Featured

ಮಂಗಳೂರು: ಈ ದೈವಸ್ಥಾನದ ಬಾವಿಯ ನೀರು ಎಲ್ಲಾ ಬಾವಿಗಳಲ್ಲಿ ಸಿಗುವ ಮಾಮೂಲಿ ನೀರಲ್ಲ. ಇದು ಜೀವ ಉಳಿಸುವ ಸಂಜೀವಿನಿ – vishwanews24

ವಿಷ ಜಂತುಗಳು ಕಡಿದರೆ ಆ ಬಾವಿಯ ನೀರನ್ನು ಕುಡಿದು, ಅಲ್ಲಿನ ಮಣ್ಣನ್ನು ಹಾಕಿಕೊಂಡರೆ ವಿಷವೆಲ್ಲಾ ಇಳಿಯುತ್ತೆ..

ಶಿಬರೂರು ಶ್ರೀ ಕೊಡಮಣಿತ್ತಾಯ ದೈವಸ್ಥಾನದ ಪವಿತ್ರ ಬಾವಿ ಇದು

ಮಂಗಳೂರು : ಆ ಬಾವಿಯ ನೀರು ಎಲ್ಲಾ ಬಾವಿಗಳಲ್ಲಿ ಸಿಗುವ ಮಾಮೂಲಿ ನೀರಲ್ಲ. ಬದಲಾಗಿ ಜೀವ ಉಳಿಸುವ ಸಂಜೀವಿನಿ. ಯಾವುದೇ ರೀತಿಯ ವಿಷ ಜಂತುಗಳು ಕಡಿದರೆ ಆ ಬಾವಿಯ ನೀರನ್ನು ಕುಡಿದು, ಅಲ್ಲಿನ ಮಣ್ಣನ್ನು ಹಾಕಿಕೊಂಡರೆ ವಿಷವೆಲ್ಲಾ ಇಳಿಯುತ್ತದೆ. ಏತದ ಮೂಲಕ ನೀರನ್ನು ಎಳೆಯುವ ಈ ಬಾವಿ ಪವಿತ್ರ ಸಂಜೀವಿನಿ ಬಾವಿ.

ಮಂಗಳೂರಿನ ಕಟೀಲು ಸಮೀಪದ ಶಿಬರೂರು ಎಂಬಲ್ಲಿರುವ ಶ್ರೀ ಕೊಡಮಣಿತ್ತಾಯ ದೈವಸ್ಥಾನದ ಪವಿತ್ರ ಬಾವಿ ಇದು. ವರ್ಷಕ್ಕೊಂದು ಬಾರಿ ನಡೆಯುವ ಇಲ್ಲಿನ ವಾರ್ಷಿಕ ಜಾತ್ರಾ ಮಹೋತ್ಸವದ ಎಂಟು ದಿನಗಳ ಕಾಲ ಈ ಬಾವಿಯ ನೀರನ್ನು ಅತೀ ಹೆಚ್ಚು ಭಕ್ತರಿಗೆ ತೆಗೆದುನೀಡಲಾಗುತ್ತದೆ.

ಪುರಾತನ ಕಾಲದಲ್ಲಿ ಸ್ಥಳೀಯ ದೈವೀ ವೈದ್ಯರಾದ ತ್ಯಾಂಪಣ್ಣ ಶೆಟ್ಟಿ ಎಂಬವರು ತನ್ನಲ್ಲಿದ್ದ ವಿಷ ಹೀರುವ ಕಲ್ಲೊಂದನ್ನು ಲೋಕದ ಜನತೆಯ ಒಳಿತಿಗಾಗಿ ಈ ಬಾವಿಗೆ ಹಾಕಿದ್ದಾರೆ. ಹೀಗಾಗಿ ಆ ಶಕ್ತಿಯಿಂದಲೇ ಈ ಬಾವಿಯ ನೀರು ಯಾವುದೇ ರೀತಿಯ ವಿಷವನ್ನು ಹೀರಿಕೊಳ್ಳುತ್ತದೆ ಅನ್ನುವ ನಂಬಿಕೆ ಹಿಂದಿನ ಕಾಲದಿಂದ ಇಂದಿನವರೆಗೂ ಉಳಿದುಕೊಂಡು ಬಂದಿದೆ.

ಜಾತ್ರಾ ಮಹೋತ್ಸವದ 8 ದಿನದಲ್ಲಿ ಈ ದೈವಸ್ಥಾನಕ್ಕೆ ಲಕ್ಷಾಂತರ ಭಕ್ತರು ಬಂದು, ಈ ಪವಿತ್ರ ನೀರನ್ನು ಕೊಂಡೊಯ್ಯತ್ತಾರೆ. ಈ ನೀರನ್ನು ಕುಡಿಯುವುದರಿಂದ ವರ್ಷವಿಡೀ ದೇಹದಲ್ಲಿದ್ದ ವಿಷಕಾರಿ ಅಂಶಗಳು ಹೋಗುತ್ತದೆ. ಜೊತೆಗೆ ವಿಷಜಂತುಗಳು ಕಡಿದಂತಹ ಸಂದರ್ಭದಲ್ಲಿ ತಕ್ಷಣ ಈ ನೀರನ್ನು ಕುಡಿದು ನಂತರ ಈ ಕ್ಷೇತ್ರದಲ್ಲೇ ಸಿಗುವ ಮಣ್ಣನ್ನು ನೀರಲ್ಲಿ ಬೆರಸಿ ಗಾಯಕ್ಕೆ ಹಚ್ಚಿದರೆ ವಿಷ ಕಾರುತ್ತದೆ ಅನ್ನುವ ನಂಬಿಕೆ ಇಂದಿಗೂ ಉಳಿದಿದೆ. ನಾನಾ ಊರುಗಳಿಂದ ಬರುವ ಭಕ್ತರು ಈ ಆಧುನಿಕ ಯುಗದಲ್ಲೂ ಈ ನಂಬಿಕೆಯನ್ನು ಇಟ್ಟು ನೀರು ಹಾಗೂ ಮಣ್ಣನ್ನು ಕೊಂಡೊಯ್ಯಲು ಮುಗಿ ಬೀಳುತ್ತಾರೆ.

ಈ ಪವಿತ್ರ ನೀರಿಗೆ ಒಂದು ವರ್ಷಗಳ ಕಾಲ ಶಕ್ತಿ ಇರುತ್ತದೆ. ಹೀಗಾಗಿ ಪ್ರತಿ ವರ್ಷವೂ ಹೊಸ ನೀರನ್ನು ಹಾಗೂ ಮಣ್ಣನ್ನು ಕೊಂಡೊಯ್ಯಲು ಭಕ್ತರು ಜಾತ್ರಾ ಸಂದರ್ಭದಲ್ಲಿ ಇಲ್ಲಿಗೆ ಬರುತ್ತಾರೆ. ಇಂದಿಗೂ ಹಳ್ಳಿ ಪ್ರದೇಶದ ಜನ ವಿಷ ಜಂತುಗಳ ಕಡಿತಕ್ಕೊಳಗಾದರೆ ಈ ನೀರು ಹಾಗೂ ಮಣ್ಣಿನ ಮೊರೆ ಹೋಗುತ್ತಾರೆಯೇ ಹೊರತು ಆಸ್ಪತ್ರೆಗೆ ಹೋಗೋದಿಲ್ಲ. ಒಟ್ಟಿನಲ್ಲಿ ಈಗಿನ ಕಾಲದಲ್ಲೂ ಇಂತಹ ನಂಬಿಕೆ ಉಳಿಯಬೇಕಿದ್ದರೆ ಈ ಕ್ಷೇತ್ರದಲ್ಲಿ ಹಾಗೂ ಬಾವಿಯಲ್ಲಿ ದೈವಿ ಶಕ್ತಿ ಇದೆ ಎನ್ನುವುದರಲ್ಲಿ ಸಂದೇಹವಿಲ್ಲ.

Vishwa News 24

Recent Posts

ಉಡುಪಿ : ಮೇ 5 ರಂದು ನೇರ ಸಂದರ್ಶನ -vishwanews24

ಉಡುಪಿ : ಮೇ 5 ರಂದು ನೇರ ಸಂದರ್ಶನ ಉಡುಪಿ : ಉದ್ಯೋಗ ಆಕಾಂಕ್ಷಿಗಳಿಗೆ ಮೇ 5 ರಂದು ಬೆಳಗ್ಗೆ…

7 hours ago

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಡೈಮಂಡ್ಸ್ ಆಭರಣಗಳ ಪ್ರದರ್ಶನಕ್ಕೆ ಚಾಲನೆ – vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಡೈಮಂಡ್ಸ್ ಆಭರಣಗಳ ಪ್ರದರ್ಶನಕ್ಕೆ ಚಾಲನೆ ಉಡುಪಿ : ಮಾಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯ…

7 hours ago

ಬಿಜೆಪಿ ಬಡ, ಮಧ್ಯಮ ವರ್ಗದವರ ಬದುಕನ್ನು ದುರ್ಬಲ ಮಾಡಲು ಹೊರಟಿದೆ : ಈಶ್ವರ್ ಖಂಡ್ರೆ – vishwanews24

ಮೋದಿ ದುರಾಡಳಿತದ ವಿರುದ್ಧ ಮಾತಾಡಲು ಬಿಜೆಪಿಗರಿಗೆ ಸವಾಲು.. ಬಿಜೆಪಿಯ ಬಡಜನ ವಿರೋಧಿ ಬಣ್ಣ ಮತ್ತೆ ಬಯಲು.. ವಾಣಿಜ್ಯ ಸಿಲಿಂಡರ್ ದರ…

13 hours ago

ಪತ್ನಿಯ ಅಕ್ರಮ ಸಂಬಂಧ, ಕಿರುಕುಳಕ್ಕೆ ಬೇಸತ್ತು ಗಂಡ ನೇಣಿಗೆ ಶರಣು – vishwanews24

ಪತ್ನಿಯ ಅಕ್ರಮ ಸಂಬಂಧ, ಕಿರುಕುಳಕ್ಕೆ ಬೇಸತ್ತು ಗಂಡ ನೇಣಿಗೆ ಶರಣು ಕಾರವಾರ: ಪತ್ನಿಯ ಕಿರುಕುಳಕ್ಕೆ ಬೇಸತ್ತು ಪತಿ ಆತ್ಮಹತ್ಯೆ ಮಾಡಿಕೊಂಡ…

13 hours ago

ಕೌಟುಂಬಿಕ ಕಲಹ : ಇಬ್ಬರು ಮಕ್ಕಳನ್ನು ಕೊಂದು ಆತ್ಮಹತ್ಯೆಗೆ ಶರಣಾದ ತಂದೆ  – vishwanews24

ಮನೆಯಲ್ಲಿದ್ದ ಚಿನ್ನಾಭರಣ ಸಮೇತ ಪತ್ನಿ ಪರಾರಿ: ಮಕ್ಕಳಿಬ್ಬರನ್ನು ಕೊಲೆಗೈದು ನೇಣಿಗೆ ಶರಣಾದ ಪತಿ ಕುಣಿಗಲ್ : ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ…

14 hours ago

ನಿಮ್ಮ ಮೊಬೈಲ್‌ನಲ್ಲಿ ಅಲರ್ಟ್ ಸಂದೇಶ, ಸೈರನ್ ಮೊಳಗಿದ್ರೆ ಭಯಪಡಬೇಡಿ.. !! – vishwanews24

NDMAಯಿಂದ ಬರುತ್ತೆ ತುರ್ತು ಎಚ್ಚರಿಕೆ ಸಂದೇಶ.. ನಿಮ್ಮ ಮೊಬೈಲ್‌ನಲ್ಲಿ ಅಲರ್ಟ್ ಸಂದೇಶ, ಸೈರನ್ ಮೊಳಗಿದ್ರೆ ಭಯಪಡಬೇಡಿ.. ನಿಮ್ಮ ಮೊಬೈಲ್‌ ಫೋನ್‌…

14 hours ago