Featured

ಮಂಗಳೂರು : ಇನ್ ಸ್ಟಾಗ್ರಾಂನಲ್ಲಿ ಪರಿಚಯ ಪ್ರೀತಿಸಿ ಮದುವೆ : ಪತಿಯಿಂದ ಹಿಂಸೆ  ಸೂಕ್ತ ಕ್ರಮ ಕೈಗೊಳ್ಳುವಂತೆ ಪತ್ನಿ ಪೊಲೀಸರಲ್ಲಿ ದೂರು – Vishwanews24

ಇನ್ ಸ್ಟಾಗ್ರಾಂನಲ್ಲಿ ಪರಿಚಯ ಪ್ರೀತಿಸಿ ಮದುವೆ : ಪತ್ನಿಯನ್ನು ಮನೆಯಿಂದ ಹೊರದಬ್ಬಿದ ಪತಿ

ಸೂಕ್ತ ಕ್ರಮ ಕೈಗೊಳ್ಳುವಂತೆ ಪತ್ನಿ ಪೊಲೀಸರಲ್ಲಿ ದೂರು

ಮಂಗಳೂರು: ಇನ್ ಸ್ಟಾಗ್ರಾಂನಲ್ಲಿ ಯುವಕ ಮತ್ತು ಯುವತಿ ಪರಸ್ಪರ ಪರಿಚಯ ಆಗಿ ಬಳಿಕ ಅದು ಪ್ರೀತಿಗೆ ತಿರುಗಿ ಮದುವೆಯಾದ ಬಳಿಕ ಮದುವೆಯಾದ ಪತ್ನಿಯನ್ನು ಮನೆಯಿಂದ ಹೊರದಬ್ಬಿದ ಪತಿಯನ್ನು ಹುಡುಕಿಕೊಡುವಂತೆ ಯುವತಿ ನಗರದ ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾಳೆ.

ಶಿವಮೊಗ್ಗ ಮೂಲದ ಗಾಡಿಕೊಪ್ಪದ ಯುವತಿ ಮೇಘಶ್ರೀ ಎಂಬಾಕೆ ನೊಂದ ಯುವತಿಯಾಗಿದ್ದು ಮದುವೆಯಾಗಿರುವ ಮಂಗಳೂರಿನ ವಾಮಂಜೂರು ನೀರಾಳ ಬೊಂಡಂತಿಲದ ನಿವಾಸಿ ಲಿಖಿತ್‌ ಎಂಬಾತ ತನ್ನನ್ನು ಮದುವೆಯಾಗಿರುವುದಾಗಿ ಆಕೆ ದೂರಿನಲ್ಲಿ ತಿಳಿಸಿದ್ದಾಳೆ.

ಮೇಘಶ್ರೀ ಮತ್ತು ಲಿಖಿತ್ ನಡುವೆ ಇನ್ ಸ್ಟಾಗ್ರಾಂನಲ್ಲಿ ಪರಿಚಯ ಹುಟ್ಟಿಕೊಂಡು ಅದು ಪ್ರೀತಿಗೆ ತಿರುಗಿ ಬಳಿಕ ಮಂಗಳೂರಿನ ಆರ್ಯಸಮಾಜದಲ್ಲಿ ಇಬ್ಬರೂ ಕೂಡ ಮದುವೆಯಾಗಿದ್ದರು. ಮದುವೆಯ ವೇಳೆ ತನ್ನ ಕುಟುಂಬಿಕರು ಲಿಖಿತ್ ಗೆ ಬಂಗಾರ ಹಣ ಎಲ್ಲವನ್ನೂ ನೀಡಿದ್ದರೂ ಕೂಡ ಈಗ ಆತನ ಮನೆಗೆ ಹೋದರೆ ಲಿಖಿತ್ ಸೇರಿದಂತೆ ಆತನ ತಂದೆ ತಾಯಿ ಮನೆಯೊಳಗೆ ಸೇರಿಸುತ್ತಿಲ್ಲ ಎನ್ನುವುದು ಆಕೆಯ ಆರೋಪವಾಗಿದೆ.

ಇದನ್ನೂ ಓದಿ : ಸಮಸ್ಯೆ ಗಳಿಗೆ ಶೀಘ್ರ ಪರಿಹಾರ.. ನೋಡಿ ಇಂದಿನ ದಿನ ಭವಿಷ್ಯ.. ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564

2022 ಜುಲೈ 2 ರಂದು ಯುವತಿ ಮೇಘಶ್ರೀಯನ್ನು ಲಿಖಿತ್ ಮದುವೆಯಾಗಿದ್ದು ಉರ್ವ ಮಠದಕಿಣಿ ಬಳಿಯ ಬಾಡಿಗೆ ಮನೆಯೊಂದರಲ್ಲಿ ಇದ್ದು ಆರಂಭದಲ್ಲಿ ಚೆನ್ನಾಗಿಯೇ ನೋಡಿಕೊಳ್ಳುತ್ತಿದ್ದ ಬಳಿಕ ತನಗೆ ಹೊಡೆದು ಮಾನಸಿಕ ಹಾಗೂ ದೈಹಿಕ ಹಿಂಸೆ ನೀಡಿದ್ದಲ್ಲದೆ ಕೊಲ್ಲುವ ಬೆದರಿಕೆ ಕೂಡ ಹಾಕಿದ್ದಾನೆ. ತನ್ನ ಗಂಡನ ವಿರುದ್ದ ಸೂಕ್ತ ಕ್ರಮ ಕೈಗೊಳ್ಳುವಂತೆ ಪೊಲೀಸರಲ್ಲಿ ಆಕೆ ದೂರು ನೀಡಿದ್ದಾಳೆ.

ಇದೇ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಮೇಘಶ್ರೀ ತಾಯಿ ಜಯಲಕ್ಷ್ಮೀ ತನ್ನ ಮಗಳ ಸಂಸಾರ ಸುಖವಾಗಿರಲಿ ಎಂಬ ಆಸೆಯಿಂದ ಮನೆ ವ್ಯವಸ್ಥೆ ಕೂಡ ಮಾಡಿ ಕೊಟ್ಟಿದ್ದರೂ ಕೂಡ ಆತ ಆಕೆಗೆ ಚಿತ್ರ ಹಿಂಸೆ ನೀಡಿದ್ದಾನೆ. ಆಕೆಗೆ ಆತ ನೀಡುವ ಹಿಂಸೆಯನ್ನು ನೋಡಿ ಈಗ ಪೊಲೀಸರಿಗೆ ದೂರು ನೀಡಿದ್ದು ತನ್ನ ಮಗಳಿಗೆ ನ್ಯಾಯ ಒದಗಿಸುವಂತೆ ಮನವಿ ಮಾಡಿದ್ದಾರೆ.

ಹೈಕೋರ್ಟ್ ತೀರ್ಪಿನ ವಿರುದ್ಧ ಭಾಸ್ಕರ್ ಶೆಟ್ಟಿ ತಾಯಿ ಅಸಮಾಧಾನ..

ಮೇಘಶ್ರೀ ದೂರನ್ನು ಸ್ವೀಕರಿಸಿರುವ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Vishwa News 24

Recent Posts

ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ – vishwanews24

 ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…

2 days ago

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ : ಬೆಸ್ಕಾಂ ಸ್ಪಷ್ಟನೆ – vishwanews24

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…

2 days ago

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ – vishwanews24

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…

2 days ago

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಆರೋಪ – vishwanews24

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಗಂಭೀರ…

2 days ago

ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ: ಸಂಸದ ಯದುವೀರ್ ಒಡೆಯರ್ ಆಕ್ಷೇಪ – vishwanews24

ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…

2 days ago

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ – vishwanews24

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…

2 days ago