ಮಂಗಳೂರು: “ಇಡಿ ಇಲಾಖೆಯನ್ನು ರಾಜಕೀಯ ದುರುದ್ದೇಶಕ್ಕೆ ಬಳಸಿರುವ ಬಿಜೆಪಿ ದೇಶದ ಸಂವಿಧಾನವನ್ನು ಗಾಳಿಗೆ ತೂರಿದೆ ಬಿಜೆಪಿಗೆ ದೇಶದಲ್ಲಿ ಆಡಳಿತ ನಡೆಸಲು ಅರ್ಹತೆ ಇಲ್ಲ. ಸುಪ್ರೀಂ ಕೋರ್ಟ್ ಇಡಿ ದುರ್ಬಳಕೆ ಮಾಡಿರುವುದನ್ನು ಹೇಳಿದ್ದರಿಂದ ಬಿಜೆಪಿ ಸಪಬರಹ ಜಗಜ್ಜಾಹೀರಾಗಿದೆ ಎಂದು ವಿಧಾನ ಪರಿಷತ್ ಶಾಸಕ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು
ಇಡಿಯನ್ನು ಮುಂದಿಟ್ಟುಕೊಂಡು ಮುಡಾ ಹಗರಣದಲ್ಲಿ ಮುಖ್ಯಮಂತ್ರಿಯವರ ಶ್ರೀಮತಿಯವರ ಹೆಸರನ್ನು ದುರ್ಬಳಕೆ ಮಾಡಲಾಯಿತು. ಮುಡಾ ಪ್ರಕರಣದಲ್ಲಿ ಮನಿ ಲ್ಯಾಂಡಿಂಗ್ ನಡೆದಿಲ್ಲ, ಹಣ ತೆಗೆದುಕೊಂಡ ದೂರಿಲ್ಲ ಹೀಗಿರುವಾಗ ಮುಖ್ಯಮಂತ್ರಿಯವರ ಶ್ರೀಮತಿ ವಿರುದ್ಧ ಆರೋಪ ಮಾಡಿದ್ದು ಹೇಗೆ? ಸಿವಿಲ್ ಪ್ರಕರಣದಲ್ಲಿ ಇಡಿ ಮಧ್ಯಪ್ರವೇಶ ಮಾಡುವ ಹಕ್ಕು ಹೊಂದಿಲ್ಲ ಇದನ್ನು ಸುಪ್ರೀಂ ಕೋರ್ಟ್ ಒತ್ತಿ ಹೇಳಿದೆ. ಹೀಗಿರುವಾಗ ಕಾಂಗ್ರೆಸ್ ನಾಯಕರಾದ ಡಿಕೆಶಿವಕುಮಾರ್ ಜಿ ಪರಮೇಶ್ವರ್ ವಿರುದ್ಧ ಇಡಿ ತನಿಖೆ ಹೇಗೆ ಆಯ್ತು? ಇಡಿ ದುರ್ಬಳಕೆ ಮಾಡಿರುವ ಕೇಂದ್ರ ಸರಕಾರದ ವಿರುದ್ಧ ಕೋರ್ಟ್ ಮೆಟ್ಟಿಲು ಎರುತ್ತೇವೆ. ಇದಕ್ಕೆ ದೇಶದ ಗೃಹ ಸಚಿವ ಮತ್ತು ಪ್ರಧಾನಿ ಅವರೇ ನೇರ ಹೊಣೆ” ಎಂದು ಐವನ್ ಡಿಸೋಜ ಕಿಡಿಕಾರಿದ್ದಾರೆ.
“ನಾವು ಬಿಜೆಪಿ ವಿರುದ್ಧ ಹೋರಾಟ ನಡೆಸುತ್ತೇವೆ, ಈಗ ನಡೆಯುತ್ತಿರುವ ಸಂಸತ್ ಕಲಾಪದಲ್ಲಿ ಈ ಕುರಿತ ಚರ್ಚೆಗೆ ಅವಕಾಶ ನೀಡಬೇಕು. ಜೆಡಿಎಸ್ ಬಿಜೆಪಿ, ನಾಯಕರು ಮಾನ ಮರ್ಯಾದೆ ಇದ್ದರೆ ಕ್ಷಮೆ ಯಾಚಿಸಬೇಕು, ಅಧಿಕಾರದಲ್ಲಿ ಇದ್ದವರು ರಾಜೀನಾಮೆ ನೀಡಬೇಕು” ಎಂದರು.
ಮಂಗಳೂರು: ಜೋಕಟ್ಟೆ ಫ್ಲೈಓವರ್ ಬಳಿ ಅಪರಿಚಿತ ಯುವಕನ ಶವ ಪತ್ತೆ ಮಂಗಳೂರು: ಪಣಂಬೂರಿನ ಜೋಕಟ್ಟೆ ಬಳಿ ಬುಧವಾರ ಯುವಕನೊಬ್ಬನ ಶವ…
ಗೋವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ ಘೋಷಿಸಿ, ಗೋಹತ್ಯೆ, ಗೋಮಾಂಸ ರಫ್ತನ್ನು ನಿಷೇಧಿಸಿ: ಮುಸ್ಲಿಂ ಬಾಂಧವ್ಯ ವೇದಿಕೆ ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ…
ಪ್ರಧಾನಿಯಾಗಿ ಮೋದಿ ಸರ್ಕಾರಕ್ಕೆ 12 ವರ್ಷ: ನೆಹರೂ ದಾಖಲೆ ಮುರಿದ ನಮೋ ಭಾರತದ ಪ್ರಜಾಪ್ರಭುತ್ವದ ಇತಿಹಾಸದಲ್ಲೇ ದೀರ್ಘಕಾಲ ನಿರಂತರ ಅಧಿಕಾರ…
ಉಡುಪಿ : ಜೂ.12 ರಂದು ನೇರ ಸಂದರ್ಶನ ಉಡುಪಿ : ನಗರದ ಮಣಿಪಾಲದ ಮನೋಹರ್ ಭವನ್ ಹೋಟೆಲ್ ಮುಂಭಾಗದ ಮಣಿಪಾಲ್…
ಜೂ.12ರಂದು ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ತಮಿಳುನಾಡು ಸಿಎಂ ವಿಜಯ್ ಭೇಟಿ ಉಡುಪಿ: ತಮಿಳುನಾಡು ಮುಖ್ಯಮಂತ್ರಿ ಜೋಸೆಫ್ ವಿಜಯ್ ಅವರು ಜೂನ್…
ಉಡುಪಿ : ಜೂ.11ರಂದು ಖಾಸಗಿ ಬಸ್ ದರ ಏರಿಕೆ ಖಂಡಿಸಿ ಸಿಪಿಎಂ ಪ್ರತಿಭಟನೆ ಉಡುಪಿ : ರಾಜ್ಯದ ಖಾಸಗಿ ಬಸ್…