Featured

ಮಂಗಳೂರು: ಆನ್ ಲೈನ್ ಮುಖಾಂತರ ಕ್ರೆಡಿಟ್ ಕಾರ್ಡ್‌ನಿಂದ ಹಣ ವರ್ಗಾಯಿಸಿ ವಂಚನೆ – Vishwanews24

ಮಂಗಳೂರು: ಆನ್ ಲೈನ್ ಮುಖಾಂತರ ಕ್ರೆಡಿಟ್ ಕಾರ್ಡ್‌ನಿಂದ ಹಣ ವರ್ಗಾಯಿಸಿ ವಂಚನೆ

ಮಂಗಳೂರು: ವ್ಯಕ್ತಿಯೊಬ್ಬರ ಕ್ರೆಡಿಟ್‌ ಕಾರ್ಡ್‌ನಿಂದ 1.55 ಲ.ರೂ.ಗಳನ್ನು ಅನಧಿಕೃತವಾಗಿ ವರ್ಗಾಯಿಸಿ ವಂಚಿಸಿರುವ ಬಗ್ಗೆ ಮಂಗಳೂರಿನ ಸೆನ್‌ ಪೊಲೀಸ್‌ ಠಾಣೆಗೆ ದೂರು ನೀಡಲಾಗಿದೆ.

ದೂರುದಾರರು ಐಸಿಐಸಿಐ ಕ್ರೆಡಿಟ್‌ ಕಾರ್ಡ್‌ ಹೊಂದಿದ್ದು, ಅವರ ಮೊಬೈಲ್‌ಗೆ ಸೆ. 10ರಂದು ಹಲವು ಒಟಿಪಿಗಳ ಸಂದೇಶ ಬಂದಿದ್ದವು. ಅಲ್ಲದೆ ಅಪರಿಚಿತ ಸಂಖ್ಯೆಯಿಂದ ಕರೆ ಬಂದಿತ್ತು.

ಅವರು ಯಾವುದೇ ಕರೆ ಸ್ವೀಕರಿಸದೆ ಕೂಡಲೇ ತಮ್ಮ ಮೊಬೈಲ್‌ನಿಂದ ಐಸಿಐಸಿಐ ಆ್ಯಪ್‌ ತೆರೆದು ಕ್ರೆಡಿಟ್‌ ಕಾರ್ಡ್‌ ಬ್ಲಾಕ್‌ ಮಾಡಿದ್ದರು. ಅಲ್ಲದೆ ಐಸಿಐಸಿಐ ಕ್ರೆಡಿಟ್‌ ಕಾರ್ಡ್‌ನ ಕಸ್ಟಮರ್‌ ಕೇರ್‌ಗೆ ಕರೆ ಮಾಡಿ ಕಾರ್ಡ್‌ ಬ್ಲಾಕ್‌ ಮಾಡಿರುವ ಬಗ್ಗೆ ಖಚಿತಪಡಿಸಿಕೊಂಡಿದ್ದರು.

ಕಾರ್ಡ್‌ ಬ್ಲಾಕ್‌ ಆಗಿರುವ ಬಗ್ಗೆ ಈ ಮೇಲ್‌ ಕೂಡ ಕಸ್ಟಮರ್‌ ಕೇರ್‌ನವರಿಂದ ಬಂದಿತ್ತು. ಮರುದಿನ ರಾತ್ರಿ ಆ್ಯಪ್‌ ಮೂಲಕ ಕ್ರೆಡಿಟ್‌ ಕಾರ್ಡ್‌ನ ಸ್ಟೇಟಸ್‌ ನೋಡಿದಾಗ 1,60,401 ರೂ. ಔಟ್‌ಸ್ಟಾಂಡಿಂಗ್‌ ಇರುವುದಾಗಿ ತೋರಿಸಿತು. ಐಸಿಐಸಿಐ ಕ್ರೆಡಿಟ್ ಕಾರ್ಡ್ ನ ಕಸ್ಟಮರ್ ಕೇರ್ ಕರೆ ಮಾಡಿ ವಿಚಾರಿಸಿದಾಗ ಅನಧಿಕೃತ ಹಣ ವರ್ಗಾವಣೆ ಆದ ಬಗ್ಗೆ ದೂರು ಸ್ವೀಕರಿಸಿಕೊಂಡು ಸ್ವೀಕೃತಿ ನಂಬರ್ ಅನ್ನು ಮೌಖಿಕವಾಗಿ ನೀಡಿರುತ್ತಾರೆ. ಈ ರೀತಿಯಾಗಿ ಯಾರೋ ಅಪರಿಚಿತ ವ್ಯಕ್ತಿ ಐಸಿಐಸಿಐ ಕ್ರೆಡಿಟ್ ಕಾರ್ಡ್ ನಿಂದ ಅನಧಿಕೃತವಾಗಿ ಒಟ್ಟು 1,55,000/- ರೂಗಳನ್ನು ಆನ್ ಲೈನ್ ಮುಖಾಂತರ ಮೋಸದಿಂದ ವರ್ಗಾಯಿಸಿಕೊಂಡಿರುತ್ತಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

4 hours ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

4 hours ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

2 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

3 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

3 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

3 days ago