Featured

ಮಂಗಳೂರು : ಇನ್ನು ಮುಂದೆ ಸಾರ್ವಜನಿಕ ರಸ್ತೆಯಲ್ಲಿ ನಮಾಜ್‌ ಮಾಡುವುದಕ್ಕೆ ಅವಕಾಶ ನೀಡುವುದಿಲ್ಲ : ಮಸೀದಿ ಆಡಳಿತ ಮಂಡಳಿ ಸ್ಪಷ್ಟನೆ – vishwanews24

* ನಮಾಜ್ ಮುಗಿಯುವ ಸಮಯದಲ್ಲಿ ಬಂದ ಯಾರೋ ಹೊರಗಿನವರು, ರಸ್ತೆಯಲ್ಲೇ ಪ್ರಾರ್ಥನೆ ಸಲ್ಲಿಸಿದ್ದಾರೆ..

* ನಾವೂ ಆಗ ನಮಾಜ್‌ನಲ್ಲಿ ತೊಡಗಿದ್ದರಿಂದ ಆಗ ಈ ವಿಚಾರ ನಮ್ಮ ಗಮನಕ್ಕೆ ಬಂದಿರಲಿಲ್ಲ..

* ಇಂತಹ ಘಟನೆ ಮರುಕಳಿಸುವುದನ್ನು ತಡೆಯಲು ಭದ್ರತಾ ಸಿಬ್ಬಂದಿಯನ್ನೂ ನೇಮಿಸುತ್ತೇವೆ..

* ನಮಾಜ್‌ನಿಂದ ಸಾರ್ವಜನಿಕರಿಗೆ ತೊಂದರೆ ಆಗದಂತೆ ನೋಡಿಕೊಳ್ಳುವುದು ನಮ್ಮ ಕರ್ತವ್ಯ

* ಸ್ಪಷ್ಟನೆ ನೀಡಿದ ಮಸೀದಿ ಆಡಳಿತ ಮಂಡಳಿ

ಮಂಗಳೂರು : ಮಂಗಳೂರಿನ ಕಂಕನಾಡಿಯ ಮಸೀದಿ ಪಕ್ಕದ ರಸ್ತೆಯಲ್ಲಿ ನಮಾಜ್ ಮಾಡಿರುವ ವಿಡಿಯೋ ವೈರಲ್ ಆದ ಬೆನ್ನಲ್ಲೇ ಇದೀಗ ಮಸೀದಿಯ ಆಡಳಿತ ಮಂಡಳಿ ಸ್ಪಷ್ಟನೆ ನೀಡಿದ್ದು, ನಮಾಜ್ ಮುಗಿಯುವ ಸಮಯದಲ್ಲಿ ಬಂದ ಯಾರೋ ಹೊರಗಿನವರು, ರಸ್ತೆಯಲ್ಲೇ ಪ್ರಾರ್ಥನೆ ಸಲ್ಲಿಸಿದ್ದಾರೆ. ಅವರು ಸಮೀಪದ ಆಸ್ಪತ್ರೆಗೆ ಬಂದವರು ಅಥವಾ ಬೇರೆ ಕಡೆಯ ಕೂಲಿ ಕಾರ್ಮಿಕರು ಇರಬಹುದು. ನಾವೂ ಆಗ ನಮಾಜ್‌ನಲ್ಲಿ ತೊಡಗಿದ್ದರಿಂದ ಆಗ ಈ ವಿಚಾರ ನಮ್ಮ ಗಮನಕ್ಕೆ ಬಂದಿರಲಿಲ್ಲ ಎಂದಿದ್ದಾರೆ.

ಕಂಕನಾಡಿ ಮಸೀದಿ ಮುಂಭಾಗದಲ್ಲಿ ಸಾರ್ವಜನಿಕ ರಸ್ತೆಯಲ್ಲಿ ಕೆಲವರು ನಮಾಜ್‌ ಮಾಡಿದ್ದ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಿತ್ತು. ಸಾರ್ವಜನಿಕರ ಸಂಚಾರಕ್ಕೆ ತೊಂದರೆ ಮಾಡಿದ ಆರೋಪದ ಮೇರೆಗೆ ಪೊಲೀಸರು ಅಪರಿಚಿತರ ವಿರುದ್ಧ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದರು.

ಈ ಬಗ್ಗೆ ಮಸೀದಿ ಆಡಳಿತ ಮಂಡಳಿ ಸ್ಪಷ್ಟನೆ ನೀಡಿದ್ದು, ಇನ್ನು ಮುಂದೆ ಸಾರ್ವಜನಿಕ ರಸ್ತೆಯಲ್ಲಿ ನಮಾಜ್‌ ಮಾಡುವುದಕ್ಕೆ ಅವಕಾಶ ನೀಡುವುದಿಲ್ಲ. ಇಂತಹ ಘಟನೆ ಮರುಕಳಿಸುವುದನ್ನು ತಡೆಯಲು ಭದ್ರತಾ ಸಿಬ್ಬಂದಿಯನ್ನೂ ನೇಮಿಸುತ್ತೇವೆ’ ಎಂದು ಇಲ್ಲಿಯ ಕಂಕನಾಡಿ ಮಸೀದಿಯ ಆಡಳಿತ ಸಮಿತಿಯ ಜಂಟಿ ಕಾರ್ಯದರ್ಶಿ ಅಬ್ದುಲ್ ಸಮದ್‌ ಹೇಳಿದ್ದಾರೆ.

ಶುಕ್ರವಾರ ಸಂಜೆ ಈ ವಿಚಾರ ನಮ್ಮ ಗಮನಕ್ಕೆ ಬಂತು. ಶನಿವಾರವೇ ಮಸೀದಿಯ ಆಡಳಿತ ಸಮಿತಿ ಈ ವಿಚಾರವನ್ನು ಚರ್ಚಿಸಿ ಕ್ರಮ ವಹಿಸಿದೆ. ಈ ಸುದ್ದಿ ಮಾಧ್ಯಮಗಳಲ್ಲಿ ಪ್ರಕಟವಾಗುವ ಮುನ್ನವೇ ಕದ್ರಿ ಪೊಲೀಸ್‌ ಠಾಣೆಯಲ್ಲಿ ನಾವು ಸ್ಪಷ್ಟನೆ ನೀಡಿದ್ದೇವೆ. ಇಂತಹ ಘಟನೆ ಮರುಕಳಿಸದಂತೆ ನೊಡಿಕೊಳ್ಳುವ ಜವಾಬ್ದಾರಿ ನಮ್ಮದು ಎಂಬ ಭರವಸೆಯನ್ನೂ ನೀಡಿದ್ದೇವೆ’ ಎಂದು ತಿಳಿಸಿದ್ದಾರೆ.

‘ಇದರಲ್ಲಿ ವಿವಾದ ಏನೂ ಇಲ್ಲ. ನಮಾಜ್‌ ವಿಚಾರದಲ್ಲಿ ವಿವಾದ ಮಾಡುವ ಅಗತ್ಯವೂ ನಮಗಿಲ್ಲ. ನಮಾಜ್‌ನಿಂದ ಸಾರ್ವಜನಿಕರಿಗೆ ತೊಂದರೆ ಆಗದಂತೆ ನೋಡಿಕೊಳ್ಳುವುದು ನಮ್ಮ ಕರ್ತವ್ಯ’ ಎಂದು ಅವರು ಹೇಳಿದ್ದಾರೆ.

Vishwa News 24

Recent Posts

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

19 hours ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

19 hours ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

19 hours ago

ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ ಕಲಿಯಬೇಕಿಲ್ಲ : ವಿಪಕ್ಷಗಳಿಗೆ ಜಮೀರ್ ಅಹ್ಮದ್ ಖಾನ್‌  ತಿರುಗೇಟು – vishwanews24

ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ  ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್‌ ಅಹ್ಮದ್‌ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…

19 hours ago

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ – vishwanews24

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…

19 hours ago

2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ – vishwanews24

2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ ನವದೆಹಲಿ: 2047ರ ವೇಳೆಗೆ ‘ವಿಕಸಿತ ಭಾರತ’ದ ಕನಸನ್ನು…

20 hours ago