ಮಂಗಳೂರು: ಇನ್ಸ್ಟಾಗ್ರಾಂನಲ್ಲಿ ಪರಿಚಯವಾಗಿದ್ದ ಹುಡುಗಿಗೆ ಲೈಕ್ ಕೊಟ್ಟಿದ್ದಕ್ಕೆ ಯುವಕನೊಂದಿಗೆ ನಿಶ್ಚಿತಾರ್ಥ ಮಾಡಿಕೊಂಡಿದ್ದ ಯುವತಿ ಆತನನ್ನು ತರಾಟೆಗೆ ತೆಗೆದುಕೊಂಡಿದ್ದು, ಮನನೊಂದು ಯುವಕ ಆತ್ಮಹತ್ಯೆ ಮಾಡಿಕೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ಪೂಂಜಾಲಕಟ್ಟೆಯ ಕುಕ್ಕಿಪ್ಪಾಡಿ ಎಂಬಲ್ಲಿ ನಡೆದಿದೆ.
ಚೇತನ್ (25) ಆತ್ಮಹತ್ಯೆ ಮಾಡಿಕೊಂಡ ಯುವಕ. ಚೇತನ್ಗೆ ಕುಂದಾಪುರದ ಚೈತನ್ಯ ಎಂಬ ಯುವತಿ ಇನ್ಸ್ಟಾಗ್ರಾಂನಲ್ಲಿ ಪರಿಚಯವಾಗಿದ್ದಳು. ಬಳಿಕ ಪ್ರೀತಿಸಿ 8 ತಿಂಗಳ ಹಿಂದೆ ಇವರಿಬ್ಬರಿಗೂ ನಿಶ್ಚಿತಾರ್ಥವಾಗಿತ್ತು. ಜ.21ರಂದು ಚೇತನ್ ತನ್ನ ಪರಿಚಯದ ಯುವತಿಗೆ ಇನ್ಸ್ಟಾಗ್ರಾಂನಲ್ಲಿ ಲೈಕ್ ನೀಡಿದ್ದ. ಇದನ್ನು ಪ್ರಶ್ನಿಸಲು ನಿಶ್ಚಿತಾರ್ಥ ಮಾಡಿಕೊಂಡ ಯುವತಿ ಚೇತನ್ ಮನೆಗೆ ಬಂದಿದ್ದಳು. ಈ ವೇಳೆ ಚೇತನ್ ತಾಯಿ ಮನೆಯಲ್ಲಿ ಇರಲಿಲ್ಲ. ಚೇತನ್ ಓರ್ವನೇ ಇದ್ದ. ಲೈಕ್ ನೀಡಿದ್ದಕ್ಕೆ ಯುವತಿ ಚೇತನ್ನನ್ನು ತರಾಟೆಗೆ ತೆಗೆದುಕೊಂಡಿದ್ದಳು. ಇದರಿಂದ ಮನನೊಂದ ಚೇತನ್ ಯುವತಿ ಮನೆಯಲ್ಲಿ ಇರುವ ಸಂದರ್ಭದಲ್ಲೇ ಮನೆಯೊಳಗೆ ತೆರಳಿ ಮನೆಯ ಮೇಲ್ಛಾವಣಿಗೆ ಬಟ್ಟೆ ಕಟ್ಟಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಬಳಿಕ ಚೇತನ್ ತಾಯಿಗೆ ಚೈತನ್ಯ ಕರೆ ಮಾಡಿ ಮಲಗಿದ್ದಾತ ಏಳುತ್ತಿಲ್ಲ ಎಂದು ಹೇಳಿ ಕರೆಸಿಕೊಂಡಿದ್ದಾಳೆ. ಬಳಿಕ ಮನೆಯ ಮೆಲ್ಛಾವಣಿಯಲ್ಲಿ ನೇಣು ಬಿಗಿದ ಕುಣಿಕೆ ಸಿಕ್ಕಿದೆ. ನೇಣು ಬಿಗಿದ ಬಳಿಕ ಚೇತನ್ನನ್ನು ಯುವತಿಯೇ ಕೆಳಗೆ ಇಳಿಸಿದ್ದಳು. ಘಟನೆ ಸಂಬಂಧ ಪೂಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಿಧಾನ ಪರಿಷತ್ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್…
15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ : ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…
ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…
ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…
ಉಡುಪಿ:ಮಾದಕ ದ್ರವ್ಯ ಪ್ರಕರಣ : ಪಿಐಟಿ ಎನ್ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…
ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…