ಮಂಗಳೂರು : ಆ ಬಾವಿಯ ನೀರು ಎಲ್ಲಾ ಬಾವಿಗಳಲ್ಲಿ ಸಿಗುವ ಮಾಮೂಲಿ ನೀರಲ್ಲ. ಬದಲಾಗಿ ಜೀವ ಉಳಿಸುವ ಸಂಜೀವಿನಿ. ಯಾವುದೇ ರೀತಿಯ ವಿಷ ಜಂತುಗಳು ಕಡಿದರೆ ಆ ಬಾವಿಯ ನೀರನ್ನು ಕುಡಿದು, ಅಲ್ಲಿನ ಮಣ್ಣನ್ನು ಹಾಕಿಕೊಂಡರೆ ವಿಷವೆಲ್ಲಾ ಇಳಿಯುತ್ತದೆ. ಏತದ ಮೂಲಕ ನೀರನ್ನು ಎಳೆಯುವ ಈ ಬಾವಿ ಪವಿತ್ರ ಸಂಜೀವಿನಿ ಬಾವಿ.
ಮಂಗಳೂರಿನ ಕಟೀಲು ಸಮೀಪದ ಶಿಬರೂರು ಎಂಬಲ್ಲಿರುವ ಶ್ರೀ ಕೊಡಮಣಿತ್ತಾಯ ದೈವಸ್ಥಾನದ ಪವಿತ್ರ ಬಾವಿ ಇದು. ವರ್ಷಕ್ಕೊಂದು ಬಾರಿ ನಡೆಯುವ ಇಲ್ಲಿನ ವಾರ್ಷಿಕ ಜಾತ್ರಾ ಮಹೋತ್ಸವದ ಎಂಟು ದಿನಗಳ ಕಾಲ ಈ ಬಾವಿಯ ನೀರನ್ನು ಅತೀ ಹೆಚ್ಚು ಭಕ್ತರಿಗೆ ತೆಗೆದುನೀಡಲಾಗುತ್ತದೆ.
ಪುರಾತನ ಕಾಲದಲ್ಲಿ ಸ್ಥಳೀಯ ದೈವೀ ವೈದ್ಯರಾದ ತ್ಯಾಂಪಣ್ಣ ಶೆಟ್ಟಿ ಎಂಬವರು ತನ್ನಲ್ಲಿದ್ದ ವಿಷ ಹೀರುವ ಕಲ್ಲೊಂದನ್ನು ಲೋಕದ ಜನತೆಯ ಒಳಿತಿಗಾಗಿ ಈ ಬಾವಿಗೆ ಹಾಕಿದ್ದಾರೆ. ಹೀಗಾಗಿ ಆ ಶಕ್ತಿಯಿಂದಲೇ ಈ ಬಾವಿಯ ನೀರು ಯಾವುದೇ ರೀತಿಯ ವಿಷವನ್ನು ಹೀರಿಕೊಳ್ಳುತ್ತದೆ ಅನ್ನುವ ನಂಬಿಕೆ ಹಿಂದಿನ ಕಾಲದಿಂದ ಇಂದಿನವರೆಗೂ ಉಳಿದುಕೊಂಡು ಬಂದಿದೆ.
ಜಾತ್ರಾ ಮಹೋತ್ಸವದ 8 ದಿನದಲ್ಲಿ ಈ ದೈವಸ್ಥಾನಕ್ಕೆ ಲಕ್ಷಾಂತರ ಭಕ್ತರು ಬಂದು, ಈ ಪವಿತ್ರ ನೀರನ್ನು ಕೊಂಡೊಯ್ಯತ್ತಾರೆ. ಈ ನೀರನ್ನು ಕುಡಿಯುವುದರಿಂದ ವರ್ಷವಿಡೀ ದೇಹದಲ್ಲಿದ್ದ ವಿಷಕಾರಿ ಅಂಶಗಳು ಹೋಗುತ್ತದೆ. ಜೊತೆಗೆ ವಿಷಜಂತುಗಳು ಕಡಿದಂತಹ ಸಂದರ್ಭದಲ್ಲಿ ತಕ್ಷಣ ಈ ನೀರನ್ನು ಕುಡಿದು ನಂತರ ಈ ಕ್ಷೇತ್ರದಲ್ಲೇ ಸಿಗುವ ಮಣ್ಣನ್ನು ನೀರಲ್ಲಿ ಬೆರಸಿ ಗಾಯಕ್ಕೆ ಹಚ್ಚಿದರೆ ವಿಷ ಕಾರುತ್ತದೆ ಅನ್ನುವ ನಂಬಿಕೆ ಇಂದಿಗೂ ಉಳಿದಿದೆ. ನಾನಾ ಊರುಗಳಿಂದ ಬರುವ ಭಕ್ತರು ಈ ಆಧುನಿಕ ಯುಗದಲ್ಲೂ ಈ ನಂಬಿಕೆಯನ್ನು ಇಟ್ಟು ನೀರು ಹಾಗೂ ಮಣ್ಣನ್ನು ಕೊಂಡೊಯ್ಯಲು ಮುಗಿ ಬೀಳುತ್ತಾರೆ.
ಈ ಪವಿತ್ರ ನೀರಿಗೆ ಒಂದು ವರ್ಷಗಳ ಕಾಲ ಶಕ್ತಿ ಇರುತ್ತದೆ. ಹೀಗಾಗಿ ಪ್ರತಿ ವರ್ಷವೂ ಹೊಸ ನೀರನ್ನು ಹಾಗೂ ಮಣ್ಣನ್ನು ಕೊಂಡೊಯ್ಯಲು ಭಕ್ತರು ಜಾತ್ರಾ ಸಂದರ್ಭದಲ್ಲಿ ಇಲ್ಲಿಗೆ ಬರುತ್ತಾರೆ. ಇಂದಿಗೂ ಹಳ್ಳಿ ಪ್ರದೇಶದ ಜನ ವಿಷ ಜಂತುಗಳ ಕಡಿತಕ್ಕೊಳಗಾದರೆ ಈ ನೀರು ಹಾಗೂ ಮಣ್ಣಿನ ಮೊರೆ ಹೋಗುತ್ತಾರೆಯೇ ಹೊರತು ಆಸ್ಪತ್ರೆಗೆ ಹೋಗೋದಿಲ್ಲ. ಒಟ್ಟಿನಲ್ಲಿ ಈಗಿನ ಕಾಲದಲ್ಲೂ ಇಂತಹ ನಂಬಿಕೆ ಉಳಿಯಬೇಕಿದ್ದರೆ ಈ ಕ್ಷೇತ್ರದಲ್ಲಿ ಹಾಗೂ ಬಾವಿಯಲ್ಲಿ ದೈವಿ ಶಕ್ತಿ ಇದೆ ಎನ್ನುವುದರಲ್ಲಿ ಸಂದೇಹವಿಲ್ಲ.
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…