ಮಂಗಳೂರು: ಇನ್ ಸ್ಟಾಗ್ರಾಮ್ ಪೇಜ್ ನಲ್ಲಿ ಪ್ರಚೋದನಕಾರಿ ಸಂದೇಶಗಳನ್ನು ಪೋಸ್ಟ್ ಮಾಡಿರುವ ಆರೋಪದಲ್ಲಿ ಯುವಕನೋರ್ವನನ್ನು ಮಂಗಳೂರು ನಗರ ಸಿ.ಇ.ಎನ್ ಅಪರಾಧ ಠಾಣೆಯ ಪೊಲೀಸರು ಬಂಧಿಸಿದ್ದಾರೆ.
ಮಲವಂತಿಗೆಯ ಕಿಲ್ಲೂರು ಮನೆ ನಿವಾಸಿ ಮುಹಮ್ಮದ್ ಕೈಫ್(22) ಬಂಧಿತ ಆರೋಪಿ.
Karavali_tigers ಎಂಬ Instagram ಪೇಜ್ ಮುಖಾಂತರ ಪ್ರಚೋದನಕಾರಿ ಸಂದೇಶಗಳನ್ನು ಪೋಸ್ಟ್ ಮಾಡಿದ ಆರೋಪದಲ್ಲಿ ಕೈಫ್ ವಿರುದ್ಧ ಮಂಗಳೂರು ನಗರ ಸಿ.ಇ.ಎನ್ ಅಪರಾಧ ಠಾಣೆಯಲ್ಲಿ ಜುಲೈ 19ರಂದು ಪ್ರಕರಣ ದಾಖಲಾಗಿತ್ತು.
ತಾಂತ್ರಿಕ ಸಾಕ್ಷ್ಯಗಳ ಮುಖಾಂತರ ಪತ್ತೆ ಮಾಡಿ, ಆರೋಪಿ ತಮಿಳುನಾಡಿಲ್ಲಿರುವ ಬಗ್ಗೆ ಮಾಹಿತಿ ಸಂಗ್ರಹಿಸಿದ ಪೊಲೀಸರು ಅಲ್ಲಿಗೆ ತೆರಳಿ ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದು, ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದೆ.
Karavali_tigers ಎಂಬ ಪೇಜ್ ವಿರುದ್ಧ ಬಜ್ಪೆ ಪೊಲೀಸ್ ಠಾಣೆಯಲ್ಲೂ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…
ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…
ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…
ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ; ಡೆತ್ ನೋಟ್ ನಲ್ಲಿ…
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…