ ಬರುವಂತೆ ಹೇಳಿದ್ದ. ಬಾಲಕಿ ಹಣವನ್ನು ವಾಪಸ್‌ ಆತನಿಗೆ ನೀಡಿದ್ದಳು.

ಆಗ ಬೆಳ್ತಂಗಡಿಗೆ ಬರುತ್ತೀಯಾ ಎಂದು ಕೇಳಿದ್ದ. ಆಕೆ ಬರಲ್ಲ ಎಂದು ಹೇಳಿದಾಗ ಆಕೆಯ ಮೈ ಮೇಲೆ ಕೈ ಹಾಕಿ ಲೈಂಗಿಕ ದೌರ್ಜನ್ಯ ಎಸಗಿದ್ದ. ಬಾಲಕಿ ಆಟೋರಿಕ್ಷಾದಿಂದ ಹಾರಿದ್ದು, ಗಾಯಗೊಂಡಿದ್ದಳು. ಕೂಡಲೇ ಇಬ್ಬರು ಆಟೋ ರಿಕ್ಷಾದಿಂದ ಹಾರಿದಾಗ ಆಟೋ ನಿಲ್ಲಿಸದೇ ತೆರಳಿದ್ದು, ಈ ಕುರಿತು ಸ್ಥಳೀಯ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿತ್ತು.

ಒಂದನೇ ಆರೋಪಿ ಅಬ್ದುಲ್‌ ಕರೀಂಗೆ ಪೋಕ್ಸೋ ಕಾಯ್ದೆಯಡಿ ಕಲಂ 8 ರ ಅಡಿಯಲ್ಲಿ 5 ವರ್ಷಗಳ ಜೈಲು, 5000 ರೂ. ದಂಡ, ದಂಡ ಪಾವತಿಸಲು ವಿಫಲನಾದರೆ ಆರು ತಿಂಗಳ ಹೆಚ್ಚುವರಿ ಸಜೆ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ದೌರ್ಜನ್ಯ ತಡೆ ಕಾಯಿದೆಯ ಕಲಂ 3(1)(ಡಬ್ಲ್ಯು) (ಐ) ಅಡಿಯಲ್ಲಿ 5 ವರ್ಷ ಸಾದಾ ಸಜೆ ಮತ್ತು 5,000 ರೂ.ದಂಡ, ಒಂದು ವೇಳೆ ದಂಡ ಪಾವತಿಸಲು ವಿಫಲನಾದರೆ ಹೆಚ್ಚುವರಿ 6 ತಿಂಗಳ ಸಜೆ, ಅಲ್ಲದೆ ಪರಿಶಿಷ್ಟ ಜಾತಿ, ಪಂಗಡದವರ ದೌರ್ಜನ್ಯ ತಡೆ ಕಾಯ್ದೆಯ ಕಲಂ 3(2)(ವಿಎ) 83 0 3542(1)(3) ಅಡಿಯಲ್ಲಿ 3 ವರ್ಷ ಜೈಲು ಶಿಕ್ಷೆ ಮತ್ತು 5,000 ರೂ. ದಂಡ, ಒಂದು ವೇಳೆ ದಂಡ ಪಾವತಿಸಲು ವಿಫಲನಾದರೆ ಹೆಚ್ಚುವರಿ 3 ತಿಂಗಳ ಜೈಲು ಶಿಕ್ಷೆ ವಿಧಿಸಿದ್ದಾರೆ. ಇನ್ನೋರ್ವ ಆರೋಪಿ ಸಾದಿಕ್‌ಗೆ ಪೋಕೋ ಕಾಯ್ದೆಯ ಕಲಂ 8ರಡಿಯಲ್ಲಿ 3 ವರ್ಷಗಳ ಜೈಲು ಮತ್ತು 5,000 ರೂ. ದಂಡ, ದಂಡ ಪಾವತಿಸಲು ವಿಫಲನಾದರೆ ಹೆಚ್ಚುವರಿ 6 ತಿಂಗಳ ಸಜೆ ವಿಧಿಸಿದ್ದಾರೆ.

Vishwa News 24

Recent Posts

ಹೆಜಮಾಡಿ ಕಾಂಗ್ರೆಸ್ ಗೆ ಭರವಸೆ ನಾಯಕ : ಪ್ರಭೋದ್ ಚಂದ್ರ ಹೆಜಮಾಡಿ – vishwanews24

ಹೆಜಮಾಡಿ ಕಾಂಗ್ರೆಸ್ ಗೆ ಭರವಸೆ ನಾಯಕ : ಪ್ರಭೋದ್ ಚಂದ್ರ ಹೆಜಮಾಡಿ ಕಾಪು: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ…

20 minutes ago

ಉಡುಪಿ: ಟಯರ್ ಸ್ಫೋಟಗೊಂಡು ಮೀನು ಸಾಗಾಟದ ಲಾರಿ ಪಲ್ಟಿ  – vishwanews24

ಉಡುಪಿ: ಟಯರ್ ಸ್ಫೋಟಗೊಂಡು ಮೀನು ಸಾಗಾಟದ ಲಾರಿ ಪಲ್ಟಿ  ಉಡುಪಿ: ಉಡುಪಿಯಿಂದ ಕುಂದಾಪುರ ಕಡೆಗೆ ಸಾಗುತ್ತಿದ್ದ ಮೀನು ಸಾಗಾಟದ ಲಾರಿಯೊಂದು…

40 minutes ago

ಸತತ 4ನೇ ಬಾರಿ CNG ದರ ಏರಿಕೆ: ಪ್ರತಿ ಕೆಜಿಗೆ 2 ರೂ. ಹೆಚ್ಚಳ – vishwanews24

ಸತತ 4ನೇ ಬಾರಿ CNG ದರ ಏರಿಕೆ: ಪ್ರತಿ ಕೆಜಿಗೆ 2 ರೂ. ಹೆಚ್ಚಳ ನವದೆಹಲಿ: ಪೆಟ್ರೋಲ್‌, ಡೀಸೆಲ್‌ ಬಳಿಕ…

54 minutes ago

ದುಬೈನಲ್ಲಿ ರಸ್ತೆ ಅಪಘಾತ : ಕಿನ್ನಿಗೋಳಿಯ ಯುವತಿ ಸಾವು – vishwanews24

ದುಬೈನಲ್ಲಿ ರಸ್ತೆ ಅಪಘಾತ : ಕಿನ್ನಿಗೋಳಿಯ ಯುವತಿ ಸಾವು ಮಂಗಳೂರು: ದುಬೈನಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು, ಕಳೆದ ಕೆಲವು…

2 hours ago

ಗೋ ರಕ್ಷಣೆಯ ಹೆಸರಿನಲ್ಲಿ ನಡೆಯುತ್ತಿರುವ ದೌರ್ಜನ್ಯಗಳ ವಿರುದ್ಧ ಮಂಗಳೂರಿನಲ್ಲಿ SDPI ಪ್ರತಿಭಟನೆ – vishwanews24

ಬಿಜೆಪಿ ಸಂಘಪರಿವಾರವು ದೇಶದ ಕಾನೂನಿಗೆ ವಿರುದ್ಧವಾಗಿದೆ: ರಿಯಾಝ್ ಫರಂಗಿಪೇಟೆ ಗಲಭೆಕೋರರ ವಿರುದ್ಧದ ಪ್ರಕರಣ ಹಿಂಪಡೆದ ಕ್ರಮಕ್ಕೆ SDPI ತೀವ್ರ ವಿರೋಧ…

2 hours ago

ಬೆಳ್ತಂಗಡಿ : ಜೂನ್ 1 ರಿಂದ ಟ್ರೆಕ್ಕಿಂಗ್, ಜಲಪಾತಗಳ ಮೇಲಿನ ನಿರ್ಬಂಧ ತೆರವು – vishwanews24

ಬೆಳ್ತಂಗಡಿ : ಜೂನ್ 1 ರಿಂದ ಪ್ರವಾಸಿಗರಿಗೆ ಟ್ರೆಕ್ಕಿಂಗ್, ಜಲಪಾತಗಳ ಮೇಲಿನ ನಿರ್ಬಂಧ ತೆರವು ಅರಣ್ಯ ಇಲಾಖೆಯಿಂದ ಪ್ರವಾಸಿಗರಿಗೆ ಕಟ್ಟುನಿಟ್ಟಿನ…

2 hours ago