ಮಂಗಳೂರು: ನಗರದ ನಾಗುರಿ ಬಳಿ ಸಂಭವಿಸಿದ್ದ ಆಟೋ ರಿಕ್ಷಾದಲ್ಲಿ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿ ಈಗಾಗಲೇ ಪೊಲೀಸ್ ತನಿಖೆಯ ಜತೆ ಎನ್ಐಎ ಸೇರಿದಂತೆ ಕೇಂದ್ರ ತನಿಖಾ ತಂಡಗಳು ಸಹಕರಿಸುತ್ತಿವೆ. ಪ್ರಕರಣವನ್ನು ಇನ್ನೆರಡು ದಿನಗಳಲ್ಲಿ ಅಧಿಕೃತವಾಗಿ ಎನ್ಐಗೆ ಹಸ್ತಾಂತರಿಸುವ ಬಗ್ಗೆ ನಿರ್ಣಯವಾಗಲಿದೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಹೇಳಿದ್ದಾರೆ.
ಸ್ಫೋಟ ಸ್ಥಳಕ್ಕೆ ಇಂದು ಬೆಳಗ್ಗೆ ಭೇಟಿ ನೀಡಿದ ಬಳಿಕ ನಗರ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತಿದ್ದರು.
ಆಸ್ಪತ್ರೆಯಲ್ಲಿ ಚಿಕಿತ್ಸೆಯಲ್ಲಿರುವ ಆರೋಪಿ ಶಾರೀಕ್ ನ ಆರೋಗ್ಯ ಸುಧಾರಣೆಗೆ ಹೆಚ್ಚಿನ ಗಮನಹರಿಸುವಂತೆ ವೈದ್ಯರೊಂದಿಗೆ ಸೂಚಿಸಿದ್ದೇನೆ. ಎಂಟು ಮಂದಿ ತಜ್ಞ ವೈದ್ಯರು ಆತನಿಗೆ ಚಿಕಿತ್ಸೆ ನೀಡುತ್ತಿದ್ದಾರೆ. ಆತ ಗುಣಮುಖನಾದ ಮೇಲೆ ಹೆಚ್ಚಿನ ವಿಚಾರಣೆ ನಡೆಯಲಿದೆ. ಆತನ ವಿಚಾರಣೆ ಬಳಿಕ ಕೃತ್ಯದ ಬಗ್ಗೆ ಇನ್ನಷ್ಟು ಮಾಹಿತಿ ಲಭಿಸಲಿದೆ ಎಂದರು.
ಗಾಯಾಳು ರಿಕ್ಷಾ ಚಾಲಕರ ಚಿಕಿತ್ಸಾ ವೆಚ್ಚವನ್ನು ಸಂಪೂರ್ಣವಾಗಿ ಸರಕಾರವೇ ಭರಿಸಲಿದೆ. ಅವರ ಕುಟುಂಬಕ್ಕೆಆರ್ಥಿಕ ಸಹಾಯ ಕೂಡ ಸರಕಾರದಿಂದ ಒದಗಿಸುವ ಬಗ್ಗೆ ಬೆಂಗಳೂರಿಗೆ ತೆರಳಿದ ಮೇಲೆ ನಿರ್ಣಯ ತೆಗೆದುಕೊಳ್ಳುತ್ತೇವೆ ಎಂದರು.
ಭಯೋತ್ಪಾದನಾ ಕೃತ್ಯಗಳನ್ನು ಸಂಪೂರ್ಣವಾಗಿ ಹತ್ತಿಕ್ಕಲು ಕೇಂದ್ರ, ರಾಜ್ಯ ಸರಕಾರಗಳು ಗಮನ ಹರಿಸಿವೆ. ಇತ್ತೀಚಿನ ವರ್ಷಗಳಲ್ಲಿ ಇಂತಹ ಕೃತ್ಯಗಳು ಕಡಿಮೆಯಾಗಿವೆ ಎಂದರು.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…