ಮಂಗಳೂರು : ಇನಾಯತ್ ಆಲಿ ಮಂಗಳೂರು ಉತ್ತರ ಕ್ಷೇತ್ರಕ್ಕೆ ಕಾಂಗ್ರೇಸ್ ಅಭ್ಯರ್ಥಿಯಾಗಿ ಆಯ್ಕೆಯಾಗಿದ್ದಾರೆ. ಇದರ ಬೆನ್ನಲ್ಲೇ ಟಿಕೆಟ್ ಆಕಾಂಕ್ಷಿಯಾಗಿದ್ದ ಮೊಯ್ದೀನ್ ಬಾವ ಬಂಡಾಯ ಎದ್ದಿದ್ದಾರೆ. ತನ್ನ ಟಿಕೆಟ್ ತಪ್ಪಲು ಕೆಪಿಸಿಸಿ ಅಧ್ಯಕ್ಷ ಡಿಕೆಶಿಯವರೇ ಕಾರಣ ಎಂದು ಬಾವ ಕಿಡಿಕಾರಿದ್ದಾರೆ.
ಕೆಪಿಸಿಸಿ ಅಧ್ಯಕ್ಷ ಡಿಕೆಶಿಯವರು ಮಂಗಳೂರು ಉತ್ತರ ಕ್ಷೇತ್ರದ ಸೀಟನ್ನು ಹಣಕ್ಕಾಗಿ ಮಾರಾಟ ಮಾಡಿದ್ದಾರೆ. ರಾಹುಲ್ ಗಾಂಧಿ ನಡೆಸಿದ ಪಕ್ಷದ ಸರ್ವೆಯಲ್ಲಿ 78 ಶೇ. ಮತಗಳು ನನ್ನ ಪರವಾಗಿ ಬಂದಿದ್ದವು. ಇನಾಯತ್ ಆಲಿಗೆ ಕೇವಲ 7 ಶೇ. ಮತ ಸಿಕ್ಕಿದ್ದವು. ಈ ಇನಾಯತ್ ಆಲಿ ಯಾರೆಂದೇ ಕ್ಷೇತ್ರದಲ್ಲಿ ಜನರಿಗೆ ತಿಳಿದಿಲ್ಲ. ಡಿಸಿಸಿ ಕಚೇರಿಗೆ ಇವರು ಹೋಗಿದ್ದಾರೆಯೇ.. ಕೇವಲ ತನ್ನ ವ್ಯವಹಾರ ಪಾಲುದಾರ ಎಂಬ ನೆಪದಲ್ಲಿ ಡಿಕೆಶಿ ಟಿಕೆಟ್ ಮಾರಿದ್ದಾರೆ.
ನನ್ನ ಟಿಕೆಟ್ ತಪ್ಪಿಸಿದ್ದು ಡಿಕೆ ಶಿವಕುಮಾರ್ ಅವರೇ, ಖಚಿತವಾಗಿ ಹೇಳುತ್ತೇನೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾಂಗ್ರೆಸ್ ಮುಗಿಸಲು ಡಿಕೆಶಿ ಹೊರಟಿದ್ದಾರೆ. ಮಂಗಳೂರು ಉತ್ತರದಲ್ಲಿ ಕಾಂಗ್ರೆಸ್ ಸೋಲಿಸಲು ಡಿಕೆಶಿ ಟಿಕೆಟ್ ಕೊಟ್ಟಿದ್ದಾರೆ. ನಾನು ಮಂಗಳೂರು ಉತ್ತರ ಕ್ಷೇತ್ರದಲ್ಲಿಯೇ ಜೆಡಿಎಸ್ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತೇನೆ. ಇಲ್ಲಿ ಹಣಕ್ಕಾಗಿ ಓಟು ಮಾರುವ ಜನ ಇಲ್ಲ. ಹಣ ಖರ್ಚು ಮಾಡಲಿ. ಇಲ್ಲಿ ಇನಾಯತ್ ಗೆದ್ದರೆ ಫಲಿತಾಂಶ ದಿನವೇ ನನ್ನ ತಲೆ ಕೊಡಲು ಸಿದ್ಧನಿದ್ದೇನೆ ಎಂದು ಮಾಜಿ ಶಾಸಕ ಮೊಯ್ದೀನ್ ಬಾವ ಸವಾಲು ಹಾಕಿದ್ದಾರೆ.
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…