ಮಂಗಳೂರು: ನಗರದ ನಾಗುರಿ ಬಳಿ ಸಂಭವಿಸಿದ್ದ ಆಟೋ ರಿಕ್ಷಾದಲ್ಲಿ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿ ಈಗಾಗಲೇ ಪೊಲೀಸ್ ತನಿಖೆಯ ಜತೆ ಎನ್ಐಎ ಸೇರಿದಂತೆ ಕೇಂದ್ರ ತನಿಖಾ ತಂಡಗಳು ಸಹಕರಿಸುತ್ತಿವೆ. ಪ್ರಕರಣವನ್ನು ಇನ್ನೆರಡು ದಿನಗಳಲ್ಲಿ ಅಧಿಕೃತವಾಗಿ ಎನ್ಐಗೆ ಹಸ್ತಾಂತರಿಸುವ ಬಗ್ಗೆ ನಿರ್ಣಯವಾಗಲಿದೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಹೇಳಿದ್ದಾರೆ.
ಸ್ಫೋಟ ಸ್ಥಳಕ್ಕೆ ಇಂದು ಬೆಳಗ್ಗೆ ಭೇಟಿ ನೀಡಿದ ಬಳಿಕ ನಗರ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತಿದ್ದರು.
ಆಸ್ಪತ್ರೆಯಲ್ಲಿ ಚಿಕಿತ್ಸೆಯಲ್ಲಿರುವ ಆರೋಪಿ ಶಾರೀಕ್ ನ ಆರೋಗ್ಯ ಸುಧಾರಣೆಗೆ ಹೆಚ್ಚಿನ ಗಮನಹರಿಸುವಂತೆ ವೈದ್ಯರೊಂದಿಗೆ ಸೂಚಿಸಿದ್ದೇನೆ. ಎಂಟು ಮಂದಿ ತಜ್ಞ ವೈದ್ಯರು ಆತನಿಗೆ ಚಿಕಿತ್ಸೆ ನೀಡುತ್ತಿದ್ದಾರೆ. ಆತ ಗುಣಮುಖನಾದ ಮೇಲೆ ಹೆಚ್ಚಿನ ವಿಚಾರಣೆ ನಡೆಯಲಿದೆ. ಆತನ ವಿಚಾರಣೆ ಬಳಿಕ ಕೃತ್ಯದ ಬಗ್ಗೆ ಇನ್ನಷ್ಟು ಮಾಹಿತಿ ಲಭಿಸಲಿದೆ ಎಂದರು.
ಗಾಯಾಳು ರಿಕ್ಷಾ ಚಾಲಕರ ಚಿಕಿತ್ಸಾ ವೆಚ್ಚವನ್ನು ಸಂಪೂರ್ಣವಾಗಿ ಸರಕಾರವೇ ಭರಿಸಲಿದೆ. ಅವರ ಕುಟುಂಬಕ್ಕೆಆರ್ಥಿಕ ಸಹಾಯ ಕೂಡ ಸರಕಾರದಿಂದ ಒದಗಿಸುವ ಬಗ್ಗೆ ಬೆಂಗಳೂರಿಗೆ ತೆರಳಿದ ಮೇಲೆ ನಿರ್ಣಯ ತೆಗೆದುಕೊಳ್ಳುತ್ತೇವೆ ಎಂದರು.
ಭಯೋತ್ಪಾದನಾ ಕೃತ್ಯಗಳನ್ನು ಸಂಪೂರ್ಣವಾಗಿ ಹತ್ತಿಕ್ಕಲು ಕೇಂದ್ರ, ರಾಜ್ಯ ಸರಕಾರಗಳು ಗಮನ ಹರಿಸಿವೆ. ಇತ್ತೀಚಿನ ವರ್ಷಗಳಲ್ಲಿ ಇಂತಹ ಕೃತ್ಯಗಳು ಕಡಿಮೆಯಾಗಿವೆ ಎಂದರು.
ವಾಣಿಜ್ಯ LPG ಸಿಲಿಂಡರ್ ದರದಲ್ಲಿ ಭಾರೀ ಇಳಿಕೆ : ಇಂದಿನಿಂದಲೇ ಪರಿಷ್ಕೃತ ದರ ಜಾರಿ ನವದೆಹಲಿ: ವಾಣಿಜ್ಯ ಬಳಕೆಯ ಎಲ್ಪಿಜಿ ಪೂರೈಕೆ…
ಆಟೋ ಚಾಲಕರಿಗೆ ಸಿಹಿ ಸುದ್ದಿ: ಎಲ್ಪಿಜಿ ದರ 10 ರೂ. ಇಳಿಕೆ ಬೆಂಗಳೂರು: ನಿರಂತರ ಎಲ್ಪಿಜಿ ದರ ಏರಿಕೆಯಿಂದ ಕಂಗಾಲಾಗಿದ್ದ ಆಟೋ…
ರಾಮ ಮಂದಿರದ ದೇಣಿಗೆ ಹಣ ದುರುಪಯೋಗ ಆರೋಪ - ಸಿಎಂ ಯೋಗಿ ಯಾರ ತಪ್ಪನ್ನೂ ಸಹಿಸಲ್ಲ : ಸಿ.ಟಿ.ರವಿ ಬೆಂಗಳೂರು:…
ಮಂಗಳೂರು: ಬೈಕಂಪಾಡಿ ದರೋಡೆ ಪ್ರಕರಣಕ್ಕೆ ಟ್ವಿಸ್ಟ್ - ವಾಹನವನ್ನು ಬಿಟ್ಟು ಪರಾರಿಯಾದ ಆರೋಪಿಗಳು ; ಕಾರು ಪತ್ತೆ ಮಂಗಳೂರು: ಬೈಕಂಪಾಡಿ…
ಮಂಗಳೂರು: ಮನೆ ಮೇಲೆ ತಡೆಗೋಡೆ ಕುಸಿತ; ಇಬ್ಬರು ಮಕ್ಕಳು ಸೇರಿ ಮೂವರು ದುರ್ಮರಣ ಮಂಗಳೂರು: ನಗರದಲ್ಲಿ ಸುರಿಯುತ್ತಿರುವ ಭಾರೀ ಮಳೆಯ…
ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…