Featured

ಮಂಗಳೂರು: ಆದಾಯಕ್ಕಿಂತ ಅಧಿಕ ಆಸ್ತಿ : ಮೀನುಗಾರಿಕೆ ನಿರ್ದೇಶನಾಲಯದ ನಿವೃತ್ತ ಅಧಿಕಾರಿಗೆ ಜೈಲು ಶಿಕ್ಷೆ, 1.30 ಕೋ.ರೂ. ದಂಡ – Vishwanews24

ಮಂಗಳೂರು: ಆದಾಯಕ್ಕಿಂತ ಅಧಿಕ ಆಸ್ತಿ : ಮೀನುಗಾರಿಕೆ ನಿರ್ದೇಶನಾಲಯದ ನಿವೃತ್ತ ಅಧಿಕಾರಿಗೆ ಜೈಲು ಶಿಕ್ಷೆ, 1.30 ಕೋ.ರೂ. ದಂಡ

ಮಂಗಳೂರು: ಆದಾಯಕ್ಕಿಂತ ಹೆಚ್ಚಿನ ಪ್ರಮಾಣದ ಆಸ್ತಿ ಹೊಂದಿದ ಪ್ರಕರಣದಲ್ಲಿ ಮೀನುಗಾರಿಕೆ ನಿರ್ದೇಶನಾಲಯದ ನಿವೃತ್ತ ಜಂಟಿ ನಿರ್ದೇಶಕ ಗಂಗಾಧರ ವಿ. ಮಡ್ಡಿಕೇರಿಗೆ ಮಂಗಳೂರಿನ 3ನೇ ಹೆಚ್ಚುವರಿ ಜಿಲ್ಲಾ ಸತ್ರ ನ್ಯಾಯಾಲಯವು 5 ವರ್ಷಗಳ ಕಾಲ ಸಾದಾ ಸಜೆ ಮತ್ತು 1.30 ಕೋ.ರೂ. ದಂಡ ವಿಧಿಸಿ ಶಿಕ್ಷೆ ವಿಧಿಸಿದೆ.

ಗಂಗಾಧರ ವಿ. ಮಡ್ಡಿಕೇರಿ ಮಂಗಳೂರಿನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ಅವರ ವಿರುದ್ಧ ಮಂಗಳೂರಿನ ಕರ್ನಾಟಕ ಲೋಕಾಯುಕ್ತ ಪೊಲೀಸ್‌ ಠಾಣೆಯಲ್ಲಿ 2013ರ ಆ. 5ರಂದು ಪ್ರಕರಣ ದಾಖಲಾಗಿತ್ತು.

ಪ್ರಕರಣದ ವಿಚಾರಣೆಯನ್ನು ನಡೆಸಿದ 3ನೇ ಹೆಚ್ಚುವರಿ ಜಿಲ್ಲಾ ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಬಿ.ಬಿ. ಜಕಾತಿ ಅವರು ಅಪರಾಧಿಗೆ ಕಲಂ 13(1) (ಇ) ಮತ್ತು 13(2) ಲಂಚ ನಿರೋಧ ಕಾಯ್ದೆ 1988ರಡಿ 5 ವರ್ಷಗಳ ಕಾಲ ಸಾದಾ ಸಜೆ ಹಾಗೂ 1.30 ಕೋ.ರೂ. ದಂಡ, ದಂಡ ಕಟ್ಟಲು ವಿಫ‌ಲನಾದರೆ ಹೆಚ್ಚುವರಿ 6 ತಿಂಗಳ ಸಾದಾ ಸಜೆ ವಿಧಿಸಿ ಮಂಗಳವಾರ ತೀರ್ಪು ನೀಡಿದ್ದಾರೆ.

ಸುಳ್ಯ : ಮನೆಗೆ ಆಕಸ್ಮಿಕವಾಗಿ ಬೆಂಕಿ ಬಿದ್ದು ಮನೆಯೊಳಗೆ ಮಲಗಿದ್ದ ಯಜಮಾನ ಜೀವಂತ ದಹನ – Vishwanews24

ಪೊಲೀಸ್‌ ಉಪಾಧೀಕ್ಷಕ ವಿಟಲದಾಸ್‌ ಪೈ ಅವರು ಆರಂಭಿಕ ಹಂತದಲ್ಲಿ ತನಿಖೆ ನಡೆಸಿದ್ದರು. ಪೊಲೀಸ್‌ ಉಪಾಧೀಕ್ಷಕ ಉಮೇಶ್‌ ಜಿ. ಶೇಟ್‌ ತನಿಖೆ ಮುಂದುವರಿಸಿದ್ದರು. ಹಾಲಿ ಕಾರ್ಕಳ ಉಪವಿಭಾಗದ ಪೊಲೀಸ್‌ ಉಪಾಧೀಕ್ಷಕರಾಗಿದ್ದು ಈ ಹಿಂದೆ ಲೋಕಾಯುಕ್ತ ಪೊಲೀಸ್‌ ನಿರೀಕ್ಷಕರಾಗಿದ್ದ ಎಸ್‌.ವಿಜಯ ಪ್ರಸಾದ್‌ ಅವರು ತನಿಖೆ ಪೂರ್ಣಗೊಳಿಸಿ 2015ರ ಡಿ. 4ರಂದು ತನಿಖೆ ಪೂರ್ಣಗೊಳಿಸಿ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು.

ಕರ್ನಾಟಕ ಲೋಕಾಯುಕ್ತ ಮಂಗಳೂರಿನ ವಿಶೇಷ ಸಾರ್ವಜನಿಕ ಅಭಿಯೋಜಕ ರವೀಂದ್ರ ಮುನ್ನಿಪ್ಪಾಡಿ ಅವರು ಸರಕಾರದ ಪರವಾಗಿ ವಾದ ಮಂಡಿಸಿದ್ದಾರೆ

ಪ್ರವೀಣ್‌ ಹತ್ಯೆ ಪ್ರಕರಣ: NIA ದಾಳಿ ವೇಳೆ ಮದ್ದು ಗುಂಡು, ಸುಧಾರಿತ ಶಸ್ತ್ರಾಸ್ತ್ರಗಳು ಪತ್ತೆ – Vishwanews24

Vishwa News 24

Recent Posts

ಉಡುಪಿ : ಆ. 20 ರಂದು ನೇರ ಸಂದರ್ಶನ -vishwanews24

ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…

8 hours ago

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ -vishwanews24

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…

8 hours ago

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ -vishwanews24

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…

8 hours ago

ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ -vishwanews24

ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…

8 hours ago

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

2 days ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

2 days ago