Featured

ಮಂಗಳೂರು : ಈ ಬಾರಿಯ ಕುದ್ರೋಳಿ ದಸರಾದಲ್ಲಿ ಡಿಜೆಗೆ ಅವಕಾಶ ಇಲ್ಲ : ಪದ್ಮರಾಜ ಆರ್ – vishwanews24

ಮಂಗಳೂರು :  ಕುದ್ರೋಳಿ ದಸರಾದಲ್ಲಿ ಡಿಜೆಗೆ ಅವಕಾಶ ಇಲ್ಲ : ಪದ್ಮರಾಜ್

ಮಂಗಳೂರು : ಸೆಪ್ಟೆಂಬರ್ 22 ರಿಂದ ಅಕ್ಟೋಬರ್ 2 ರವರೆಗೆ ಪ್ರಸಿದ್ಧ ಕುದ್ರೋಳಿ ಗೋಕರ್ಣನಾಥೇಶ್ವರ ದೇವಸ್ಥಾನದಲ್ಲಿ ಅದ್ಧೂರಿ ಮಂಗಳೂರು ದಸರಾ ಆಚರಣೆಗಳು ನಡೆಯಲಿವೆ ಎಂದು ದೇವಸ್ಥಾನದ ಖಜಾಂಚಿ ಪದ್ಮರಾಜ್ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಪ್ರಕಟಿಸಿದರು.

ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಕುದ್ರೋಳಿ ಕ್ಷೇತ್ರದ ದಸರಾದಲ್ಲಿ ಡಿಜೆ ಮತ್ತು ಅಬ್ಬರಕ್ಕೆ ಅವಕಾಶ ನೀಡುವುದೇ ಇಲ್ಲ. ಕಳೆದ ವರ್ಷ ಯಾರೋ ಕೆಲವರು ತಿಳಿಯದೇ ಡಿಜೆ ಹಾಕಿದ್ದಾರೆ. ಅದನ್ನು ಪೊಲೀಸರು ತಡೆದಿದ್ದಾರೆ. ಈ ವರ್ಷ ಡಿಜೆ ಕುರಿತು ಸರ್ಕಾರವೇ ಸ್ಪಷ್ಟ ನಿಲುವು ತಾಳಿದೆ. ಎಸ್‌ಒಪಿಯಲ್ಲಿ ನಿರ್ಬಂಧಗಳ ಮಾಹಿತಿಯನ್ನು ನೀಡಲಾಗಿದೆ ಹೀಗಾಗಿ ಕುದ್ರೋಳಿ ದಸರಾದಲ್ಲಿ ಡಿಜೆಗೆ ಅವಕಾಶ ಇಲ್ಲ ಎಂದು ಪದ್ಮರಾಜ್ ತಿಳಿಸಿದರು.

ಸಂತೆ ಇಡುವ ಜಾಗಕ್ಕೆ ಸಂಬಂಧಿಸಿ ಸ್ಪಷ್ಟವಾದ ಮಾಹಿತಿ ನೀಡಲಾಗುವುದು. ಇಲ್ಲಿ ಎಲ್ಲ ಧರ್ಮೀಯರಿಗೂ ಸಾಮಗ್ರಿಗಳನ್ನು ಮಾರಾಟ ಮಾಡಲು ಅವಕಾಶ ಇದೆ. ಎಲ್ಲರನ್ನೂ ಸಮಾನವಾಗಿ ಕಂಡ ನಾರಾಯಣ ಗುರುಗಳು ಸ್ಥಾಪಿಸಿದ ದೇವಾಲಯವಿದು. ಆದ್ದರಿಂದ ಜಾತಿ ಧರ್ಮದ ಆಧಾರದಲ್ಲಿ ಬೇಧಕ್ಕೆ ಅವಕಾಶವಿಲ್ಲ. ಇಲ್ಲಿಗೆ ಬರುವವರೆಲ್ಲರನ್ನೂ ದೇವರ ಮಕ್ಕಳೆಂದೇ ಪರಿಗಣಿಸಲಾಗುತ್ತದೆ ಎಂದು ಅವರು ಹೇಳಿದರು.

ಅಲ್ಲದೆ ಈ ಬಾರಿ ಕುದ್ರೋಳಿ ಕ್ಷೇತ್ರದ ದಸರಾ ಮಹೋತ್ಸವದಲ್ಲಿ ಕಿನ್ನಿ ಪಿಲಿ (ಮರಿ ಹುಲಿ) ಸ್ಪರ್ಧೆ ಮತ್ತು ಸಾಧಕ ಮಹಿಳೆಯರಿಗೆ ಸನ್ಮಾನ ಕಾರ್ಯಕ್ರಮವನ್ನು ಹೊಸದಾಗಿ ಸೇರ್ಪಡೆ ಮಾಡಲಾಗಿದೆ. ಸಾಂಸ್ಕೃತಿಕ ಕಾರ್ಯಕ್ರಮಗಳು ಸಂಜೆ 4 ಗಂಟೆಗೇ ಆರಂಭವಾಗಲಿವೆ. ಸಾಹಿತ್ಯ ಚಟುವಟಿಕೆಗೆ ಹೆಚ್ಚು ಒತ್ತು ನೀಡಲಾಗಿದೆ ಎಂದರು.

ಉತ್ಸವದ ಭಾಗವಾಗಿ ವಿವಿಧ ಸ್ಪರ್ಧೆಗಳು ನಡೆಯಲಿವೆ, ಅವುಗಳೆಂದರೆ:

ಚಿತ್ರ ಬಿಡಿಸುವ ಸ್ಪರ್ಧೆ

ಕಿನ್ನಿ ಪಿಲಿ ಸ್ಪರ್ಧೆ (ಎರಡು ವಯೋಮಾನದವರಿಗೆ: 0–4 ಮತ್ತು 4–8 ವರ್ಷಗಳು)

ಭಕ್ತಿಗೀತೆಗಳ ಗಾಯನ

ಮುದ್ದು ಶಾರದೆ

ದಸರಾ ಕಾವ್ಯ

ರುದ್ರ ತಾಂಡವ ನೃತ್ಯ ಸ್ಪರ್ಧೆ

ಮಕ್ಕಳ ದಸರಾ (ಮಕ್ಕಳ ದಸರಾ)

ಈ ಬಾರಿಯ ಕುದ್ರೋಳಿ ದಸರಾದಲ್ಲಿ ಡಿಜೆ ಅಬ್ಬರಕ್ಕೆ ಅವಕಾಶ ನೀಡುವುದಿಲ್ಲ ಎಂದು ಕುದ್ರೋಳಿ ಶ್ರೀ ಗೋಕರ್ಣನಾಥೇಶ್ವರ ದೇವಾಲಯ ಆಡಳಿತ ಸಮಿತಿಯ ಕೋಶಾಧಿಕಾರಿ ಪದ್ಮರಾಜ ಆರ್ ತಿಳಿಸಿದ್ದಾರೆ.

Vishwa News 24

Recent Posts

ನಾಳಿನ ‘ಕರ್ನಾಟಕ ಬಂದ್’ಗೆ ನಮ್ಮ ಬೆಂಬಲವಿಲ್ಲ: ಕರವೇ ಪ್ರವೀಣ್ ಶೆಟ್ಟಿ ಸ್ಪಷ್ಟನೆ – vishwanews24

‘ಕರ್ನಾಟಕ ಬಂದ್’ಗೆ ನಮ್ಮ ಬೆಂಬಲವಿಲ್ಲ: ಕರವೇ ಪ್ರವೀಣ್ ಶೆಟ್ಟಿ ಸ್ಪಷ್ಟನೆ ಬೆಂಗಳೂರು: ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ…

1 hour ago

ನಟ ಪ್ರಕಾಶ್ ರಾಜ್ ಮತದಾರರ ಪಟ್ಟಿ ಹೆಸರು ಕೈಬಿಟ್ಟ ಆರೋಪ ಸುಳ್ಳು: ಬಿಬಿಎಂಪಿ ಸ್ಪಷ್ಟನೆ – vishwanews24

ವೋಟರ್ ಲಿಸ್ಟ್​ನಿಂದ ತಮ್ಮ ಹೆಸರು ಕೈಬಿಡಲಾಗಿದೆ : ನಟ ಪ್ರಕಾಶ್​ ರಾಜ್ ಆರೋಪಕ್ಕೆ ಚುನಾವಣಾಧಿಕಾರಿ ಸ್ಪಷ್ಟನೆ ಬೆಂಗಳೂರು: ಮತದಾರರ ಪಟ್ಟಿಯಿಂದ…

1 hour ago

ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಸಿಎಂ ಡಿ. ಕೆ. ಶಿವಕುಮಾರ್ – vishwanews24

ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: ಕರ್ನಾಟಕ ಮುಖ್ಯಮಂತ್ರಿ ಡಿಕೆ ಶಿವಕುಮಾರ್​​ ಅವರ ಸಚಿವ ಸಂಪುಟಕ್ಕೆ…

1 hour ago

ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್ ಚಂದ್ರಶೇಖರನ್ ರಾಜೀನಾಮೆ – vishwanews24

ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್ ಚಂದ್ರಶೇಖರನ್ ರಾಜೀನಾಮೆ ಹೊಸದಿಲ್ಲಿ: ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್. ಚಂದ್ರಶೇಖರನ್ ಅವರು…

2 hours ago

ಉಡುಪಿ:  ಆ.14 ರಂದು ನೇರ ಸಂದರ್ಶನ – vishwanews24

ಉಡುಪಿ:  ಆ.14 ರಂದು ನೇರ ಸಂದರ್ಶನ ಉಡುಪಿ: ನಗರದ ನಿಟ್ಟೂರು ರಾ.ಹೆ 66 ರ ಆಭರಣ ಮೋಟಾರ್ಸ್ ಪ್ರೆöÊವೇಟ್ ಲಿ.ನಲ್ಲಿ…

2 hours ago

ಮೀನುಗಾರರಿಗೆ ಸಬ್ಸಿಡಿ ರಹಿತ ಸೀಮೆಎಣ್ಣೆ ಒದಗಿಸಲು ಸಂಸದರಿಂದ ಸಚಿವ ಹರ್ದೀಪ್ ಸಿಂಗ್ ಪುರಿ ಅವರಿಗೆ ಮನವಿ – vishwanews24

ಮೀನುಗಾರರಿಗೆ ಸೀಮೆಎಣ್ಣೆ ಒದಗಿಸಲು ಸಂಸದರಿಂದ ಸಚಿವ ಹರ್ದೀಪ್ ಸಿಂಗ್ ಪುರಿ ಅವರಿಗೆ ಮನವಿ ಕುಂದಾಪುರ: ರಾಜ್ಯದ ಸಾಂಪ್ರದಾಯಿಕ ನಾಡ ದೋಣಿ…

2 hours ago