ಮಂಗಳೂರು: ಇಸ್ರೇಲ್ ನಲ್ಲಿರುವ ಕರಾವಳಿಯ ಜನರನ್ನು ಸುರಕ್ಷಿತವಾಗಿ ಕರೆತರುವ ಕೆಲಸವನ್ನು ಕೇಂದ್ರ ಸರಕಾರ ಮಾಡುತ್ತದೆ ಯಾರೂ ಭಯ ಪಡುವ ಅಗತ್ಯವಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.
ಇಸ್ರೇಲ್ ನಲ್ಲಿ ಹಮಾಸ್ ಬಂಡುಕೋರರು ನಡೆಸಿರುವ ರಾಕೆಟ್ ದಾಳಿಗೆ ಪ್ರತಿಯಾಗಿ ಇಸ್ರೇಲ್ ದಾಳಿ ನಡೆಸುತ್ತಿದ್ದು ಇದೀಗ ಇಸ್ರೇಲ್ ನಲ್ಲಿ ಯುದ್ಧದ ಪರಿಸ್ಥಿತಿ ನಿರ್ಮಾಣವಾಗಿದ್ದು ಅಲ್ಲದೆ ಉದ್ಯೋಗ ಅರಸಿ ಕರಾವಳಿಯಾ ಸಾವಿರಾರು ಮಂದಿ ಇದೀಗ ಇಸ್ರೇಲ್ ನಲ್ಲಿ ಸಿಲುಕಿದ್ದಾರೆ ಈ ಕುರಿತು ಮಾತನಾಡಿದ ನಳಿನ್ ಕುಮಾರ್ ಕಟೀಲ್ ಯಾರು ಭಯ ಪಡಬೇಕಾಗಿಲ್ಲ ಇಸ್ರೇಲ್ ನಲ್ಲಿ ಐದು ಸಾವಿರ ದ.ಕ ಜಿಲ್ಲೆಯ ಜನರು ಇದ್ದಾರೆಂಬ ಮಾಹಿತಿ ಇದೆ ಈಗಾಗಲೇ ವಿದೇಶಾಂಗ ಇಲಾಖೆ ಸಚಿವರಿಗೆ ಪತ್ರ ಬರೆದಿದ್ದೇನೆ, ಯಾರಿಗೂ ಅಪಾಯ ಆಗದಂತೆ ಅವರಿಗೆ ರಕ್ಷಣೆ ಒದಗಿಸ್ತೇವೆ ಅಲ್ಲದೆ ಅವರನ್ನು ಸುರಕ್ಷಿತವಾಗಿ ಕರೆ ತರುವ ಕೆಲಸ ನಮ್ಮ ಸರ್ಕಾರ ಮಾಡಲಿದೆ ಎಂದು ಹೇಳಿದರು.
ಕರಾವಳಿಗರ ರಕ್ಷಣೆ ಕುರಿತು ಸಚಿವ ಮುರಳೀಧರನ್ ಅವರ ಜೊತೆಗೂ ನಾನು ಮಾತನಾಡಿದ್ದೇನೆ, ದ.ಕ ಜಿಲ್ಲೆಯ ಪ್ರಭಾರ ಜಿಲ್ಲಾಧಿಕಾರಿಗಳಿಗೆ ಜಿಲ್ಲೆಯ ಇಸ್ರೇಲ್ ವಾಸಿಗಳ ಪೂರ್ಣ ಮಾಹಿತಿ ತರಿಸಿ ಕೊಳ್ಳಲು ಸೂಚಿಸ್ತೇನೆ ಯುದ್ಧದ ಪರಿಸ್ಥಿತಿ ಇದ್ದಾಗ ಅವರ ಮನೆಯವರಿಗೆ ಭಯದ ವಾತಾವರಣ ಇರುತ್ತವೆ, ಈಗಲೂ ಇಸ್ರೇಲ್ ನಲ್ಲಿದ್ದವರು ಸುರಕ್ಷಿತವಾಗಿ ಇದ್ದರೂ ಭಯದ ವಾತಾವರಣ ಇದ್ದೆ ಇರುತ್ತದೆ, ರಷ್ಯಾ-ಉಕ್ರೇನ್ ಯುದ್ದ ಆದಾಗಲೂ ಇಂಥದ್ದೇ ಪರಿಸ್ಥಿತಿ ಇತ್ತು ಆಗಲೂ ಅವರ ಮನೆಗಳಿಗೆ ತೆರಳಿ ಸಮಾಧಾನ ಹೇಳಿದ್ದೆವು, ಮೋದಿ ಸರ್ಕಾರ ಆಗಲೂ ಅಲ್ಲಿದ್ದ ಭಾರತೀಯರ ರಕ್ಷಣೆ ಮಾಡಿತ್ತು ಅದೇ ಕೆಲಸವನ್ನು ಈಗಲೂ ಮಾಡುತ್ತದೆ ಎಂದು ಹೇಳಿದರು.
ನಾನು ಎಂಬೆಸ್ಸಿ ಜೊತೆಗೆ ಸಂಪರ್ಕದಲ್ಲಿ ಇದ್ದೇನೆ, ಯಾರೂ ಭಯ ಪಡೋ ಅಗತ್ಯ ಇಲ್ಲ, ಏನೇ ಆತಂಕ ಇದ್ದರೂ ನನ್ನನ್ನ ನೇರವಾಗಿ ಸಂಪರ್ಕಿಸಿ ಎಂದು ಹೇಳಿದರು.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…