Featured

ಮಂಗಳೂರು : ಆಳಸಮುದ್ರ ಮೀನುಗಾರಿಕೆ ಆರಂಭ; ಮಲ್ಪೆಯಲ್ಲಿ ಕಡಲಿಗಿಳಿಯದ ದೋಣಿಗಳು – vishwanews24

ಮಂಗಳೂರು : ಆಳಸಮುದ್ರ ಮೀನುಗಾರಿಕೆ ಆರಂಭ

ಮಲ್ಪೆಯಲ್ಲಿ ಇನ್ನೂ ಸಮುದ್ರಕ್ಕಿಳಿಯದ ಮೀನುಗಾರಿಕಾ ದೋಣಿಗಳು

ಮಂಗಳೂರು/ಉಡುಪಿ: ಮೀನುಗಾರಿಕೆ ನಿಷೇಧ ತೆರವಾಗಿರುವ ಮೂರನೇ ದಿನವಾದ ಸೋಮವಾರ ಮಂಗಳೂರಿನಲ್ಲಿ ಆಳ ಸಮುದ್ರ ಮೀನುಗಾರಿಕೆ ಚಟುವಟಿಕೆಗಳು ಪುನರಾರಂಭಗೊಂಡಿದ್ದು, ಸುಮಾರು 100 ಟ್ರಾಲ್ ಬೋಟ್‌ಗಳು ಹಳೆ ಮಂಗಳೂರು ಮೀನುಗಾರಿಕಾ ಬಂದರಿನಿಂದ ಉತ್ತಮ ಮೀನುಗಾರಿಕೆ ಋತುವಿನ ನಿರೀಕ್ಷೆಯೊಂದಿಗೆ ಸಮುದ್ರದತ್ತ ಪ್ರಯಾಣ ಬೆಳೆಸಿವೆ.

ಕಳೆದ ಎರಡು ದಿನಗಳಿಂದ ಸಮುದ್ರದಲ್ಲಿ ಪ್ರಕ್ಷುಬ್ಧ ವಾತಾವರಣ ಮತ್ತು ಬಲವಾದ ಗಾಳಿಯಿಂದಾಗಿ ಈ ಬೋಟ್‌ಗಳು ಬಂದರಿನಲ್ಲೇ ನಿಲ್ಲಿಸಲಾಗಿತ್ತು. ಡೀಸೆಲ್ ಮತ್ತು ಐಸ್ ಸೇರಿದಂತೆ ಅಗತ್ಯ ಸಿದ್ಧತೆಗಳನ್ನು ಪೂರ್ಣಗೊಳಿಸಿದ್ದರೂ, ಪ್ರತಿಕೂಲ ಹವಾಮಾನದಿಂದಾಗಿ ಸಮುದ್ರಕ್ಕೆ ಇಳಿಯಲು ಸಾಧ್ಯವಾಗಿರಲಿಲ್ಲ. ಸೋಮವಾರ ಹವಾಮಾನದಲ್ಲಿ ಸ್ವಲ್ಪ ಮಟ್ಟಿನ ಸುಧಾರಣೆ ಕಂಡುಬಂದ ಹಿನ್ನೆಲೆಯಲ್ಲಿ ಟ್ರಾಲ್ ಬೋಟ್‌ಗಳು ಒಂದೊಂದಾಗಿ ಅಳಿವೆ ಬಾಗಿಲಿನ ಮೂಲಕ ಸಮುದ್ರಕ್ಕಿಳಿದಿವೆ.

ಉತ್ತಮ ಮೀನುಗಾರಿಕೆ ನಿರೀಕ್ಷೆಯೊಂದಿಗೆ ಸಮುದ್ರಕ್ಕೆ ತೆರಳಿರುವ ಈ ಬೋಟ್‌ಗಳು ಸುಮಾರು 10 ದಿನಗಳ ಬಳಿಕ ಮರಳಿ ಬಂದರಿಗೆ ಆಗಮಿಸುವ ನಿರೀಕ್ಷೆಯಿದೆ. ಆಳ ಸಮುದ್ರದಲ್ಲಿ ಮೀನು ಸಂಪತ್ತು ಲಭ್ಯತೆಗೆ ಅನುಗುಣವಾಗಿ ಇನ್ನಷ್ಟು ಬೋಟ್‌ಗಳು ಸಮುದ್ರಕ್ಕಿಳಿಯಲಿವೆ ಎಂದು ಮೀನುಗಾರರು ತಿಳಿಸಿದ್ದಾರೆ.

ಮಲ್ಪೆಯಲ್ಲಿ ಇನ್ನೂ ಸಮುದ್ರಕ್ಕಿಳಿಯದ ಮೀನುಗಾರಿಕಾ ದೋಣಿಗಳು
ಇನ್ನೊಂದೆಡೆ, ಸರ್ಕಾರ ಆಗಸ್ಟ್ 1ರಿಂದ ಯಾಂತ್ರೀಕೃತ ಮೀನುಗಾರಿಕೆಗೆ ವಿಧಿಸಿದ್ದ ನಿಷೇಧವನ್ನು ತೆರವುಗೊಳಿಸಿದ್ದರೂ, ಮಲ್ಪೆ ಮೀನುಗಾರಿಕಾ ಬಂದರಿನಿಂದ ಯಾವುದೇ ವರ್ಗದ ಮೀನುಗಾರಿಕಾ ದೋಣಿಗಳೂ ಇನ್ನೂ ಸಮುದ್ರಕ್ಕೆ ಇಳಿದಿಲ್ಲ.

ಸಮುದ್ರ ಇನ್ನೂ ಪ್ರಕ್ಷುಬ್ಧವಾಗಿದ್ದು, ಬಲವಾದ ಗಾಳಿಯಿಂದಾಗಿ ಆಳ ಸಮುದ್ರದಲ್ಲಿ ಭಾರಿ ಅಲೆಗಳು ಏಳುತ್ತಿವೆ. ಈ ಪರಿಸ್ಥಿತಿಯಲ್ಲಿ ಮೀನುಗಾರಿಕಾ ಬಲೆಗಳನ್ನು ಹಾಕಲು ಸಾಧ್ಯವಾಗದ ಕಾರಣ ದೋಣಿಗಳನ್ನು ಸಮುದ್ರಕ್ಕಿಳಿಸಲು ಮೀನುಗಾರರು ಹಿಂದೇಟು ಹಾಕುತ್ತಿದ್ದಾರೆ ಎಂದು ತಿಳಿದುಬಂದಿದೆ.

Vishwa News 24

Recent Posts

ಬೆಳ್ತಂಗಡಿ: ಸಾರ್ವಜನಿಕ ಸ್ಥಳದಲ್ಲಿ ಮಾದಕ ವಸ್ತು ಸೇವನೆ; ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲು – vishwanews24

ಬೆಳ್ತಂಗಡಿ: ಸಾರ್ವಜನಿಕ ಸ್ಥಳದಲ್ಲಿ ಮಾದಕ ವಸ್ತು ಸೇವನೆ; ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲು ಬೆಳ್ತಂಗಡಿ: ಸಾರ್ವಜನಿಕ ಸ್ಥಳದಲ್ಲಿ ನಿಷೇಧಿತ ಮಾದಕ…

8 minutes ago

ಕಾಪು: ಜಿಲ್ಲಾಧಿಕಾರಿಗಳಿಂದ ಕಡಲ್ಕೊರೆತ ಪರಿಶೀಲನೆ: ತುರ್ತು ಕಾಮಗಾರಿಗೆ 2 ಕೋ. ರೂ. ಬಿಡುಗಡೆ – vishwanews24

ಕಾಪು: ಜಿಲ್ಲಾಧಿಕಾರಿಗಳಿಂದ ಕಡಲ್ಕೊರೆತ ಪರಿಶೀಲನೆ: ತುರ್ತು ಕಾಮಗಾರಿಗೆ 2 ಕೋ. ರೂ. ಬಿಡುಗಡೆ ಉಡುಪಿ: ತಾಲೂಕಿನಲ್ಲಿ ಕಡಲ್ಕೊರೆತದಿಂದ ಹಾನಿಗೊಳಗಾಗಿರುವ ಹೆಜಮಾಡಿ,…

15 minutes ago

ಉಡುಪಿ: ಪುಷ್ಪಾನಂದ ಫೌಂಡೇಶನ್ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ : ಯಶ್ಪಾಲ್ ಸುವರ್ಣ – vishwanews24

ಉಡುಪಿ: ಪುಷ್ಪಾನಂದ ಫೌಂಡೇಶನ್ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ : ಯಶ್ಪಾಲ್ ಸುವರ್ಣ ಉಡುಪಿ: ಪುಷ್ಪಾನಂದ ಫೌಂಡೇಶನ್ ವತಿಯಿಂದ 2025-2026ನೇ…

37 minutes ago

ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆ; ಯೆಲ್ಲೋ ಅಲರ್ಟ್ ಘೋಷಣೆ – vishwanews24

ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆ; ಯೆಲ್ಲೋ ಅಲರ್ಟ್ ಘೋಷಣೆ ಮಂಗಳೂರು/ಉಡುಪಿ: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ…

40 minutes ago

ಉಡುಪಿ: ವ್ಯಕ್ತಿ ನಾಪತ್ತೆ – vishwanews24

ಉಡುಪಿ: ವ್ಯಕ್ತಿ ನಾಪತ್ತೆ      ಉಡುಪಿ: ಕುಂದಾಪುರ ತಾಲೂಕು ತೆಕ್ಕಟ್ಟೆ ಗ್ರಾಮದ ಹರಿಕಾರಬೆಟ್ಟು ನಿವಾಸಿ ಲಕ್ಷö್ಮಣ ಪೂಜಾರಿ (37) ಎಂಬವರು ಕೂಲಿ…

48 minutes ago

ಮಣ್ಣು ತೆರವು ಕಾರ್ಯ ಪೂರ್ಣ : ಮಂಗಳೂರು-ಬೆಂಗಳೂರು ರೈಲು ಸಂಚಾರ ಪುನರಾರಂಭ – vishwanews24

ಮಣ್ಣು ತೆರವು ಕಾರ್ಯ ಪೂರ್ಣ : ಮಂಗಳೂರು-ಬೆಂಗಳೂರು ರೈಲು ಸಂಚಾರ ಪುನರಾರಂಭ ಮಂಗಳೂರು: ಎಡಕುಮೇರಿ ಮತ್ತು ಸಿರಿಬಾಗಿಲು ನಡುವಿನ ಭೂಕುಸಿತದಿಂದ ಹಾನಿಗೊಳಗಾದ…

53 minutes ago