ಮಂಗಳೂರು : ಆಟೋ ರಿಕ್ಷಾವೊಂದರ ಚಾಲಕ ಚಾಲನೆಯ ಸಂದರ್ಭ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಶುಕ್ರವಾರ ಬೆಳಗ್ಗೆ ನೇತ್ರಾವತಿ ಸೇತುವೆಯಲ್ಲಿ ನಡೆದಿದೆ.
ಮೃತ ಆಟೋ ರಿಕ್ಷಾ ಚಾಲಕನನ್ನು ಚೊಕ್ಕಬೆಟ್ಟು ನಿವಾಸಿ ಮುಹಮ್ಮದ್ ಹನೀಫ್ (46) ಎಂದು ಗುರುತಿಸಲಾಗಿದೆ
ಕಲ್ಲಾಪುವಿನಲ್ಲಿರುವ ಗ್ಲೋಬಲ್ ಮಾಡುಕಟ್ಟೆಗೆ ತರಕಾರಿ ಖರೀದಿಸಲು ವ್ಯಾಪಾರಿಯೋರ್ವರನ್ನು ಆಟೋ ರಿಕ್ಷಾದಲ್ಲಿ ಕರೆದೊಯ್ಯುತ್ತಿದ್ದ ಸಂದರ್ಭ ಈ ಘಟನೆ ನಡೆದಿದೆ ಎಂದು ತಿಳಿದುಬಂದಿದೆ.
ರಾಷ್ಟ್ರೀಯ ಹೆದ್ದಾರಿಯಲ್ಲಿ ಜಪ್ಪಿನಮೊಗರು ತಲುಪಿದಾಗ ಆಟೋ ರಿಕ್ಷಾ ಚಾಲಕ ಹನೀಫ್ ಅವರಿಗೆ ಕಣ್ಣು ಮಂಜಾದಂತೆ ಆಗಿದ್ದು, ಈ ಸಂದರ್ಭ ರಿಕ್ಷಾ ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ. ಈ ಸಂದರ್ಭ ಸಾರ್ವಜನಿಕರು ಹನೀಫ್ ಅವರನ್ನು ಆರೈಕೆ ಮಾಡಿದ್ದಾರೆ. ಬಳಿಕ ಅವರು ರಿಕ್ಷಾ ಚಲಾಯಿಸಿಕೊಂಡು ಅಲ್ಲಿಂದ ಸ್ವಲ್ಪ ಮುಂದಕ್ಕೆ ಹೋಗಿದ್ದಾರೆ. ನೇತ್ರಾವತಿ ಸೇತುವೆ ತಲುಪಿದಾ ಅವರು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.
ಈ ಕುರಿತು ಕಂಕನಾಡಿ ನಗರ ಠಾಣೆಗೆ ದೂರು ನೀಡಲಾಗಿದೆ ಎಂದು ತಿಳಿದುಬಂದಿದೆ.
ಕುಂದಾಪುರ: ನಿಂತ ಲಾರಿಗಳಿಗೆ ಬಸ್ ಢಿಕ್ಕಿ: ಎರಡು ಸಾವು, ಹಲವರಿಗೆ ಗಾಯ ಕುಂದಾಪುರ: ಮರವಂತೆ ಸಮುದ್ರ ಕಿನಾರೆಯ ಎದುರಿನ ರಾಷ್ಟ್ರೀಯ…
ರೇಣುಕಾಸ್ವಾಮಿ ಹತ್ಯೆ ಪ್ರಕರಣ : ಜಾಮೀನಿಗಾಗಿ ಸುಪ್ರೀಂ ಕೋರ್ಟ್ ಮೊರೆ ಹೋದ ದರ್ಶನ್ ನವದೆಹಲಿ : ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು…
ದ. ಕ, ಉಡುಪಿ ಸೇರಿದಂತೆ 5 ದಿನಗಳ ಕಾಲ ಭಾರೀ ಮಳೆಯ ಮುನ್ಸೂಚನೆ ; 25 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ …
ಉಡುಪಿ ಶ್ರೀಕೃಷ್ಣ ದರ್ಶನಕ್ಕೆ ನೂತನ ಸರತಿ ಸಾಲು ಹಾಗೂ ಐಡಿ ಆಧಾರಿತ ಪ್ರವೇಶ ವ್ಯವಸ್ಥೆ ಉದ್ಘಾಟನೆ ಉಡುಪಿ : ಶ್ರೀ…
ಮಂಗಳೂರು: ಸ್ಕೂಟರ್ ಸವಾರನಿಗೆ ಖಾರದ ಪುಡಿ ಎರಚಿ ದರೋಡೆ; ಪ್ರಕರಣ ದಾಖಲು ಮಂಗಳೂರು: ಗುರುಪುರ ಬಂಗ್ಲಗುಡ್ಡೆ ಬಳಿ ಸ್ಕೂಟರ್ ಸವಾರರೊಬ್ಬರಿಗೆ…
ಪಿಯು ವಿದ್ಯಾರ್ಥಿನಿಯರ ನಾಪತ್ತೆ ಪ್ರಕರಣ: ಸಿಐಡಿ ತನಿಖೆಗೆ ಆದೇಶ 8 ತಿಂಗಳ ಹಿಂದೆ ನಾಪತ್ತೆಯಾಗಿದ್ದ ವಿದ್ಯಾರ್ಥಿಗಳು ಬೆಂಗಳೂರು: ನಗರದ ವಿದ್ಯಾರಣ್ಯಪುರ…