Featured

ಮಂಗಳೂರು: ಆ.1 ರಿಂದ ಮೀನುಗಾರಿಗೆ ಋುತು ಆರಂಭ: ಆ. 9ರ ಸಮುದ್ರ ಪೂಜೆಯ ನಂತರ ಪರ್ಸಿನ್‌ ಮೀನುಗಾರಿಕೆ  – vishwanews24

ಮಂಗಳೂರು: ಆ.1 ರಿಂದ ಮೀನುಗಾರಿಗೆ ಋುತು ಆರಂಭ: ಆ. 9ರ ಸಮುದ್ರ ಪೂಜೆಯ ನಂತರ ಪರ್ಸಿನ್‌ ಮೀನುಗಾರಿಕೆ

ಮಂಗಳೂರು: 2 ತಿಂಗಳ ನಿಷೇಧದ ಬಳಿಕ ಕರಾವಳಿಯಲ್ಲಿ ಆಗಸ್ಟ್ 1 ರಿಂದ 2025ರ ಸಾಲಿನ ಮೀನುಗಾರಿಕೆ ಋತು ಆರಂಭವಾಗಲಿದೆ. ಹವಾಮಾನದ ವೈಪರೀತ್ಯಗಳನ್ನು ಗಮನದಲ್ಲಿಟ್ಟುಕೊಂಡು ಟ್ರಾಲ್ ಬೋಟ್‌ಗಳು ಮೀನುಗಾರಿಕೆಗೆ ಸಿದ್ಧವಾಗುತ್ತಿವೆ. ಆದರೆ ಪರ್ಸಿನ್ ಬೋಟ್‌ಗಳು ಆಗಸ್ಟ್ 9ರ ಸಮುದ್ರ ಪೂಜೆಯ ನಂತರವಷ್ಟೇ ಸಮುದ್ರಕ್ಕೆ ಇಳಿಯಲು ನಿರ್ಧರಿಸಿವೆ. ಈ ಬಾರಿ ಉತ್ತಮ ಮೀನುಗಾರಿಕೆ ನಿರೀಕ್ಷೆಯಲ್ಲಿದ್ದಾರೆ.

ಒಂದೂವರೆ ತಿಂಗಳಿಂದ ಭಾರಿ ಮಳೆ ಗಾಳಿ ಇತ್ತಾದರೂ, ಎರಡು ದಿನಗಳಿಂದ ಬಿಸಿಲು ಬಂದಿದ್ದು, ಮೀನುಗಾರಿಕೆ ಅನುಕೂಲವಾಗಿದೆ..ಫೆಬ್ರವರಿ ತಿಂಗಳನಿಂದಲೇ ಬಿಸಿಲಿನ ಝಳದಿಂದಾಗಿ ಮೀನು ಸಂಗ್ರಹದಲ್ಲಿ ತೀವ್ರ ಇಳಿಕೆಯಾಗಿ ಮೀನುಗಾರರು ಕಂಗಾಲಾಗಿದ್ದರು. ಸರಕಾರಿ ನಿಯಮದಂತೆ ಆ.1ರಿಂದ ಮೀನುಗಾರಿಕೆ ಆರಂಭಗೊಳ್ಳಲಿದೆ. ಟ್ರಾಲ್‌ ಬೋಟ್‌ಗಳು ಅಂದು ಹವಾಮಾನ ಇಲಾಖೆಯ ವರದಿ ಗಮನಿಸಿ ಮೀನುಗಾರಿಕೆಗೆ ತೆರಳಲಿದ್ದಾರೆ.

ಮೀನುಗಾರಿಕೆ ಇಲಾಖೆ ನಿಯಮದಂತೆ ಆ.1ರಿಂದ ಮೀನುಗಾರಿಕೆ ಆರಂಭಿಸಬಹುದು. ಅಂದೇ ತೆರಿಗೆ ರಹಿತ ಡೀಸೆಲ್‌ ಪೂರೈಕೆ ಮಾಡಲಿದ್ದು, ಟ್ರಾಲ್‌ ಬೋಟ್‌ನವರು ಕಡಲಿಗೆ ಇಳಿಯಲಿದ್ದು, ಮಂಜುಗಡ್ಡೆ ತುಂಬಿಸುವ, ಬಲೆ ಸರಿಪಡಿಸುವ ಕಾರ್ಯ ನಡೆಯುತ್ತಿದೆ.

ಒಂದೂವರೆ ತಿಂಗಳಿಂದ ಭಾರಿ ಮಳೆ ಗಾಳಿ ಇತ್ತಾದರೂ, ಎರಡು ದಿನಗಳಿಂದ ಬಿಸಿಲು ಬಂದಿದ್ದು, ಮೀನುಗಾರಿಕೆ ಅನುಕೂಲವಾಗಿದೆ. ರಜೆಯಲ್ಲಿ ಊರಿಗೆ ಮರಳಿದ್ದ ಹೊರ ರಾಜ್ಯಗಳ ಕಾರ್ಮಿಕರು ವಾಪಸಾಗುತ್ತಿದ್ದು, ದಕ್ಕೆ ಪ್ರದೇಶಗಳಲ್ಲಿ ಟ್ರಾಲ್‌ ಹಾಗೂ ಪರ್ಸೀನ್‌ ಬೋಟ್‌ಗಳನ್ನು ಸಿದ್ಧಗೊಳಿಸಲಾಗುತ್ತಿದೆ.

ಕಳೆದ ಅವಧಿಯಲ್ಲಿ ಹವಾಮಾನ ವೈಪರೀತ್ಯದ ಜತೆಗೆ ಫೆಬ್ರವರಿ ತಿಂಗಳನಿಂದಲೇ ಬಿಸಿಲಿನ ಝಳದಿಂದಾಗಿ ಮೀನು ಸಂಗ್ರಹದಲ್ಲಿ ತೀವ್ರ ಇಳಿಕೆಯಾಗಿ ಮೀನುಗಾರರು ಕಂಗಾಲಾಗಿದ್ದರು. ಈ ಬಾರಿ ಉತ್ತಮ ಮೀನುಗಾರಿಕೆಯ ನಿರೀಕ್ಷೆಯೊಂದಿಗೆ ಧಕ್ಕೆ ಪ್ರದೇಶಗಳಲ್ಲಿ ಮೀನುಗಾರರು ಪೈಂಟಿಂಗ್‌, ಎಂಜಿನ್‌ ದುರಸ್ತಿ, ಬಲೆ ದುರಸ್ತಿ, ಡೀಸೆಲ್‌ ಪಡೆಯಲು ಬೇಕಾದ ಪ್ರಕ್ರಿಯೆಗಳು ಸೇರಿದಂತೆ ಬೋಟುಗಳನ್ನು ಕಡಲಿಗಿಳಿಸಲು ಪೂರ್ವ ಸಿದ್ಧತೆಗಳನ್ನು ನಡೆಸುತ್ತಿದ್ದಾರೆ.

ಯಾಂತ್ರೀಕೃತ ಮೀನುಗಾರಿಕೆ ನಿಷೇಧ ಸಂದರ್ಭ ಕರಾವಳಿಯಲ್ಲಿ ಸಾಂಪ್ರದಾಯಿಕ ದೋಣಿಗಳ ಮೂಲಕ ನಡೆಸಲಾಗುವ ನಾಡದೋಣಿ ಮೀನುಗಾರಿಕೆ ಚುರುಕು ಪಡೆಯುತ್ತದೆ. ಎರಡು ತಿಂಗಳ ಅವಧಿಯಲ್ಲಿಹವಾಮಾನ ವೈಪರೀತ್ಯದ ಹಿನ್ನೆಲೆಯಲ್ಲಿ ನಾಡದೋಣಿ ಮೀನುಗಾರಿಕೆಯೂ ಕ್ಷೀಣವಾಗಿದೆ.

ಮಾರುಕಟ್ಟೆಗಳಲ್ಲಿ ತಾಜಾ ಮೀನಿನ ಕೊರತೆ ಜತೆಗೆ ಮೀನಿನ ದರವೂ ಮೀನು ಪ್ರಿಯರನ್ನು ಕಂಗೆಡಿಸಿದೆ. ಪ್ಯಾಕ್‌ ಮಾಡಿ ಐಸ್‌ನಲ್ಲಿಇರಿಸಲಾದ ಮೀನಿನ ಜತೆಗೆ ತಮಿಳುನಾಡು, ಆಂಧ್ರಪ್ರದೇಶ, ಗುಜರಾತ್‌, ಒಡಿಸಾ ರಾಜ್ಯಗಳ ತಾಜಾ ಮೀನು ಮಾರುಕಟ್ಟೆಗೆ ಬರುತ್ತಿದೆ. ದರವೂ ಏರಿಳಿತ ಕಾಣುತ್ತಿದೆ.

2024-25ನೇ ಸಾಲಿನ ಆಗಸ್ಟ್‌ನಿಂದ ಮಾರ್ಚ್ ವರೆಗೆ ಮೀನುಗಾರಿಕೆಯಲ್ಲಿ ಭಾರಿ ಕುಸಿತ ಕಂಡು ಬಂದಿತ್ತು. ಮೀನುಗಾರಿಕಾ ಇಲಾಖೆ ಮಾಹಿತಿ ಪ್ರಕಾರ, 2025ರ ಏಪ್ರಿಲ್‌ನಲ್ಲಿ 7100 ಮೆಟ್ರಿಕ್‌ ಟನ್‌ ಮೀನು ಸಂಗ್ರಹವಾಗಿದ್ದರೆ, ಮೇ ತಿಂಗಳಲ್ಲಿ 6210 ಮೆಟ್ರಿಕ್‌ ಟನ್‌ ಮೀನುಗಾರಿಕೆಯಾಗಿದೆ. 2023-24ರಲ್ಲಿ 2.39 ಲಕ್ಷ ಟನ್‌, 2024-25ರಲ್ಲಿ 1.72 ಲಕ್ಷ ಟನ್‌ ಮೀನುಗಾರಿಕೆಯಾಗಿದೆ.

ಮಂಗಳೂರು ದಕ್ಕೆಯನ್ನು ಪ್ರಧಾನ ಮಂತ್ರಿ ಮತ್ಸ್ಯ ಸಮೃದ್ಧಿ ಯೋಜನೆಯಡಿ 37.50 ಕೋಟಿ ರೂ. ಮೊತ್ತದಲ್ಲಿಆಧುನೀಕರಣ ಮತ್ತು ಮೂರನೇ ಹಂತದ ದಕ್ಕೆ ಕಾಮಗಾರಿ ಕೂಡಾ ನಡೆಯಲಿದೆ. ಬಹಳ ಹಳೆಯ ಹರಾಜು ಪ್ರಾಂಗಣ ತೆರವು ಮಾಡಲಾಗಿದೆ. ರಸ್ತೆ ದುರಸ್ತಿ ಕಾಮಗಾರಿ ನಡೆಯುತ್ತಿದ್ದು, ಮೀನುಗಾರಿಕೆ ಆರಂಭದ ವೇಳೆ ಅಡಚಣೆಯಾಗಲಿದೆ.

ಈ ಪ್ರಕರಣವನ್ನು ಮುಂಬೈ ಭಯೋತ್ಪಾದಕ ನಿಗ್ರಹ ಪಡೆ ಪ್ರಾಥಮಿಕ ತನಿಖೆ ನಡೆಸಿತ್ತು. ನಂತರ ತನಿಖೆಯ ಹೊಣೆಯನ್ನು ಎನ್‌ಐಎ ವಹಿಸಿಕೊಂಡಿತ್ತು. ಬಿಜೆಪಿ ಮಾಜಿ ಸಂಸದೆ ಪ್ರಜ್ಞಾಸಿಂಗ್ ಠಾಕೂರ್, ಮಾಜಿ ಸೇನಾಧಿಕಾರಿ ಪ್ರಸಾದ್ ಪುರೋಹಿತ್ (ನಿವೃತ್ತ), ಮೇಜರ್ ರಮೇಶ್ ಉಪಾಧ್ಯಾಯ (ನಿವೃತ್ತ) ಸೇರಿದಂತೆ ಏಳು ಮಂದಿ ಆರೋಪಿಗಳ ಮೇಲೆ ಐಪಿಸಿ, ಯುಎಪಿಎ ಅನ್ವಯ ಆರೋಪ ಹೊರಿಸಲಾಗಿತ್ತು.

Vishwa News 24

Recent Posts

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ – vishwanews24

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…

4 hours ago

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

1 day ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

1 day ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

1 day ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

1 day ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

1 day ago