ಮಂಗಳೂರು : ಈಶ್ವರಪ್ಪ ರಾಜೀನಾಮೆ ಕೊಡದಿರೋದು ಬಿಜೆಪಿ ಮುಖವಾಡ ಬಯಲು ಮಾಡಿದೆ : ಯು.ಟಿ.ಖಾದರ್ – Vishwanews24

Featured, ದಕ್ಷಿಣ ಕನ್ನಡ

ರಾಜೀನಾಮೆ ಪಡೆಯದೆ ಬಿಜೆಪಿ ಕೆಟ್ಟ ಸಂಪ್ರದಾಯಕ್ಕೆ ಇವತ್ತು ನಾಂದಿ ಹಾಡಿದೆ ..

ಜನರಿಗೆ ಬಿಜೆಪಿ ಮತ್ತು ಕಾಂಗ್ರೆಸ್ ಆಡಳಿತದ ತೂಕ ಗೊತ್ತಾಗಿದೆ..

ಜನರಿಗೊಂದು ಕಾನೂನು ಹಾಗೂ ಬಿಜೆಪಿ ‌ನಾಯಕರಿಗೊಂದು ಕಾನೂನು ಇದೆಯಾ..

ಮಂಗಳೂರು : ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದಲ್ಲಿ ಆರೋಪಿಯಾಗಿರುವ ಸಚಿವ ಕೆ.ಎಸ್ ಈಶ್ವರಪ್ಪ, ರಾಜೀನಾಮೆ ಕೊಡದಿರೋದು ಬಿಜೆಪಿ ಮುಖವಾಡ ಬಯಲು ಮಾಡಿದೆ. ರಾಜೀನಾಮೆ ಪಡೆಯದೆ ಬಿಜೆಪಿ ಕೆಟ್ಟ ಸಂಪ್ರದಾಯಕ್ಕೆ ಇವತ್ತು ನಾಂದಿ ಹಾಡಿದೆ ಎಂದು ವಿಪಕ್ಷ ಉಪನಾಯಕ ಯು.ಟಿ.ಖಾದರ್ ಆರೋಪಿಸಿದ್ದಾರೆ.

ನಗರದಲ್ಲಿ ಏ.14ರ ಗುರುವಾರ ಪತ್ರಿಕಾಗೋಷ್ಟಿ ನಡೆಸಿ ಮಾತನಾಡಿದ ಅವರು, ಬಿಜೆಪಿ ಪಕ್ಷಕ್ಕೆ ಅವರದ್ದೇ ಕಾರ್ಯಕರ್ತರನ್ನ ‌ರಕ್ಷಿಸಲು ಆಗಲಿಲ್ಲ. ಮಂತ್ರಿಯ ಮೇಲೆ ಎಫ್ ಐಆರ್ ಅದಾಗ ನಿಷ್ಪಕ್ಷಪಾತ ತನಿಖೆ ಆಗಬೇಕು. ಈ ಹಿಂದೆ ಇಂತಹ ಘಟನೆ ನಡೆದಾಗಪೊಲೀಸ್ ಅಧಿಕಾರಿಗಳಿಗೆ ಸ್ವತಂತ್ರ ತನಿಖೆ ಮಾಡಲು ಅವಕಾಶ ನೀಡಿ ‌ಮಂತ್ರಿಗಳು‌ ರಾಜೀನಾಮೆ ‌ಕೊಟ್ಟ ಇತಿಹಾಸ ಇದೆ. ಆದರೆ ಈಶ್ವರಪ್ಪ ರಾಜೀನಾಮೆ ಕೊಡದಿರೋದು ದೇಶದಲ್ಲಿ ಬಿಜೆಪಿ ಮುಖವಾಡ ಬಯಲು ಮಾಡಿದೆ. ಇದೊಂದು ಕೆಟ್ಟ ಸಂಪ್ರದಾಯಕ್ಕೆ ಬಿಜೆಪಿ ಇವತ್ತು ನಾಂದಿ ಹಾಡಿದೆ, ಇದರಿಂದ ಜನರಿಗೆ ಬಿಜೆಪಿ ಮತ್ತು ಕಾಂಗ್ರೆಸ್ ಆಡಳಿತದ ತೂಕ ಗೊತ್ತಾಗಿದೆ ಎಂದು ಹೇಳಿದ್ದಾರೆ.

ಈ ಹಿಂದೆ ಕಾಂಗ್ರೆಸ್ ಆಡಳಿತ ಇದ್ದಾಗ ಸಚಿವ ಕೆ.ಜೆ.ಜಾರ್ಜ್ ಅವರ ಮೇಲಿನ ಆರೋಪ ದಾಖಲಾದಾಗ ಅವರು ರಾಜೀನಾಮೆ ನೀಡಿದ್ದಾರೆ. ಸರಕಾರ ಪ್ರಕರಣವನ್ನು ಸಿಬಿಐ ತನಿಖೆಗೂ ವಹಿಸಿತ್ತು. ಆಗ ಕಾನೂನು ಬೇರೆ, ಈಗ ಕಾನೂನು ಬೇರೆ ಆಗಿದ್ಯಾ? ಜನರಿಗೊಂದು ಕಾನೂನು ಹಾಗೂ ಬಿಜೆಪಿ ‌ನಾಯಕರಿಗೊಂದು ಕಾನೂನು ಇದೆಯಾ ಎಂದು ಪ್ರಶ್ನಿಸಿದ್ದಾರೆ.

ಆತ್ಮಹತ್ಯೆ ಮಾಡಿಕೊಂಡ ಗುತ್ತಿಗೆದಾರ ಸಂತೋಷ್ ಪಾಟೀಲ್ ಕುಟುಂಬಕ್ಕೆ ಕೆಪಿಸಿಸಿ ವತಿಯಿಂದ 11 ಲಕ್ಷ ರೂ. ಪರಿಹಾರ : ಡಿ.ಕೆ. ಶಿ ಘೋಷಣೆ – Vishwanews24

ಸರ್ಕಾರದ ಕಾಮಗಾರಿಯಲ್ಲಿ ಶೇ 40 ಕಮೀಷನ್ ನೀಡಬೇಕು ಎಂದು ರಾಜ್ಯದ ಗುತ್ತಿಗೆದಾರರ ಸಂಘದ ಅಧ್ಯಕ್ಷರು ಪ್ರಧಾನಿಗೆ ಪತ್ರ ಬರೆದು ಮನವಿ ಮಾಡಿದ್ದರೂ ಯಾವುದೇ ಕ್ರಮ ಆಗಿಲ್ಲ. ಇದೀಗ ಬಿಜೆಪಿ ಪಕ್ಷದ ಕಾರ್ಯಕರ್ತನಿಗೆ ರಕ್ಷಣೆ ಇಲ್ಲದೆ, ನ್ಯಾಯ ದೊರೆಯದೆ ಆತ್ಮಹತ್ಯೆ ಮಾಡಿಕೊಳ್ಳುವ ಪರಿಸ್ಥಿತಿ ಬಿಜೆಪಿ ಆಡಳಿತದಿಂದ ಆಗಿದೆ. ಪ್ರಧಾನಿ ಮತ್ತು ಸಿಎಂಗೆ ಪತ್ರ ಬರೆದಿದ್ದರೂ ಒಂದೇ ಒಂದು ಉತ್ತರ ಯಾಕೆ ಕೊಟ್ಟಿಲ್ಲ. ಅಸೆಂಬ್ಲಿಯ ‌ನಿಲುವಲಿ ಸೂಚನೆ ಮೇಲೆ ಚರ್ಚೆಗೂ ಸರ್ಕಾರ ಅವಕಾಶ ಕೊಡದ ಸರ್ಕಾರ ತಕ್ಷಣ ಈಶ್ವರಪ್ಪ ರಾಜೀನಾಮೆ ಪಡೆಯಬೇಕು. ಮಾತ್ರವಲ್ಲದೆ ಕುಟುಂಬಕ್ಕೆ ಪರಿಹಾರ ನೀಡಬೇಕು ಎಂದು ಆಗ್ರಹಿಸಿದ್ದಾರೆ.

ವರ್ಕ್ ಆರ್ಡರ್ ಮತ್ತು ಆತ್ಮಹತ್ಯೆಗೆ ಸಂಬಂಧ ಕಲ್ಪಿಸಬೇಡಿ ಎಂದು ಅವರು ಅಲ್ಲಿ ಕೆಲಸ ನಡೆಯುತ್ತಿದ್ದಾಗ ಸಿಇಓ ಮತ್ತು ಅಲ್ಲಿನ ಅಧಿಕಾರಿಗಳು ಎಲ್ಲಿ ಹೋಗಿದ್ದರು, ಸರ್ಕಾರಿ ಜಾಗದಲ್ಲಿ ಯಾರೋ ಒಬ್ಬ ಕೆಲಸ ಮಾಡಿದಾಗ ಸುಮ್ಮನಿರುತ್ತಾರೆಯೇ ಈ ಬಗ್ಗೆ ಸೂಕ್ತ ತನಿಖೆ ಆಗಲಿ, ಸತ್ಯಾಂಶ ಇಲ್ಲದೇ ಇದ್ದರೆ ಮತ್ತೆ ಸ್ಥಾನಕ್ಕೆ ಬರಲಿ ಕಾಂಗ್ರೆಸ್ ಸಾವಿನ ಮನೆಯಲ್ಲಿ ರಾಜಕೀಯ ಮಾಡಲು ಹೋಗಲ್ಲ ಎಂದು ಹೇಳಿದ್ದಾರೆ.

ಹಿಜಬ್‌ ಧರಿಸಿ ದ್ವಿತೀಯ ಪಿಯು ಪರೀಕ್ಷೆ ಬರೆಯಲು ಅನುಮತಿ ಕೋರಿ ಸಿಎಂಗೆ ವಿದ್ಯಾರ್ಥಿನಿ ಮನವಿ  – Vishwanews24

Leave a Reply