Featured

ಮಂಗಳೂರು : ಇರುವೆ ಬಾಧೆಗೊಳಗಾದ ಪಿಲಿಕುಳ ಜೈವಿಕ ಉದ್ಯಾನವನದ ಹಾವು ಸುರಕ್ಷಿತ :ಸ್ಪಷ್ಟನೆ ನೀಡಿದ ಪಶುಪಾಲನಾ ವೈದ್ಯಾಧಿಕಾರಿ – Vishwanews24

ಮಂಗಳೂರು : ಇರುವೆ ಬಾಧೆಗೊಳಗಾದ ಪಿಲಿಕುಳ ಜೈವಿಕ ಉದ್ಯಾನವನದ ಹಾವು ಸುರಕ್ಷಿತ :ಸ್ಪಷ್ಟನೆ ನೀಡಿದ ಪಶುಪಾಲನಾ ವೈದ್ಯಾಧಿಕಾರಿ

ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದೊಳಗಿರುವ ಹಾವಿನ ಗೂಡೊಂದರಲ್ಲಿ ಇರುವೆಗಳ ಗುಂಪು ಹಾವನ್ನು ಕಚ್ಚುತ್ತಿರುವ ವೀಡಿಯೋ ಕೆಲವು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ವಿಚಾರವು ತಿಳಿದು ಬಂದಿದೆ.

ವಿಷಯ ತಿಳಿದ ಕೂಡಲೇ ಪ್ರಾಧಿಕಾರದ ಆಯುಕ್ತರು ಸಂಬಂಧಪಟ್ಟ ಹಿರಿಯ ವೈಜ್ಞಾನಿಕ ಅಧಿಕಾರಿ, ಪಶುಪಾಲನಾ ವೈದ್ಯಾಧಿಕಾರಿ ಮತ್ತು ಬಯಾಲಾಜಿಸ್ಟ್ ಜೊತೆಗೂಡಿ ಸ್ಥಳ ಪರಿಶೀಲನೆ ನಡೆಸಿದ್ದಾರೆ.

ಪರಿಶೀಲನೆ ವೇಳೆ ಇರುವೆಗಳ ಬಾಧೆಗೆ ಒಳಗಾದ ಉರಗದ ಆರೋಗ್ಯವು ಸ್ಥಿರವಾಗಿದೆ ಎಂಬುದಾಗಿ ಪಶುಪಾಲನಾ ವೈದ್ಯಾಧಿಕಾರಿ ದೃಢೀಕರಿಸಿದ್ದಾರೆ.

ಪ್ರಾಧಿಕಾರ ಆಯುಕ್ತರ ನಿರ್ದೇಶನದಂತೆ ಜೈವಿಕ ಉದ್ಯಾನವನದ ನಿರ್ದೇಶಕರು ಈ ಲೋಪಕ್ಕೆ ಕಾರಣರಾದವರ ವಿರುದ್ಧ ಶಿಸ್ತು ಕ್ರಮ ಜರುಗಿಸುವ ಸಲುವಾಗಿ ಉರಗ ಪಾಲಕರಿಗೆ ನೋಟೀಸು ನೀಡಿ ವಿವರಣೆ ನೀಡಲು ತಿಳಿಸಿದ್ದಾರೆ.

ಚಂದ್ರಶೇಖರ್ ಗುರೂಜಿ ಹತ್ಯೆಗೆ ಸ್ಫೋಟಕ ಟ್ವಿಸ್ಟ್ – ಗುರೂಜಿ ಅಣ್ಣನ ಮಕ್ಕಳೇ ಮುಖ್ಯ ಕಾರಣ ಮಾಹಿತಿ ಬಹಿರಂಗ – Vishwanews24

ಇಂತಹ ಘಟನೆಯು ಪುನಃ ಮರುಕಳಿಸದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವ ಸಲುವಾಗಿ ಕೂಡಲೇ ಪ್ರಾಧಿಕಾರದ ಆಯುಕ್ತರ ನೇತೃತ್ವದಲ್ಲಿ ಜೈವಿಕ ಉದ್ಯಾನವನದ ನಿರ್ದೇಶಕರು, ಹಿರಿಯ ವೈಜ್ಞಾನಿಕ ಅಧಿಕಾರಿ ಮತ್ತು ಪಶುಪಾಲನಾ ವೈದ್ಯಾಧಿಕಾರಿಯವರನ್ನು ಒಳಗೊಂಡು ವಿಶೇಷ ಸಭೆಯನ್ನು ನಡೆಸಲಾಗಿದೆ, ಅಂತೆಯೇ ಈ ಸಭೆಯಲ್ಲಿ ಇರುವೆಗಳ ಬಾಧೆಗೊಳಗಾದ ಆ ಉರಗದ ಆರೋಗ್ಯವನ್ನು ಪ್ರತೀ 2 ಗಂಟೆಗಳಿಗೊಮ್ಮೆ ಪರಿಶೀಲನೆ ನಡೆಸಿ ವರದಿಯನ್ನು ಆಯುಕ್ತರಿಗೆ ನೀಡಲು ತಿಳಿಸಲಾಗಿದೆ.

ಅಲ್ಲದೇ ಜೈವಿಕ ಉದ್ಯಾನವನದಲ್ಲಿ ಬೇರೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವ ನಿಟ್ಟಿನಲ್ಲಿ ದಿನದ ಎಲ್ಲಾ ಅವಧಿಯಲ್ಲಿ ಉರಗ ವಿಭಾಗಕ್ಕೆ ಹೆಚ್ಚುವರಿ ಸಿಸಿ ಕ್ಯಾಮರಾವನ್ನು ಅಳವಡಿಸಿ 24*7 ಕಣ್ಗಾವಲು ಮಾಡಲು ಕ್ರಮಕೈಗೊಳ್ಳಲಾಗುತ್ತದೆ.

ಉರಗಗಳ ಆವರಣದ ಒಳಗೆ ಯಾವುದೇ ತಿಂಡಿ ತಿನಿಸುಗಳನ್ನು ತೆಗೆದುಕೊಂಡು ಹೋಗದಂತೆ ನಿಗಾವಹಿಸಲು ಭದ್ರತಾ ಸಿಬ್ಬಂದಿಗಳಿಗೆ ಸೂಚಿಸಲಾಗಿದೆ.

ಉರಗ ಆವರಣದ ಹೊರಭಾಗದ ಸ್ವಚ್ಛತೆಯನ್ನು ಆಗಾಗ ಮಾಡಲು ಹಾಗೂ ಇದರ ಮೇಲುಸ್ತುವಾರಿಯನ್ನು ಭದ್ರತಾಧಿಕಾರಿಯವರು ನೋಡಿಕೊಂಡು ವರದಿ ನೀಡಲು ಸೂಚಿಸಲಾಗಿದೆ.

ST’ ಸಮುದಾಯಕ್ಕೆ ಮೀಸಲಾತಿ ಹೆಚ್ಚಳ : ಎಸ್ ಟಿ ಸಮುದಾಯದ ನಾಯಕರಿಂದ ನಾಳೆ ಸಿಎಂ ಗೆ ಸನ್ಮಾನ – Vishwanews24

ಇದಲ್ಲದೆ ಜೈವಿಕ ಉದ್ಯಾನದಲ್ಲಿ ಸ್ವಚ್ಛತೆಯನ್ನು ಕಾಪಾಡಿಕೊಂಡು ಬರುವಲ್ಲಿ ತಿಂಡಿ ತಿನಿಸುಗಳ ಪ್ಯಾಕೇಟುಗಳು ಪ್ಲಾಸ್ಟಿಕ್ ಬಾಟಲಿ ಇನ್ನಿತರ ಸಾಮಾಗ್ರಿಗಳನ್ನು ಎಲ್ಲೆಂದರಲ್ಲಿ ಎಸೆಯದಂತೆ ಹಾಗೂ ಪ್ರಾಣಿಗಳ ಆವರಣಗಳಿಗೆ ಹಾನಿ ಉಂಟು ಮಾಡದಂತೆ, ಸಂದರ್ಶಕರಿಗೆ ಅರಿವು ಮೂಡಿಸಲು ಹೆಚ್ಚುವರಿ ಸೂಚನಾ ಫಲಕಗಳನ್ನು ಅಳವಡಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರದ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

6 hours ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

6 hours ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

2 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

3 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

3 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

3 days ago