Featured

ಮಂಗಳೂರು : ಇಂದು ಸಂಜೆ 6 ರಿಂದ ನಾಳೆ ಬೆಳಿಗ್ಗೆ 6 ಗಂಟೆಯವರೆ ಮಂಗಳೂರಿನಲ್ಲಿ ಸೆಕ್ಷನ್ 144 ಜಾರಿ -Vishwanews24

ಮಂಗಳೂರು : ಇಂದು ಸಂಜೆ 6 ರಿಂದ ನಾಳೆ ಬೆಳಿಗ್ಗೆ 6 ಗಂಟೆಯವರೆ ಮಂಗಳೂರಿನಲ್ಲಿ ಸೆಕ್ಷನ್ 144 ಜಾರಿ -Vishwanews24

ಮಂಗಳೂರು : ಕೊರೊನಾ ಸೊಂಕು ನಿಯಂತ್ರಣಕ್ಕೆ ಮುಂಜಾಗೃತಾ ಕ್ರಮವಾಗಿ ಮಂಗಳೂರು ನಗರದಾದ್ಯಂತ ಇಂದು ಸಂಜೆ 6 ರಿಂದ ಸೆಕ್ಷನ್ 144 ಅನ್ವಯ ನಿಷೇಧಾಜ್ಞೆಯನ್ನು ಜಾರಿ ಮಾಡಲಾಗಿದೆ. ಈ ಕುರಿತಂತೆ ಮಾಹಿತಿ ನೀಡಿದ ಮಂಗಳೂರು ನಗರ ಪೊಲೀಸ್‌ ಆಯುಕ್ತ ವಿಕಾಸ್‌ ಕುಮಾರ್‌ ಡಿಸೆಂಬರ್ 31ರ ಸಂಜೆ 6 ಗಂಟೆಯಿಂದ ಜನವರಿ 1ರ ಬೆಳಿಗ್ಗೆ 6 ಗಂಟೆಯವರೆಗೆ ಈ ಆದೇಶ ಜಾರಿಯಲ್ಲಿರುತ್ತದೆ ಎಂದು ತಿಳಿಸಿದ್ದಾರೆ.

ಇನ್ನು ಹೊಸ ವರ್ಷಚರಣೆಯ ನೆಪದಲ್ಲಿ ಐದಕ್ಕಿಂದ ಹೆಚ್ಚು ಜನ ಸೇರುವುದು, ಸಾರ್ವಜನಿಕ ಸ್ಥಳ, ರಸ್ತೆ, ಬೀಚ್‌‌ ಹಾಗೂ ಮೈದಾನಗಳಲ್ಲಿ ಹೊಸ ವರ್ಷಾಚರಣೆ, ಜನ ಸೇರಿಸಿ ಹೊಸ ವರ್ಷಆಚರಣೆ ಮಾಡುವುದಕ್ಕೆ ಸಂಪೂರ್ಣ ನಿರ್ಭಂಧ ಹೇರಲಾಗಿದೆ. ವಸತಿ ಸಮುಚ್ಚಯ, ಖಾಸಗಿ ಕ್ಲಬ್‌‌ಗಳಲ್ಲಿ ವಿಶೇಷ ಕಾರ್ಯಕ್ರಮ ಆಯೋಜನೆಗೆ ಅವಕಾಶವಿಲ್ಲ. ಹೊಟೇಲ್‌‌, ಬಾರ್‌, ಪಬ್‌, ಮಾಲ್‌ಗಳಲ್ಲಿ ಡಿಜೆ, ಮ್ಯೂಸಿಕಲ್‌‌ ನೈಟ್‌ಗಳಿಗೆ ನಿಬಂಧ, ಇವುಗಳಲ್ಲಿ ಪ್ರತಿನಿತ್ಯದ ವ್ಯವಹಾರಕಷ್ಟೇ ಅನುಮತಿಸಲಾಗಿದೆ ಎಂದು ತಿಳಿಸಿದ್ದಾರೆ.

ಈ ನಡುವೆ ಈಗಾಗಲೇ ಹೊಸವರ್ಷ ಸಂದರ್ಭದಲ್ಲಿ ಜಿಲ್ಲೆಯ ಎಲ್ಲಾ ಕಡಲ ತೀರ ಪ್ರದೇಶಗಳಲ್ಲಿ ಅತೀ ಹೆಚ್ಚು ಜನಸಂದಣಿ ಸೇರುವುದರಿಂದ ಸೋಂಕು ಹರಡುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಜಲ್ಲೆಯ ಉಳ್ಳಾಲ, ಸೋಮೇಶ್ವರ, ಮೊಗವೀರಪಟ್ಣ, ಪಣಂಬೂರು, ತಣ್ಣೀರುಬಾವಿ, ಸಸಿಹಿತ್ಲು ಮತ್ತು ಸುರತ್ಕಲ್ ಬೀಚ್‍ಗಳಿಗೆ/ ಎಲ್ಲಾ ಕಡಲ ಕಿನಾರೆಗಳಿಗೆ ಡಿಸೆಂಬರ್ 31 ರಂದು ಮಧ್ಯಾಹ್ನ 12 ಗಂಟೆಯಿಂದ ಜನವರಿ 2 ರಂದು ಮಧ್ಯಾಹ್ನ 12 ಗಂಟೆಯವರೆಗೆ ಸ್ಥಳೀಯ ಹಾಗೂ ಸಾಂಪ್ರದಾಯಿಕ ಮೀನುಗಾರರನ್ನು ಹೊರತು ಪಡಿಸಿ ಇತರೇ ಯಾವುದೇ ಪ್ರವಾಸಿಗರು ಹಾಗೂ ಸಾರ್ವಜನಿಕರು ಪ್ರವೇಶಿಸುವುದನ್ನು ನಿಷೇಧಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.

Vishwa News 24

Recent Posts

ಉಡುಪಿ : ಆ. 20 ರಂದು ನೇರ ಸಂದರ್ಶನ -vishwanews24

ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…

10 hours ago

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ -vishwanews24

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…

10 hours ago

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ -vishwanews24

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…

11 hours ago

ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ -vishwanews24

ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…

11 hours ago

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

2 days ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

2 days ago