ಮಂಗಳೂರು: ನಗರದ ವೆನ್ಲಾಕ್ ಆಸ್ಪತ್ರೆಯ ಮಹಿಳಾ ಸೆಕ್ಯುರಿಟಿ ಸಿಬಂದಿ ಮೇಲೆ ಆಪದ್ಬಾಂಧವ ಸಂಘಟನೆಯ ಆಸೀಫ್ ಅನುಚಿತ ವರ್ತನೆ ತೋರಿ ಹಲ್ಲೆ ದೂರು ದಾಖಲಾಗಿದ್ದು, ಪ್ರಕರಣದ ದಾಖಲಿಸಿದ ಪೊಲೀಸರು ಆಸಿಫ್ ಅವರನ್ನು ಬಂಧಿಸಿದ್ದಾರೆ.
ಆಸಿಫ್ ಬುಧವಾರ ಸಂಜೆ ವೆನ್ಲಾಕ್ ಆಸ್ಪತ್ರೆಗೆ ಇಬ್ಬರು ರೋಗಿಗಳನ್ನು ಕರೆತಂದಿದ್ದರು. ಹೊರಗಡೆ ಆಂಬುಲೆನ್ಸ್ ನಿಲ್ಲಿಸಿ ರೋಗಿಗಳನ್ನು ಒಳಗಡೆ ಕರೆದೊಯ್ದು ಅಡ್ಮಿಶನ್ ಮಾಡುತ್ತಿದ್ದಾಗ ಸೆಕ್ಯುರಿಟಿ ಗಾರ್ಡ್ ಸಿಬಂದಿ ವಾಹನವನ್ನು ಹೊರಗೆ ಒಯ್ಯುವಂತೆ ಸೂಚಿಸಿದ್ದಾರೆ. ಆದರೆ ರೋಗಿಗಳನ್ನು ಅಡ್ಮಿಶನ್ ಮಾಡುತ್ತಿದ್ದೇನೆ, ಸ್ವಲ್ಪ ಹೊತ್ತು ಕಾಯಿರಿ ಎಂದು ಆಸಿಫ್ ಹೇಳಿದ್ದಾರೆ.
ಸ್ವಲ್ಪ ಹೊತ್ತಾದರೂ ಆಂಬುಲೆನ್ಸ್ ತೆರವು ಮಾಡದ್ದಕ್ಕೆ ಮಹಿಳಾ ಸಿಬಂದಿ ವಾಹನ ತೆಗೆಯುವಂತೆ ಹೇಳಿದ್ದು, ಆಸಿಫ್ ಮತ್ತು ಮಹಿಳಾ ಸಿಬಂದಿ ನಡುವೆ ಮಾತಿಗೆ ಮಾತಾಗಿತ್ತು. ಈ ವೇಳೆ, ಸಿಬಂದಿಯನ್ನು ದೂಡಿ ಕೈಮಾಡಿದ್ದಾರೆ ಎನ್ನಲಾಗುತ್ತಿದ್ದು, ಈ ಬಗ್ಗೆ ಆಸ್ಪತ್ರೆ ಕಡೆಯಿಂದ ಪೊಲೀಸರಿಗೆ ದೂರು ನೀಡಲಾಗಿತ್ತು. ಕೂಡಲೇ ಸ್ಥಳಕ್ಕೆ ಬಂದ ಪೊಲೀಸರು ಆರೋಪಿ ಆಸಿಫ್ ಅವರನ್ನು ಕರೆದೊಯ್ದಿದ್ದಾರೆ. ಪಾಂಡೇಶ್ವರ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…