Featured

ಮಂಗಳೂರು: ಈ ದೇಶದ ಮೇಲೆ ಹೇರಿದ್ದ ತುರ್ತು ಪರಿಸ್ಥಿತಿ ಸಂವಿಧಾನದ ಮೇಲೆ ನಡೆದ ಅತ್ಯಾಚಾರಕ್ಕೆ ಸಮ : ಆರಗ ಜ್ಞಾನೇಂದ್ರ  – Vishwanews24

ಮಂಗಳೂರು: ದೇಶದ ಮೇಲೆ ಹೇರಿದ್ದ ತುರ್ತು ಪರಿಸ್ಥಿತಿ ಸಂವಿಧಾನದ ಮೇಲೆ ನಡೆದ ಅತ್ಯಾಚಾರಕ್ಕೆ ಸಮ : ಆರಗ ಜ್ಞಾನೇಂದ್ರ

ಮಂಗಳೂರು: ಇಂದಿರಾಗಾಂಧಿ ಪ್ರಧಾನಿಯಾಗಿದ್ದ ಸಂದರ್ಭ ಈ ದೇಶದ ಮೇಲೆ ಹೇರಿದ್ದ ತುರ್ತು ಪರಿಸ್ಥಿತಿ ಸಂವಿಧಾನದ ಮೇಲೆ ನಡೆದ ಅತ್ಯಾಚಾರಕ್ಕೆ ಸಮನಾಗಿದ್ದು, ಈ ದೇಶದ ಸಂವಿಧಾನ, ಪ್ರಜಾಪ್ರಭುತ್ವ, ಕಾನೂನನ್ನು ಹತ್ತಿಕ್ಕುವ ಅವರ ನಿರ್ಧಾರ ಸೊಕ್ಕಿನ ತೀರ್ಮಾನವಾಗಿತ್ತು ಎಂದು ರಾಜ್ಯ ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.

ಮಂಗಳೂರು ದಕ್ಷಿಣ ಮಂಡಲ ಬಿಜೆಪಿ ವತಿಯಿಂದ ನಗರದ ಟಿ.ವಿ.ರಮಣ ಪೈ ಸಭಾಂಗಣದಲ್ಲಿ ಸೋಮವಾರ ನಡೆದ ತುರ್ತು ಪರಿಸ್ಥಿತಿಯ ಹೋರಾಟಗಾರರರಿಗೆ ಸನ್ಮಾನ ಹಾಗೂ ಪ್ರಧಾನಿ ನರೇಂದ್ರ ಮೋದಿ ಆಡಳಿತದ 8 ವರ್ಷಗಳ ಆಡಳಿತ ಹಿನ್ನೆಲೆಯಲ್ಲಿ ಸಾಧಕರ ಸಮಾವೇಶ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ‘ಇಂದಿರಾಗಾಂಧಿ ಅವರು ಸಂವಿಧಾನಕ್ಕಿಂತ, ಪ್ರಜಾಪ್ರಭುತ್ವಕ್ಕಿಂತ ಅತೀತಳು ಎಂದು ಅಂದುಕೊಂಡು ತುರ್ತು ಪರಿಸ್ಥಿತಿ ಹೇರಿದ್ದು ಈ ದೇಶದ ಘೋರ ದುರಂತಗಳಲ್ಲಿ ಒಂದು. ಅಂದು ದೇಶದ ಮೂಲೆ ಮೂಲೆಗಳಲ್ಲಿ ಲಕ್ಷಾಂತರ ಮಂದಿ ಜನಸಂಘ, ಸಂಘ ಪರಿವಾರದ ಕಾರ್ಯಕರ್ತರನ್ನು ಧಮನಿಸುವ ಕೆಲಸ ನಡೆಯಿತು. ಆದರೆ ಬಳಿಕ ನಡೆದ ಚುನಾವಣೆಯಲ್ಲಿ ಇಂದಿರಾ ಗಾಂಧಿ ಅವರು ಸೋಲನುಭವಿಸಿದ ಸುದ್ದಿ ಕೇಳಿದ್ದು ನನ್ನ ಜೀವಮಾನದ ಅತೀ ಸಂತೋಷದ ಕ್ಷಣವಾಗಿತ್ತು ಎಂದು ಅವರು ಹೇಳಿದರು.

ಪಕ್ಷಕ್ಕಾಗಿ ತ್ಯಾಗ, ಬಲಿದಾನ ಮಾಡಿದ ಮಹನೀಯರನ್ನು ನೆನೆಸುವುದರ ಜತೆಯಲ್ಲಿ ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಪಕ್ಷವನ್ನು ಇನ್ನಷ್ಟು ಬಲಿಷ್ಠವಾಗಿ ಕಟ್ಟಬೇಕಿದೆ. ಈ ನಡುವೆ ತುರ್ತು ಪರಿಸ್ಥಿತಿಯಲ್ಲಿ ಹೋರಾಡಿದ ಬಡ ಕುಟುಂಬದವರಿಗೆ ಪಿಂಚಣಿ ವ್ಯವಸ್ಥೆ ಮಾಡಿಸಿಕೊಡುವ ಬಗ್ಗೆಯೂ ನಾವು ಚಿಂತನೆ ನಡೆಸಿದ್ದೇವೆ ಎಂದು ಹೇಳಿದರು.

ಶಾಸಕ ಡಿ.ವೇದವ್ಯಾಸ್‌ ಕಾಮತ್‌, ಮಾಜಿ ಸಚಿವ ನಾಗರಾಜ ಶೆಟ್ಟಿ, ಮಾಜಿ ಎಂಎಲ್‌ಸಿ ಮೋನಪ್ಪ ಭಂಡಾರಿ, ಮುಡಾ ಅಧ್ಯಕ್ಷ ರವಿಶಂಕರ ಮಿಜಾರು, ಜಿಲ್ಲಾಬಿಜೆಪಿ ಉಪಾಧ್ಯಕ್ಷ ಸಂತೋಷ್‌ ಕುಮಾರ್‌ ರೈ, ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ಸುಧೀರ್‌ ಶೆಟ್ಟಿ, ಕಸ್ತೂರಿ ಪಂಜ, ಮಹಿಳಾ ಮೋರ್ಚಾದ ಪ್ರಭಾ ಮಾಲಿನಿ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

Vishwa News 24

Recent Posts

ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ – vishwanews24

 ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…

1 day ago

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ : ಬೆಸ್ಕಾಂ ಸ್ಪಷ್ಟನೆ – vishwanews24

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…

2 days ago

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ – vishwanews24

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…

2 days ago

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಆರೋಪ – vishwanews24

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಗಂಭೀರ…

2 days ago

ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ: ಸಂಸದ ಯದುವೀರ್ ಒಡೆಯರ್ ಆಕ್ಷೇಪ – vishwanews24

ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…

2 days ago

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ – vishwanews24

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…

2 days ago