Featured

ಮಂಗಳೂರು: ಈದ್ ಮೀಲಾದ್  ಸಂದರ್ಭ ಸಂಘಪರಿವಾರ ಶಾಂತಿ ಕದಡುವ ಹುನ್ನಾರ: ಗರಿಷ್ಠ ಭದ್ರತೆ ನೀಡಲು ಎಸ್‌ಡಿಪಿಐ ಆಗ್ರಹ – vishwanews24

ಮಂಗಳೂರು: ಈದ್ ಮೀಲಾದ್  ಸಂದರ್ಭ ಸಂಘಪರಿವಾರ ಶಾಂತಿ ಕದಡುವ ಹುನ್ನಾರ: ಗರಿಷ್ಠ ಭದ್ರತೆ ನೀಡಲು ಎಸ್‌ಡಿಪಿಐ ಆಗ್ರಹ

ಮಂಗಳೂರು: ನಾಗಮಂಗಳದಲ್ಲಿ ನಡೆದ ಘಟನೆಯನ್ನು ನೆಪವಾಗಿರಿಸಿಕೊಂಡು ಈದ್ ಮೀಲಾದ್ ಆಚರಣೆಯ ಸಂದರ್ಭದಲ್ಲಿ ಸಂಘಪರಿವಾರ ಶಾಂತಿ ಕದಡುವ ಸಲುವಾಗಿ ಕಿಡಿಗೇಡಿ ಕೃತ್ಯ ನಡೆಸುವ ಅಪಾಯ ಇದೆ.ಹಾಗಾಗಿ ಈದ್ ಮೀಲಾದ್ ಆಚರಣೆಗೆ ಹಾಗೂ ಪ್ರಮುಖವಾಗಿ ಮೆರವಣಿಗೆ ಸಂದರ್ಭದಲ್ಲಿ ಸೂಕ್ತ ಗರಿಷ್ಠ ಭದ್ರತೆಯನ್ನು ಪೋಲಿಸ್ ಇಲಾಖೆ ನೀಡಬೇಕು ಎಂದು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ದಕ್ಷಿಣ ಕನ್ನಡ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಶ್ರಫ್ ಅಡ್ಡೂರ್ ಆಗ್ರಹಿಸಿದ್ದಾರೆ.

ಈ ಬಗ್ಗೆ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು ಮಂಡ್ಯದ ನಾಗಮಂಗಲದಲ್ಲಿ ನಡೆದ ಅಹಿತಕರ ಘಟನೆಯನ್ನು ನೆಪವಾಗಿರಿಸಿಕೊಂಡು ಶರಣ್ ಪಂಪ್‌ವೆಲ್,ಆರ್ ಅಶೋಕ್, ಪ್ರತಾಪ್ ಸಿಂಹ ಸೇರಿದಂತೆ ಸಂಘಪರಿವಾರ ಹಾಗೂ ಬಿಜೆಪಿ ನಾಯಕರು ಒಂದು ಸಮುದಾಯವನ್ನು ಗುರಿಯಾಗಿರಿಸಿಕೊಂಡು ಪ್ರಚೋದನಕಾರಿ ಹೇಳಿಕೆಗಳನ್ನು ನೀಡುತ್ತಿದ್ದಾರೆ.

ಸುಪ್ರೀಂ ಕೋರ್ಟ್ ಆದೇಶದಂತೆ ಪ್ರಚೋದನಕಾರಿ ಭಾಷಣಕಾರರ ವಿರುದ್ಧ ಸುಮೊಟೊ ಪ್ರಕರಣ ದಾಖಲಿಸಿ ಬಂಧಿಸಬೇಕಾಗಿದ್ದ ಪೋಲೀಸರು ಮೌನಕ್ಕೆ ಶರಣಾಗಿರುವುದು ಖಂಡನೀಯ.

ಶರಣ್ ಪಂಪ್‌ವೆಲ್ ನೇರವಾಗಿಯೇ ಈದ್ ಮೀಲಾದ್ ಆಚರಣೆಯ ಸಂದರ್ಭದಲ್ಲಿ ಅಹಿತಕರ ಘಟನೆ ನಡೆಸುವ ಬಗ್ಗೆ ಮುನ್ನೆಚ್ಚರಿಕೆ ನೀಡಿದ್ದರು ಪೋಲೀಸರು ಈತನಕ ಕ್ರಮ ಕೈಗೊಂಡಿಲ್ಲ.ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿ ಇದ್ದರು ಇಂತಹ ಕೋಮು ಕ್ರಿಮಿಗಳ ವಿರುದ್ಧ ಕಾನೂನು ರೀತ್ಯಾ ಕ್ರಮ ಕೈಗೊಳ್ಳಲು ವಿಫಲವಾಗಿದೆ. ಸರ್ಕಾರ ಕೇಶವ ಕೃಪದ ಪ್ರಮುಖರನ್ನು ಸಂತುಷ್ಟ ಪಡಿಸುವಂತಹ ರೀತಿಯಲ್ಲಿ ಆಡಳಿತ ನಡೆಸುತ್ತಿದೆ ಎಂದು ಅವರು ಕಿಡಿಕಾರಿದ್ದಾರೆ‌.

ಪ್ರವಾದಿ ಮುಹಮ್ಮದ್ ಪೈಗಂಬರ್ ಜನ್ಮದಿನಾಚರಣೆಯ ಅಂಗವಾಗಿ ಜಿಲ್ಲಾಧ್ಯಂತ ನಡೆಯುವ ಕಾರ್ಯಕ್ರಮ ಹಾಗೂ ಮೆರವಣಿಗೆಗಳಿಗೆ ಪೋಲಿಸ್ ಇಲಾಖೆ ಗರಿಷ್ಠ ಭದ್ರತೆ ನೀಡಿ ಕಾರ್ಯಕ್ರಮ ಸುಸೂತ್ರವಾಗಿ ನಡೆಯುವಂತೆ ಕ್ರಮ ವಹಿಸಬೇಕು ಎಂದು ಆಗ್ರಹಿಸಿದ್ದಾರೆ.

Vishwa News 24

Recent Posts

ಪಡುಬಿದ್ರಿ: ಹೆಜಮಾಡಿ ಟೋಲ್ ಗೇಟ್ ವಿರುದ್ಧ ಪ್ರತಿಭಟನೆ ; ಟೋಲ್ ಗೇಟನ್ನು ತಕ್ಷಣ ತೆರವುಗೊಳಿಸಬೇಕೆಂದು ಆಗ್ರಹ – vishwanews24

ಪಡುಬಿದ್ರಿ: ಹೆಜಮಾಡಿ ಟೋಲ್ ಗೇಟ್ ವಿರುದ್ಧ ಪ್ರತಿಭಟನೆ .. ಟೋಲ್ ಗೇಟ ನ್ನು ತಕ್ಷಣ ತೆರವುಗೊಳಿಸಬೇಕು ಎಂದು ಆಗ್ರಹ 15…

16 hours ago

ಪೊಲೀಸ್ ಕಾನ್ಸ್ ಟೇಬಲ್ ಪರೀಕ್ಷೆ: ಹಿಜಾಬ್ ಧರಿಸಲು ಅವಕಾಶ ಇಲ್ಲ : ಧಾರ್ಮಿಕ ಉಡುಪುಗಳ ಗೊಂದಲ ಬಗ್ಗೆ ಪ್ರಿಯಾಂಕ ಖರ್ಗೆ ಸ್ಪಷ್ಟನೆ – vishwanews24

ಪೊಲೀಸ್ ಕಾನ್ಸ್ ಟೇಬಲ್ ಪರೀಕ್ಷೆ: ಹಿಜಾಬ್ ಧರಿಸಿ ಪರೀಕ್ಷೆ ಬರೆಯುವಂತಿಲ್ಲ : ಪ್ರಿಯಾಂಕ ಖರ್ಗೆ ಸ್ಪಷ್ಟನೆ ಬೆಂಗಳೂರು: ಕರ್ನಾಟಕದ ಪೊಲೀಸ್…

17 hours ago

ಸಾಂಸ್ಕೃತಿಕ ನಗರಿ ಮೈಸೂರಿಗೆ ಆಗಮಿಸಿದ ಪ್ರಧಾನಿ ಮೋದಿ – vishwanews24

ಸಾಂಸ್ಕೃತಿಕ ನಗರಿ ಮೈಸೂರಿಗೆ ಆಗಮಿಸಿದ ಪ್ರಧಾನಿ ಮೋದಿ ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿಗೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಿದ್ದಾರೆ. ವಿಶೇಷ ಸೇನಾ…

17 hours ago

ಕಡಬ: ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರಾ ಸ್ನಾನಘಟ್ಟ ಮುಳುಗಡೆ – vishwanews24

ಕಡಬ: ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರಾ ಸ್ನಾನಘಟ್ಟ ಮುಳುಗಡೆ :ಭಕ್ತರಿಗೆ ಡ್ರಮ್‌ಗಳಲ್ಲಿ ಪರ್ಯಾಯ ಸ್ನಾನ ವ್ಯವಸ್ಥೆ ಕಡಬ:ಕುಕ್ಕೆ ಸುಬ್ರಹ್ಮಣ್ಯದಲ್ಲಿ ನಿರಂತರ ಸುರಿಯುತ್ತಿರುವ…

17 hours ago

ಮೀನುಗಾರಿಕಾ ಋತು ಆರಂಭ ಹಿನ್ನೆಲೆ : ಮಲ್ಪೆ ಬಂದರಿಗೆ ಶಾಸಕ ಯಶ್ಪಾಲ್ ಸುವರ್ಣ ಭೇಟಿ – vishwanews24

ಮೀನುಗಾರಿಕಾ ಋತು ಆರಂಭ ಹಿನ್ನೆಲೆ : ಮಲ್ಪೆ ಬಂದರಿಗೆ ಶಾಸಕ ಯಶ್ಪಾಲ್ ಸುವರ್ಣ ಭೇಟಿ ಉಡುಪಿ: ಜೂನ್ ಮತ್ತು ಜುಲೈ…

18 hours ago

ಕುಂದಾಪುರ ರಿಚರ್ಡ್‌ ಹತ್ಯೆ ಪ್ರಕರಣ : ಆರೋಪಿ ಭಟ್ಕಳದಲ್ಲಿ ಬಂಧನ – vishwanews24

ಕುಂದಾಪುರ ರಿಚರ್ಡ್‌ ಹತ್ಯೆ ಪ್ರಕರಣ : ಆರೋಪಿ ಭಟ್ಕಳದಲ್ಲಿ ಬಂಧನ ಕುಂದಾಪುರ: ಇಲ್ಲಿನ ಚರ್ಚ್ ರಸ್ತೆಯ ಸಮೀಪ ಗುರುವಾರ ತಡರಾತ್ರಿ…

18 hours ago