Featured

ಮಂಗಳೂರು: ಆಟೋ ರಿಕ್ಷಾದಲ್ಲಿ ಸ್ಫೋಟ ಪ್ರಕರಣದ ಆರೋಪಿ ಶಾರಿಕ್: ಎಡಿಜಿಪಿ ;  ಆರೋಪಿ ಶಾರಿಕ್ ಗುರುತನ್ನು ಬಹಿರಂಗಪಡಿಸಿದ ಪೊಲೀಸರು – Vishwanews24

ಮಂಗಳೂರು: ಆಟೋ ರಿಕ್ಷಾದಲ್ಲಿ ಸ್ಫೋಟ ಪ್ರಕರಣದ ಆರೋಪಿ ಶಾರಿಕ್: ಎಡಿಜಿಪಿ ;  ಆರೋಪಿ ಶಾರಿಕ್ ಗುರುತನ್ನು ಬಹಿರಂಗಪಡಿಸಿದ ಪೊಲೀಸರು

ಮಂಗಳೂರು ಪ್ರಚೋದನಕಾರಿ ಗೋಡೆ ಬರಹ ಪ್ರಕರಣದ ಆರೋಪಿಗಳಲ್ಲಿ ಆರೋಪಿ ಶಾರಿಕ್ ಒಬ್ಬ..

ಮಂಗಳೂರು : ರಾಷ್ಟ್ರೀಯ ಹೆದ್ದಾರಿ 75ರ ಪಂಪ್‌ವೆಲ್ ಸಮೀಪದ ನಾಗುರಿ ಎಂಬಲ್ಲಿ ಶನಿವಾರ ಸಂಜೆ ಆಟೊ ರಿಕ್ಷಾದಲ್ಲಿ ಸಂಭವಿಸಿದ ಸ್ಫೋಟ ಪ್ರಕರಣದ ವೇಳೆ ರಿಕ್ಷಾದಲ್ಲಿದ್ದ ಆರೋಪಿ ಪ್ರಯಾಣಿಕನ ಗುರುತನ್ನು ಪೊಲೀಸರು ಬಹಿರಂಗಪಡಿಸಿದ್ದಾರೆ.

ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ನಿವಾಸಿ ಮುಹಮ್ಮದ್ ಶಾರಿಕ್(24) ಆರೋಪಿಯಾಗಿದ್ದಾನೆ. ಈತ 2020ರಲ್ಲಿ ಮಂಗಳೂರು ನಗರದಲ್ಲಿ ಕಂಡುಬಂದ ಪ್ರಚೋದನಕಾರಿ ಗೋಡೆ ಬರಹ ಪ್ರಕರಣದ ಆರೋಪಿಗಳಲ್ಲಿ ಓರ್ವನಾಗಿದ್ದ ಎಂದು ಎಡಿಜಿಪಿ ಅಲೋಕ್ ಕುಮಾರ್ ಸುದ್ದಿಗೋಷ್ಠಿಯಲ್ಲಿಂದು ತಿಳಿಸಿದ್ದಾರೆ.

ಆರೋಪಿಯಿಂದ ವಶಪಡಿಸಿಕೊಂಡ ಮೊಬೈಲ್‌ ಫೋನ್ ಹಾಗೂ ಕುಟುಂಬದವರು ಆತ ಶಾರಿಕ್ ಎಂದು ಗುರುತಿಸಿರುವುದಾಗಿ ಎಡಿಜಿಪಿ ತಿಳಿಸಿದ್ದಾರೆ. ಈತನ ಮೇಲೆ ಮಂಗಳೂರಿನ ಪೂರ್ವ ಮತ್ತು ಉತ್ತರ ಪೊಲೀಸ್ ಠಾಣೆ ಹಾಗೂ ಶಿವಮೊಗ್ಗ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಎರಡು ಪ್ರಕರಣದಲ್ಲಿ ದಸ್ತಗಿರಿಯಾಗಿ ಜಾಮೀನಿನ ಮೇಲೆ ಬಿಡುಗಡೆಗೊಂಡಿದ್ದ ಎಂದು ಅವರು ಮಾಹಿತಿ ನೀಡಿದ್ದಾರೆ.

📛 ಕಳತ್ತೂರು: ಅಣ್ಣ ನನ್ನನ್ನು ಕರೆಯುತ್ತಿದ್ದಾನೆ , ನಾನು ಬಾವಿಗೆ ಹಾರುತ್ತೇನೆ ಎಂದು ಯುವಕ ಆತ್ಮಹತ್ಯೆ – Vishwanews24

ಶಾರಿಕ್ ವಿರುದ್ಧ 2022ರ ಸೆ.19ರಂದು ಶಿವಮೊಗ್ಗ ಗ್ರಾಮಾಂತರ ಠಾಣೆಯಲ್ಲಿ ದಾಖಲಾದ UNLAWFUL ACTIVITIES (PREVENTION) ACT 1967 ಪ್ರಕರಣ ದಾಖಲಾಗಿದ್ದು, ಇದರಲ್ಲಿ ಈತ 1ನೇ ಆರೋಪಿಯಾಗಿದ್ದಾನೆ. ಪ್ರಕರಣ ದಾಖಲಾದ ನಂತರ ಶಾರಿಕ್ ಅಲ್ಲಿಂದ ತಲೆಮರೆಸಿಕೊಂಡು ಮೈಸೂರಿನಲ್ಲಿ ಬಾಡಿಗೆ ಮನೆಯೊಂದರಲ್ಲಿ ವಾಸವಾಗಿದ್ದನು. ನ.19ರಂದು ಮೈಸೂರಿನಿಂದ ಹೊರಟಿದ್ದ ಶಾರಿಕ್ ಹೂಣಸೂರು, ಮಡಿಕೇರಿ, ಮತ್ತೂರು, ಬಿ.ಸಿ.ರೋಡ್ ಮೂಲಕ ಮಂಗಳೂರಿಗೆ ಆಗಮಿಸಿ ನಗರ ಹೊರವಲಯದಲ್ಲಿ ಬಸ್ಸಿನಿಂದ ಇಳಿದು ನಂತರ ಆಟೋದಲ್ಲಿ ಪಂಪವೆಲ್ ಕಡೆಗೆ ಹೋಗುತ್ತಿದ್ದಾಗ ಈ ಸ್ಫೋಟ ಸಂಭವಿಸಿದೆ ಎಂದು ಎಡಿಜಿಪಿ ತಿಳಿಸಿದ್ದಾರೆ.

ಮೈಸೂರಿನಲ್ಲಿ ಆರೋಪಿ ವಾಸವಿದ್ದ ಬಾಡಿಗೆ ಮನೆಯಿಂದ ಸಲ್ಫೆಕ್ಸ್ ಸಲ್ಫರ್ ಪೌಡರ್, ನಟ್ ಬೋಲ್ಡ್‌ಗಳು, ಸರ್ಕ್ಯೂಟ್‌ಗಳು, ಮಲ್ಟಿ ಫಂಕ್ಷನ್ ಡಿಲೆ ಟೈಮರ್, ಗ್ರೈಂಡರ್, ಮಿಕ್ಸರ್‌, ಮ್ಯಾಚ್ ಬಾಕ್ಸ್, ಬ್ಯಾಟರಿ, ಮೈಕ್ಯಾನಿಕಲ್ ಟೈಮರ್, ಆಧಾರ್ ಕಾರ್ಡ್, ಅಲ್ಯೂಮಿನಿಯಂ ಫೈಲ್ ಸಿಮ್ ಕಾರ್ಡ್‌ಗಳು, ಮೊಬೈಲ್‌ನ ಡಿಸ್‌ಪ್ಲೆಗಳು, ಸ್ಫೋಟಕಕ್ಕೆ ಬಳಸುವ ವಿವಿಧ ಬಗೆಯ ಕೆಮಿಕಲ್ಸ್‌ನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಎಡಿಜಿಪಿ ಹೇಳಿದ್ದಾರೆ.

💥 ಕಾಂತಾರ’ ನಂತರ ತುಳುನಾಡ ಆರಾಧ್ಯ ದೈವ ಕೊರಗಜ್ಜನ ಕಥೆ ಬೆಳ್ಳಿತೆರೆಗೆ..✴️ ಬೆಳ್ತಂಗಡಿಯಲ್ಲಿ ಅದ್ದೂರಿಯಾಗಿ ನೆರವೇರಿತು ‘ಕರಿ ಹೈದ.. ಕರಿ ಅಜ್ಜ..ಸಿನೆಮಾದ ಮುಹೂರ್ತ ಸಮಾರಂಭ..

ಸುಟ್ಟ ಗಾಯಗೊಂಡಿರುವ ಆರೋಪಿ ಗುಣಮುಖನಾದ ನಂತರ ಆತನನ್ನು ಕಸ್ಟಡಿಗೆ ಪಡೆದು ಹೆಚ್ಚಿನ ವಿಚಾರಣೆ ಮಾಡಲಾಗುವುದು. ಈ ಪ್ರಕರಣದ ತನಿಖೆಗೆ ಎಸಿಪಿ ಪರಮೇಶ್ವರ ಹೆಗಡೆಯವರನ್ನು ತನಿಖಾಧಿಕಾರಿಯಾಗಿ ನೇಮಕ ಮಾಡಲಾಗಿದೆ ಎಂದವರು ಹೇಳಿದರು.

Vishwa News 24

Recent Posts

ಮತ್ಸ್ಯಕ್ಷಾಮ: ಮಂಗಳೂರಿನಲ್ಲಿ ಮೀನುಗಾರಿಕೆ ನಿಲ್ಲಿಸಿದ ಶೇ.85ರಷ್ಟು ಬೋಟುಗಳು – vishwanews24

ಮತ್ಸ್ಯಕ್ಷಾಮ: ಮಂಗಳೂರಿನಲ್ಲಿ ಮೀನುಗಾರಿಕೆ ನಿಲ್ಲಿಸಿದ ಶೇ.85ರಷ್ಟು ಬೋಟುಗಳು ಮೀನುಗಳ ಕೊರತೆಯಿಂದಾಗಿ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ ಕರಾವಳಿಯ ಮೀನುಗಾರರು ಮಂಗಳೂರು(ದಕ್ಷಿಣ ಕನ್ನಡ):…

2 hours ago

ಹಿರಿಯ ಶಾಸಕರು ಸಚಿವ ಸ್ಥಾನ ಕೇಳೋದ್ರಲ್ಲಿ ತಪ್ಪಿಲ್ಲ : ಪರಮೇಶ್ವರ್ – vishwanews24

ಹಿರಿಯ ಶಾಸಕರು ಸಚಿವ ಸ್ಥಾನ ಕೇಳೋದ್ರಲ್ಲಿ ತಪ್ಪಿಲ್ಲ : ಪರಮೇಶ್ವರ್ ಬೆಂಗಳೂರು: ಅದೇನು ಗ್ಯಾಂಬ್ಲಿಂಗ್ ಅಲ್ಲ, ಹಿರಿಯ ಶಾಸಕರು ಸಚಿವ…

3 hours ago

ಕಾರ್ಕಳ : ಭಗವಾನ್ ಬಾಹುಬಲಿಯ ಮಹಾಮಸ್ತಕಾಭಿಷೇಕ – 82.37 ಕೋಟಿ ರೂ.ನೆರವಿಗೆ ಸರಕಾರಕ್ಕೆ ಮನವಿ: ಡಾ.ಎಂಎನ್‌ಆರ್ – vishwanews24

ಕಾರ್ಕಳ : ಭಗವಾನ್ ಬಾಹುಬಲಿಯ ಮಹಾಮಸ್ತಕಾಭಿಷೇಕಕ್ಕೆ ಸಿದ್ಧತೆ: ಡಾ.ಎಂ.ಎನ್.ರಾಜೇಂದ್ರಕುಮಾರ್ 82.37 ಕೋಟಿ ರೂ.ನೆರವಿಗೆ ಸರಕಾರಕ್ಕೆ ಮನವಿ: ಡಾ.ಎಂಎನ್‌ಆರ್ ಕಾರ್ಕಳ: ಕಾರ್ಕಳದ…

3 hours ago

ಮೂಡುಬಿದಿರೆ: ಅಕ್ರಮ ಜಾನುವಾರು ಸಾಗಾಟ ಪತ್ತೆ; ಎಂಟು ದನಗಳ ರಕ್ಷಣೆ – vishwanews24

ಮೂಡುಬಿದಿರೆ: ಅಕ್ರಮ ಜಾನುವಾರು ಸಾಗಾಟ ಪತ್ತೆ; ಎಂಟು ದನಗಳ ರಕ್ಷಣೆ, ಎರಡು ವಾಹನ ವಶ ಮೂಡುಬಿದಿರೆ: ಅತ್ಯಂತ ಹಿಂಸಾತ್ಮಕವಾಗಿ ಹಾಗೂ…

3 hours ago

ರಾಜ್ಯದ ಹಲವೆಡೆ ಇಂದು, ನಾಳೆ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆ : ಹವಾಮಾನ ಇಲಾಖೆ – vishwanews24

ರಾಜ್ಯದ ಹಲವೆಡೆ ಇಂದು, ನಾಳೆ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆ : ಹವಾಮಾನ ಇಲಾಖೆ ಬೆಂಗಳೂರು: ರಾಜ್ಯದ ಹಲವೆಡೆ ಇಂದು…

3 hours ago

ಉಡುಪಿ : ಅಕ್ಕ ಕೆಫೆ ನಿರ್ವಹಣೆ ;  ಏ. 13 ರಂದು ನೇರ ಸಂದರ್ಶನ – vishwanews24

ಉಡುಪಿ : ಅಕ್ಕ ಕೆಫೆ ನಿರ್ವಹಣೆ ;  ಏ. 13 ರಂದು ನೇರ ಸಂದರ್ಶನ ಉಡುಪಿ : ರಾಷ್ಟ್ರೀಯ ಗ್ರಾಮೀಣ…

4 days ago