Featured

ಮಂಗಳೂರು : ಇರುವೆ ಬಾಧೆಗೊಳಗಾದ ಪಿಲಿಕುಳ ಜೈವಿಕ ಉದ್ಯಾನವನದ ಹಾವು ಸುರಕ್ಷಿತ :ಸ್ಪಷ್ಟನೆ ನೀಡಿದ ಪಶುಪಾಲನಾ ವೈದ್ಯಾಧಿಕಾರಿ – Vishwanews24

ಮಂಗಳೂರು : ಇರುವೆ ಬಾಧೆಗೊಳಗಾದ ಪಿಲಿಕುಳ ಜೈವಿಕ ಉದ್ಯಾನವನದ ಹಾವು ಸುರಕ್ಷಿತ :ಸ್ಪಷ್ಟನೆ ನೀಡಿದ ಪಶುಪಾಲನಾ ವೈದ್ಯಾಧಿಕಾರಿ

ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದೊಳಗಿರುವ ಹಾವಿನ ಗೂಡೊಂದರಲ್ಲಿ ಇರುವೆಗಳ ಗುಂಪು ಹಾವನ್ನು ಕಚ್ಚುತ್ತಿರುವ ವೀಡಿಯೋ ಕೆಲವು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ವಿಚಾರವು ತಿಳಿದು ಬಂದಿದೆ.

ವಿಷಯ ತಿಳಿದ ಕೂಡಲೇ ಪ್ರಾಧಿಕಾರದ ಆಯುಕ್ತರು ಸಂಬಂಧಪಟ್ಟ ಹಿರಿಯ ವೈಜ್ಞಾನಿಕ ಅಧಿಕಾರಿ, ಪಶುಪಾಲನಾ ವೈದ್ಯಾಧಿಕಾರಿ ಮತ್ತು ಬಯಾಲಾಜಿಸ್ಟ್ ಜೊತೆಗೂಡಿ ಸ್ಥಳ ಪರಿಶೀಲನೆ ನಡೆಸಿದ್ದಾರೆ.

ಪರಿಶೀಲನೆ ವೇಳೆ ಇರುವೆಗಳ ಬಾಧೆಗೆ ಒಳಗಾದ ಉರಗದ ಆರೋಗ್ಯವು ಸ್ಥಿರವಾಗಿದೆ ಎಂಬುದಾಗಿ ಪಶುಪಾಲನಾ ವೈದ್ಯಾಧಿಕಾರಿ ದೃಢೀಕರಿಸಿದ್ದಾರೆ.

ಪ್ರಾಧಿಕಾರ ಆಯುಕ್ತರ ನಿರ್ದೇಶನದಂತೆ ಜೈವಿಕ ಉದ್ಯಾನವನದ ನಿರ್ದೇಶಕರು ಈ ಲೋಪಕ್ಕೆ ಕಾರಣರಾದವರ ವಿರುದ್ಧ ಶಿಸ್ತು ಕ್ರಮ ಜರುಗಿಸುವ ಸಲುವಾಗಿ ಉರಗ ಪಾಲಕರಿಗೆ ನೋಟೀಸು ನೀಡಿ ವಿವರಣೆ ನೀಡಲು ತಿಳಿಸಿದ್ದಾರೆ.

ಚಂದ್ರಶೇಖರ್ ಗುರೂಜಿ ಹತ್ಯೆಗೆ ಸ್ಫೋಟಕ ಟ್ವಿಸ್ಟ್ – ಗುರೂಜಿ ಅಣ್ಣನ ಮಕ್ಕಳೇ ಮುಖ್ಯ ಕಾರಣ ಮಾಹಿತಿ ಬಹಿರಂಗ – Vishwanews24

ಇಂತಹ ಘಟನೆಯು ಪುನಃ ಮರುಕಳಿಸದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವ ಸಲುವಾಗಿ ಕೂಡಲೇ ಪ್ರಾಧಿಕಾರದ ಆಯುಕ್ತರ ನೇತೃತ್ವದಲ್ಲಿ ಜೈವಿಕ ಉದ್ಯಾನವನದ ನಿರ್ದೇಶಕರು, ಹಿರಿಯ ವೈಜ್ಞಾನಿಕ ಅಧಿಕಾರಿ ಮತ್ತು ಪಶುಪಾಲನಾ ವೈದ್ಯಾಧಿಕಾರಿಯವರನ್ನು ಒಳಗೊಂಡು ವಿಶೇಷ ಸಭೆಯನ್ನು ನಡೆಸಲಾಗಿದೆ, ಅಂತೆಯೇ ಈ ಸಭೆಯಲ್ಲಿ ಇರುವೆಗಳ ಬಾಧೆಗೊಳಗಾದ ಆ ಉರಗದ ಆರೋಗ್ಯವನ್ನು ಪ್ರತೀ 2 ಗಂಟೆಗಳಿಗೊಮ್ಮೆ ಪರಿಶೀಲನೆ ನಡೆಸಿ ವರದಿಯನ್ನು ಆಯುಕ್ತರಿಗೆ ನೀಡಲು ತಿಳಿಸಲಾಗಿದೆ.

ಅಲ್ಲದೇ ಜೈವಿಕ ಉದ್ಯಾನವನದಲ್ಲಿ ಬೇರೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವ ನಿಟ್ಟಿನಲ್ಲಿ ದಿನದ ಎಲ್ಲಾ ಅವಧಿಯಲ್ಲಿ ಉರಗ ವಿಭಾಗಕ್ಕೆ ಹೆಚ್ಚುವರಿ ಸಿಸಿ ಕ್ಯಾಮರಾವನ್ನು ಅಳವಡಿಸಿ 24*7 ಕಣ್ಗಾವಲು ಮಾಡಲು ಕ್ರಮಕೈಗೊಳ್ಳಲಾಗುತ್ತದೆ.

ಉರಗಗಳ ಆವರಣದ ಒಳಗೆ ಯಾವುದೇ ತಿಂಡಿ ತಿನಿಸುಗಳನ್ನು ತೆಗೆದುಕೊಂಡು ಹೋಗದಂತೆ ನಿಗಾವಹಿಸಲು ಭದ್ರತಾ ಸಿಬ್ಬಂದಿಗಳಿಗೆ ಸೂಚಿಸಲಾಗಿದೆ.

ಉರಗ ಆವರಣದ ಹೊರಭಾಗದ ಸ್ವಚ್ಛತೆಯನ್ನು ಆಗಾಗ ಮಾಡಲು ಹಾಗೂ ಇದರ ಮೇಲುಸ್ತುವಾರಿಯನ್ನು ಭದ್ರತಾಧಿಕಾರಿಯವರು ನೋಡಿಕೊಂಡು ವರದಿ ನೀಡಲು ಸೂಚಿಸಲಾಗಿದೆ.

ST’ ಸಮುದಾಯಕ್ಕೆ ಮೀಸಲಾತಿ ಹೆಚ್ಚಳ : ಎಸ್ ಟಿ ಸಮುದಾಯದ ನಾಯಕರಿಂದ ನಾಳೆ ಸಿಎಂ ಗೆ ಸನ್ಮಾನ – Vishwanews24

ಇದಲ್ಲದೆ ಜೈವಿಕ ಉದ್ಯಾನದಲ್ಲಿ ಸ್ವಚ್ಛತೆಯನ್ನು ಕಾಪಾಡಿಕೊಂಡು ಬರುವಲ್ಲಿ ತಿಂಡಿ ತಿನಿಸುಗಳ ಪ್ಯಾಕೇಟುಗಳು ಪ್ಲಾಸ್ಟಿಕ್ ಬಾಟಲಿ ಇನ್ನಿತರ ಸಾಮಾಗ್ರಿಗಳನ್ನು ಎಲ್ಲೆಂದರಲ್ಲಿ ಎಸೆಯದಂತೆ ಹಾಗೂ ಪ್ರಾಣಿಗಳ ಆವರಣಗಳಿಗೆ ಹಾನಿ ಉಂಟು ಮಾಡದಂತೆ, ಸಂದರ್ಶಕರಿಗೆ ಅರಿವು ಮೂಡಿಸಲು ಹೆಚ್ಚುವರಿ ಸೂಚನಾ ಫಲಕಗಳನ್ನು ಅಳವಡಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರದ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Vishwa News 24

Recent Posts

ಉಡುಪಿ: ಬಿಜೆಪಿ ಯುವ ಮೋರ್ಚಾದಿಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಗೋಬ್ಯಾಕ್ ಪ್ರತಿಭಟನೆ – vishwanews24

ಉಡುಪಿ: ಬಿಜೆಪಿ ಯುವ ಮೋರ್ಚಾದಿಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಗೋಬ್ಯಾಕ್ ಪ್ರತಿಭಟನೆ ಉಡುಪಿ: ಉಡುಪಿ ಜಿಲ್ಲೆಯನ್ನು ರಾಜ್ಯ ಕಾಂಗ್ರೆಸ್…

10 hours ago

ಮಂಗಳೂರು : ಹಿಜಾಬ್ ನಿಷೇಧ ಹಿಂಪಡೆಯುವ ನಿರ್ಧಾರವನ್ನು ಸ್ವಾಗತಿಸಿದ ವಿಮೆನ್ ಇಂಡಿಯಾ ಮೂವ್ಮೆಂಟ್ – vishwanews24

ಹಿಜಾಬ್ ನಿಷೇಧ ಹಿಂಪಡೆಯುವ ನಿರ್ಧಾರವನ್ನು ಸ್ವಾಗತಿಸಿದ ವಿಮೆನ್ ಇಂಡಿಯಾ ಮೂವ್ಮೆಂಟ್.. ಸುಪ್ರೀಂ ಕೋರ್ಟ್‌ನಲ್ಲಿ ಅಧಿಕೃತ ಕ್ರಮಗಳನ್ನು ಪೂರ್ಣಗೊಳಿಸಲು ಸರ್ಕಾರಕ್ಕೆ ಮನವಿ…

10 hours ago

ಟ್ರ್ಯಾಕ್ಟರ್ – ಲಾರಿ ಅಪಘಾತದಲ್ಲಿ ಏಳು ಮಂದಿ ದುರ್ಮರಣ : ಮೃತರ ಕುಟುಂಬಸ್ಥರಿಗೆ ತಲಾ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ – vishwanews24

ಟ್ರ‍್ಯಾಕ್ಟರ್ - ಲಾರಿ ಅಪಘಾತದಲ್ಲಿ ಏಳು ಮಂದಿ ದುರ್ಮರಣ : ಮೃತರ ಕುಟುಂಬಸ್ಥರಿಗೆ ತಲಾ 5 ಲಕ್ಷ ಪರಿಹಾರ ಘೋಷಿಸಿದ…

10 hours ago

ಡಿಕೆಶಿ ಮುಂದಿನ ಸಿಎಂ ಬ್ಯಾನರ್ : ಕಾರ್ಯಕರ್ತರ ಅಭಿಮಾನ ತಡಯೋಕೆ ಸಾಧ್ಯವಿಲ್ಲ :ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯೆ – vishwanews24

ಡಿಕೆಶಿ ಮುಂದಿನ ಸಿಎಂ ಬ್ಯಾನರ್ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯೆ ಉಡುಪಿ: ಮುಖ್ಯಮಂತ್ರಿ ಬದಲಾವಣೆ ಹೈಕಮಾಂಡ್‍ಗೆ ಬಿಟ್ಟ ವಿಚಾರ.…

11 hours ago

ನಾನು ಮತ್ತೆ ಹೊಸದಾಗಿ ಪಕ್ಷ ಕಟ್ಟುತ್ತೇನೆ ; ಪಕ್ಷ ಬಿಟ್ಟು ಹೋಗುವವರು ಹೋಗಲಿ : ಮಮತಾ ಬ್ಯಾನರ್ಜಿ – vishwanews24

ನಾನು ಮತ್ತೆ ಹೊಸದಾಗಿ ಪಕ್ಷ ಕಟ್ಟುತ್ತೇನೆ ; ಪಕ್ಷ ಬಿಟ್ಟು ಹೋಗುವವರು ಹೋಗಲಿ : ಮಮತಾ ಬ್ಯಾನರ್ಜಿ ಕೋಲ್ಕತ್ತಾ: ಇತರ…

12 hours ago

ಉಡುಪಿ : ಮಲಬಾರ್ ಗೋಲ್ದ್ ನಲ್ಲಿ ಬ್ರಾಂಡ್ ವಾಚ್‌ಗಳ ವಿಶೇಷ ಪ್ರದರ್ಶನ-ಮಾರಾಟ ಮೇಳಕ್ಕೆ ಚಾಲನೆ – vishwanews24

ಉಡುಪಿ : ಮಲಬಾರ್ ಗೋಲ್ದ್ ನಲ್ಲಿ ಬ್ರಾಂಡ್ ವಾಚ್‌ಗಳ ವಿಶೇಷ ಪ್ರದರ್ಶನ-ಮಾರಾಟ ಮೇಳಕ್ಕೆ ಚಾಲನೆ ಉಡುಪಿ: ಮಲಬಾರ್ ಗೋಲ್ಡ್ ಅಂಡ್…

12 hours ago