ಮಂಗಳೂರು: ಆದಾಯಕ್ಕಿಂತ ಹೆಚ್ಚಿನ ಪ್ರಮಾಣದ ಆಸ್ತಿ ಹೊಂದಿದ ಪ್ರಕರಣದಲ್ಲಿ ನ್ಯಾಯಾಲಯವು ವಲಯ ಅರಣ್ಯಾಧಿಕಾರಿಗೆ 5 ವರ್ಷಗಳ ಸಾದಾ ಸಜೆ ಮತ್ತು 1.50 ಲ.ರೂ. ದಂಡ ವಿಧಿಸಿ ತೀರ್ಪು ನೀಡಿದೆ.
ಬೆಳ್ತಂಗಡಿ ಸಹ್ಯಾದ್ರಿ ವಲಯದ ವಲಯ ಅರಣ್ಯಾಧಿಕಾರಿಯಾಗಿದ್ದು ಪ್ರಸ್ತುತ ನಿವೃತ್ತರಾಗಿರುವ ಮಂಗಳೂರು ದೇರೆಬೈಲ್ ಕೊಂಚಾಡಿ ನಿವಾಸಿ ಎಸ್.ರಾಘವ ಪಾಟಾಳಿ ಶಿಕ್ಷೆಗೊಳಗಾದ ಅಪರಾಧಿ.
ಈತನ ವಿರುದ್ಧ ಮಂಗಳೂರು ಲೋಕಾಯುಕ್ತ ಪೊಲೀಸ್ ಠಾಣೆಯಲ್ಲಿ 2011ರ ಜು.21ರಂದು ಭ್ರಷ್ಟಾಚಾರ ತಡೆ ಕಾಯಿದೆ 1988ರಡಿ ಪ್ರಕರಣ ದಾಖಲಾಗಿತ್ತು. ಪ್ರಕರಣದ ವಿಚಾರಣೆ ನಡೆಸಿದ ಮಂಗಳೂರಿನ ಮೂರನೇ ಹೆಚ್ಚುವರಿ ಜಿಲ್ಲಾ ಸತ್ರ(ವಿಶೇಷ) ನ್ಯಾಯಾಲಯದ ನ್ಯಾಯಾಧೀಶರಾದ ಬಿ.ಬಿ.ಜಕಾತಿ ಅವರು ಶುಕ್ರವಾರದಂದು ಅಪರಾಧಿಗೆ 5 ವರ್ಷಗಳ ಸಾದಾ ಸಜೆ ಹಾಗೂ 1.50 ಕೋ.ರೂ. ದಂಡ, ದಂಡ ಪಾವತಿಸಲು ವಿಫಲನಾದರೆ ಮತ್ತೆ 1 ವರ್ಷ ಹೆಚ್ಚುವರಿ ಸಾದಾ ಶಿಕ್ಷೆ ವಿಧಿಸಿ ತೀರ್ಪು ನೀಡಿದ್ದಾರೆ.
ಪೊಲೀಸ್ ನಿರೀಕ್ಷಕ ಉದಯ ಎಂ.ನಾಯಕ್ ದೂರು ದಾಖಲಿಸಿದ್ದರು. ಪೊಲೀಸ್ ಉಪಾಧೀಕ್ಷಕ ವಿಟuಲ್ದಾಸ್ ಪೈ ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು. ಲೋಕಾಯುಕ್ತ ವಿಶೇಷ ಸಾರ್ವಜನಿಕ ಅಭಿಯೋಜಕ ರವೀಂದ್ರ ಮುನ್ನಿಪಾಡಿ ಸರಕಾರದ ಪರವಾಗಿ ವಾದ ಮಂಡಿಸಿದ್ದರು.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…