ಮಂಗಳೂರು, : ಕೇಂದ್ರದ ಮಾಜಿ ಸಚಿವ ಹಾಗೂ ಕಾಂಗ್ರೆಸ್ ಹಿರಿಯ ನಾಯಕ ಆಸ್ಕರ್ ಫರ್ನಾಂಡಿಸ್ ಅವರು ಯೋಗಭ್ಯಾಸದ ಸಂದರ್ಭ ಬಿದ್ದು ತಲೆಗೆ ಏಟಾಗಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಆಸ್ಕರ್ ಆರೋಗ್ಯ ವಿಚಾರಣೆಗೆ ಯಾರೂ ಆಸ್ಪತ್ರೆಗೆ ಬರಬೇಡಿ ಎಂದು ಉಡುಪಿ ಜಿಲ್ಲಾಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ಮನವಿ ಮಾಡಿಕೊಂಡಿದ್ದಾರೆ.
ಈ ಕುರಿತು ಮಾತನಾದಿದ ಅವರು, “ಆಸ್ಕರ್ ಆರೋಗ್ಯ ವಿಚಾರಣೆ ಮಾಡಲು ಕಾರ್ಯಕರ್ತರು, ಅಭಿಮಾನಿಗಳು ಸೇರಿದಂತೆ ಸಾವಿರಾರು ಆಸ್ಪತ್ರೆಗೆ ಭೇಟಿ ನೀಡುತ್ತಿದ್ದು, ಆಸ್ಕರ್ ಅವರ ಆರೋಗ್ಯಕ್ಕೆ ತೊಂದರೆಯಾಗುತ್ತಿದ್ದು, ಅವರ ವೈದ್ಯಕೀಯ ಚಿಕಿತ್ಸೆಗೂ ತೊಂದರೆಗಳು ಉಂಟಾಗುತ್ತಿದೆ. ಜೊತೆಗೆ ಕೊರೊನಾ ಹಿನ್ನಲೆಯಲ್ಲೂ ಆಸ್ಪತ್ರೆಗೆ ಸಾವಿರಾರು ಮಂದಿ ಆಗಮಿಸುವುದು ಸರಿಯಲ್ಲ” ಎಂದಿದ್ದಾರೆ.
ಇನ್ನು “ವೈದ್ಯರು ಕೂಡ ಸಲಹೆ ನೀಡಿದ್ದು, ಅಭಿಮಾನಿಗಳು ಇದ್ದಲ್ಲಿಯೇ ಆಸ್ಕರ್ ಅವರ ಆರೋಗ್ಯಕ್ಕಾಗಿ ಪ್ರಾರ್ಥಿಸಿ” ಎಂದು ಮನವಿ ಮಾಡಿಕೊಂಡಿದ್ದಾರೆ.
ಆಸ್ಕರ್ ಫೆರ್ನಾಂಡೀಸ್ ಅವರಿಗೆ ಗಂಭೀರ ಸ್ಥಿತಿಯಲ್ಲಿರುವಾಗ ಡಯಾಲಿಸಿಸ್ ಮಾಡಲು ಸಾಧ್ಯವಾಗಿರಲಿಲ್ಲ. ಆದರೆ ಬುಧವಾರ ಅವರ ಕೈಯಲ್ಲಿ ಚಲನೆ ಕಂಡು ಬಂದಿದ್ದು, ವೈದ್ಯರು ಅವರಿಗೆ ಡಯಾಲಿಸಿಸ್ ಮಾಡಲು ಮುಂದಾಗಿದ್ದಾರೆ. ಅದರಂತೆ ಬುಧವಾರ ಒಂದು ಹಂತದ ಡಯಾಲಿಸಿಸ್ ನಡೆದಿದ್ದು, ಡಯಾಲಿಸಿಸ್ ಚಿಕಿತ್ಸೆ ಪೂರ್ಣಗೊಂಡ ನಂತರವೇ ಸರ್ಜರಿ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಇನ್ನು ಹಿರಿಯ ನಾಯಕರಾದ ದಿಗ್ವಿಜಯ ಸಿಂಗ್, ಅಶೋಕ್ ಗೆಹ್ಲೋಟ್ ಅವರು ಆಸ್ಕರ್ ಕುಟುಂಬಕ್ಕೆ ದೂರವಾಣಿ ಕರೆ ಮಾಡಿ ಆರೋಗ್ಯ ವಿಚಾರಿಸಿದ್ದಾರೆ ಎನ್ನಲಾಗಿದೆ.
ಉದ್ಯಾವರ : ಪಾಪನಾಶಿನಿ ಹೊಳೆಯ ಸೇತುವೆಯ ಮೇಲೆ ಸ್ಕೂಟರ್ ಪತ್ತೆ ; ವ್ಯಕ್ತಿ ಹೊಳೆಗೆ ಹಾರಿರುವ ಶಂಕೆ ಉಡುಪಿ: ಉದ್ಯಾವರ…
ಮಂಗಳೂರು: ಕಾಂಗ್ರೆಸ್ ಗಾಗಿ ಕೆಲಸ ಮಾಡದವರು ಪಕ್ಷದ ಬಗ್ಗೆ ಮಾತನಾಡುವುದು ಬೇಡ: ಸಚಿವ ಯು.ಟಿ.ಖಾದರ್ ಮಂಗಳೂರು: ಕಾಂಗ್ರೆಸ್ ಪಕ್ಷಕ್ಕಾಗಿ ಕೆಲಸ…
ಉಡುಪಿ: ನೀಟ್ ಪರೀಕ್ಷೆಗೆ ತಡವಾಗಿ ಬಂದ ವಿದ್ಯಾರ್ಥಿನಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದ ಶಾಸಕ ಯಶ್ಪಾಲ್ ಸುವರ್ಣಗೆ ವ್ಯಾಪಕ ಶ್ಲಾಘನೆ…
ಕಾರ್ಕಳ :ಯಕ್ಷರಂಗಾಯಣ ದ ಹೆಸರು ಬದಲಾವಣೆಗೆ ಶಾಸಕ ಸುನಿಲ್ ಕುಮಾರ್ ಆಕ್ರೋಶ ಮೂಲ ಹೆಸರನ್ನೇ ಉಳಿಸಿಕೊಳ್ಳಲು ಸರಕಾರಕ್ಕೆ ಆಗ್ರಹ ಕಾರ್ಕಳ:…
ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ ಕೋಲ್ಕತ್ತಾ : ಪಶ್ಚಿಮ ಬಂಗಾಳದ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಅವರನ್ನು…
ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ ಉಡುಪಿ :…