Featured

ಮಂಗಳೂರು: ಇಸ್ರೇಲ್ ನಲ್ಲಿರುವ ಕರಾವಳಿಯ ಜನರನ್ನು ಸುರಕ್ಷಿತವಾಗಿ ಕರೆತರುವ ಕೆಲಸವನ್ನು ಕೇಂದ್ರ ಸರಕಾರ ಮಾಡುತ್ತದೆ ಯಾರೂ ಭಯ ಪಡುವ ಅಗತ್ಯವಿಲ್ಲ : ನಳಿನ್ – Vishwanews24

ಮಂಗಳೂರು:ಯಾರೂ ಭಯ ಪಡೋ ಅಗತ್ಯ ಇಲ್ಲ, ಏನೇ ಆತಂಕ ಇದ್ದರೂ ನನ್ನನ್ನ ನೇರವಾಗಿ ಸಂಪರ್ಕಿಸಿ : ನಳಿನ್

ಮಂಗಳೂರು: ಇಸ್ರೇಲ್ ನಲ್ಲಿರುವ ಕರಾವಳಿಯ ಜನರನ್ನು ಸುರಕ್ಷಿತವಾಗಿ ಕರೆತರುವ ಕೆಲಸವನ್ನು ಕೇಂದ್ರ ಸರಕಾರ ಮಾಡುತ್ತದೆ ಯಾರೂ ಭಯ ಪಡುವ ಅಗತ್ಯವಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.

ಇಸ್ರೇಲ್ ನಲ್ಲಿ ಹಮಾಸ್ ಬಂಡುಕೋರರು ನಡೆಸಿರುವ ರಾಕೆಟ್ ದಾಳಿಗೆ ಪ್ರತಿಯಾಗಿ ಇಸ್ರೇಲ್ ದಾಳಿ ನಡೆಸುತ್ತಿದ್ದು ಇದೀಗ ಇಸ್ರೇಲ್ ನಲ್ಲಿ ಯುದ್ಧದ ಪರಿಸ್ಥಿತಿ ನಿರ್ಮಾಣವಾಗಿದ್ದು ಅಲ್ಲದೆ ಉದ್ಯೋಗ ಅರಸಿ ಕರಾವಳಿಯಾ ಸಾವಿರಾರು ಮಂದಿ ಇದೀಗ ಇಸ್ರೇಲ್ ನಲ್ಲಿ ಸಿಲುಕಿದ್ದಾರೆ ಈ ಕುರಿತು ಮಾತನಾಡಿದ ನಳಿನ್ ಕುಮಾರ್ ಕಟೀಲ್ ಯಾರು ಭಯ ಪಡಬೇಕಾಗಿಲ್ಲ ಇಸ್ರೇಲ್ ನಲ್ಲಿ ಐದು ಸಾವಿರ ದ.ಕ ಜಿಲ್ಲೆಯ ಜನರು ಇದ್ದಾರೆಂಬ ಮಾಹಿತಿ ಇದೆ ಈಗಾಗಲೇ ವಿದೇಶಾಂಗ ಇಲಾಖೆ ಸಚಿವರಿಗೆ ಪತ್ರ ಬರೆದಿದ್ದೇನೆ, ಯಾರಿಗೂ ಅಪಾಯ ಆಗದಂತೆ ಅವರಿಗೆ ರಕ್ಷಣೆ ಒದಗಿಸ್ತೇವೆ ಅಲ್ಲದೆ ಅವರನ್ನು ಸುರಕ್ಷಿತವಾಗಿ ಕರೆ ತರುವ ಕೆಲಸ ನಮ್ಮ ಸರ್ಕಾರ ಮಾಡಲಿದೆ ಎಂದು ಹೇಳಿದರು.

ಕರಾವಳಿಗರ ರಕ್ಷಣೆ ಕುರಿತು ಸಚಿವ ಮುರಳೀಧರನ್ ಅವರ ಜೊತೆಗೂ ನಾನು ಮಾತನಾಡಿದ್ದೇನೆ, ದ.ಕ ಜಿಲ್ಲೆಯ ಪ್ರಭಾರ ಜಿಲ್ಲಾಧಿಕಾರಿಗಳಿಗೆ ಜಿಲ್ಲೆಯ ಇಸ್ರೇಲ್ ವಾಸಿಗಳ ಪೂರ್ಣ ಮಾಹಿತಿ ತರಿಸಿ ಕೊಳ್ಳಲು ಸೂಚಿಸ್ತೇನೆ ಯುದ್ಧದ ಪರಿಸ್ಥಿತಿ ಇದ್ದಾಗ ಅವರ ಮನೆಯವರಿಗೆ ಭಯದ ವಾತಾವರಣ ಇರುತ್ತವೆ, ಈಗಲೂ ಇಸ್ರೇಲ್ ನಲ್ಲಿದ್ದವರು ಸುರಕ್ಷಿತವಾಗಿ ಇದ್ದರೂ ಭಯದ ವಾತಾವರಣ ಇದ್ದೆ ಇರುತ್ತದೆ, ರಷ್ಯಾ-ಉಕ್ರೇನ್ ಯುದ್ದ ಆದಾಗಲೂ ಇಂಥದ್ದೇ ಪರಿಸ್ಥಿತಿ ಇತ್ತು ಆಗಲೂ ಅವರ ಮನೆಗಳಿಗೆ ತೆರಳಿ ಸಮಾಧಾನ ಹೇಳಿದ್ದೆವು, ಮೋದಿ ಸರ್ಕಾರ ಆಗಲೂ ಅಲ್ಲಿದ್ದ ಭಾರತೀಯರ ರಕ್ಷಣೆ ‌ಮಾಡಿತ್ತು ಅದೇ ಕೆಲಸವನ್ನು ಈಗಲೂ ಮಾಡುತ್ತದೆ ಎಂದು ಹೇಳಿದರು.

ನಾನು ಎಂಬೆಸ್ಸಿ ಜೊತೆಗೆ ಸಂಪರ್ಕದಲ್ಲಿ ಇದ್ದೇನೆ, ಯಾರೂ ಭಯ ಪಡೋ ಅಗತ್ಯ ಇಲ್ಲ, ಏನೇ ಆತಂಕ ಇದ್ದರೂ ನನ್ನನ್ನ ನೇರವಾಗಿ ಸಂಪರ್ಕಿಸಿ ಎಂದು ಹೇಳಿದರು.

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

7 hours ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

7 hours ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

2 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

3 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

3 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

3 days ago