ಮಂಗಳೂರು : ಆ ಬಾವಿಯ ನೀರು ಎಲ್ಲಾ ಬಾವಿಗಳಲ್ಲಿ ಸಿಗುವ ಮಾಮೂಲಿ ನೀರಲ್ಲ. ಬದಲಾಗಿ ಜೀವ ಉಳಿಸುವ ಸಂಜೀವಿನಿ. ಯಾವುದೇ ರೀತಿಯ ವಿಷ ಜಂತುಗಳು ಕಡಿದರೆ ಆ ಬಾವಿಯ ನೀರನ್ನು ಕುಡಿದು, ಅಲ್ಲಿನ ಮಣ್ಣನ್ನು ಹಾಕಿಕೊಂಡರೆ ವಿಷವೆಲ್ಲಾ ಇಳಿಯುತ್ತದೆ. ಏತದ ಮೂಲಕ ನೀರನ್ನು ಎಳೆಯುವ ಈ ಬಾವಿ ಪವಿತ್ರ ಸಂಜೀವಿನಿ ಬಾವಿ.
ಮಂಗಳೂರಿನ ಕಟೀಲು ಸಮೀಪದ ಶಿಬರೂರು ಎಂಬಲ್ಲಿರುವ ಶ್ರೀ ಕೊಡಮಣಿತ್ತಾಯ ದೈವಸ್ಥಾನದ ಪವಿತ್ರ ಬಾವಿ ಇದು. ವರ್ಷಕ್ಕೊಂದು ಬಾರಿ ನಡೆಯುವ ಇಲ್ಲಿನ ವಾರ್ಷಿಕ ಜಾತ್ರಾ ಮಹೋತ್ಸವದ ಎಂಟು ದಿನಗಳ ಕಾಲ ಈ ಬಾವಿಯ ನೀರನ್ನು ಅತೀ ಹೆಚ್ಚು ಭಕ್ತರಿಗೆ ತೆಗೆದುನೀಡಲಾಗುತ್ತದೆ.
ಪುರಾತನ ಕಾಲದಲ್ಲಿ ಸ್ಥಳೀಯ ದೈವೀ ವೈದ್ಯರಾದ ತ್ಯಾಂಪಣ್ಣ ಶೆಟ್ಟಿ ಎಂಬವರು ತನ್ನಲ್ಲಿದ್ದ ವಿಷ ಹೀರುವ ಕಲ್ಲೊಂದನ್ನು ಲೋಕದ ಜನತೆಯ ಒಳಿತಿಗಾಗಿ ಈ ಬಾವಿಗೆ ಹಾಕಿದ್ದಾರೆ. ಹೀಗಾಗಿ ಆ ಶಕ್ತಿಯಿಂದಲೇ ಈ ಬಾವಿಯ ನೀರು ಯಾವುದೇ ರೀತಿಯ ವಿಷವನ್ನು ಹೀರಿಕೊಳ್ಳುತ್ತದೆ ಅನ್ನುವ ನಂಬಿಕೆ ಹಿಂದಿನ ಕಾಲದಿಂದ ಇಂದಿನವರೆಗೂ ಉಳಿದುಕೊಂಡು ಬಂದಿದೆ.
ಜಾತ್ರಾ ಮಹೋತ್ಸವದ 8 ದಿನದಲ್ಲಿ ಈ ದೈವಸ್ಥಾನಕ್ಕೆ ಲಕ್ಷಾಂತರ ಭಕ್ತರು ಬಂದು, ಈ ಪವಿತ್ರ ನೀರನ್ನು ಕೊಂಡೊಯ್ಯತ್ತಾರೆ. ಈ ನೀರನ್ನು ಕುಡಿಯುವುದರಿಂದ ವರ್ಷವಿಡೀ ದೇಹದಲ್ಲಿದ್ದ ವಿಷಕಾರಿ ಅಂಶಗಳು ಹೋಗುತ್ತದೆ. ಜೊತೆಗೆ ವಿಷಜಂತುಗಳು ಕಡಿದಂತಹ ಸಂದರ್ಭದಲ್ಲಿ ತಕ್ಷಣ ಈ ನೀರನ್ನು ಕುಡಿದು ನಂತರ ಈ ಕ್ಷೇತ್ರದಲ್ಲೇ ಸಿಗುವ ಮಣ್ಣನ್ನು ನೀರಲ್ಲಿ ಬೆರಸಿ ಗಾಯಕ್ಕೆ ಹಚ್ಚಿದರೆ ವಿಷ ಕಾರುತ್ತದೆ ಅನ್ನುವ ನಂಬಿಕೆ ಇಂದಿಗೂ ಉಳಿದಿದೆ. ನಾನಾ ಊರುಗಳಿಂದ ಬರುವ ಭಕ್ತರು ಈ ಆಧುನಿಕ ಯುಗದಲ್ಲೂ ಈ ನಂಬಿಕೆಯನ್ನು ಇಟ್ಟು ನೀರು ಹಾಗೂ ಮಣ್ಣನ್ನು ಕೊಂಡೊಯ್ಯಲು ಮುಗಿ ಬೀಳುತ್ತಾರೆ.
ಈ ಪವಿತ್ರ ನೀರಿಗೆ ಒಂದು ವರ್ಷಗಳ ಕಾಲ ಶಕ್ತಿ ಇರುತ್ತದೆ. ಹೀಗಾಗಿ ಪ್ರತಿ ವರ್ಷವೂ ಹೊಸ ನೀರನ್ನು ಹಾಗೂ ಮಣ್ಣನ್ನು ಕೊಂಡೊಯ್ಯಲು ಭಕ್ತರು ಜಾತ್ರಾ ಸಂದರ್ಭದಲ್ಲಿ ಇಲ್ಲಿಗೆ ಬರುತ್ತಾರೆ. ಇಂದಿಗೂ ಹಳ್ಳಿ ಪ್ರದೇಶದ ಜನ ವಿಷ ಜಂತುಗಳ ಕಡಿತಕ್ಕೊಳಗಾದರೆ ಈ ನೀರು ಹಾಗೂ ಮಣ್ಣಿನ ಮೊರೆ ಹೋಗುತ್ತಾರೆಯೇ ಹೊರತು ಆಸ್ಪತ್ರೆಗೆ ಹೋಗೋದಿಲ್ಲ. ಒಟ್ಟಿನಲ್ಲಿ ಈಗಿನ ಕಾಲದಲ್ಲೂ ಇಂತಹ ನಂಬಿಕೆ ಉಳಿಯಬೇಕಿದ್ದರೆ ಈ ಕ್ಷೇತ್ರದಲ್ಲಿ ಹಾಗೂ ಬಾವಿಯಲ್ಲಿ ದೈವಿ ಶಕ್ತಿ ಇದೆ ಎನ್ನುವುದರಲ್ಲಿ ಸಂದೇಹವಿಲ್ಲ.
ಮಂಗಳೂರು: ಮನೆ ಮೇಲೆ ತಡೆಗೋಡೆ ಕುಸಿತ; ಇಬ್ಬರು ಮಕ್ಕಳು ಸೇರಿ ಮೂವರು ದುರ್ಮರಣ ಮಂಗಳೂರು: ನಗರದಲ್ಲಿ ಸುರಿಯುತ್ತಿರುವ ಭಾರೀ ಮಳೆಯ…
ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…
ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…
ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…
ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…
ನಂದಿನಿ ಮಿಲ್ಕ್ ಪಾರ್ಲರ್ನಲ್ಲಿ ಅಗ್ನಿ ಅವಘಡ : ಶಾಕ್ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…