ಮಂಗಳೂರು : ಮಂಗಳೂರಿನಲ್ಲಿ ವಿವಾದಕ್ಕೆ ಕಾರಣವಾಗಿದ್ದ ಅಪಾರ್ಟ್ ಮೆಂಟ್ ಗೋಡೆಯ ಮೇಲೆ ಉಗ್ರರ ಪರ ಗೊಡೆಬರಹ ಬರೆದ ಇಬ್ಬರು ಆರೋಪಿಗಳಿಗೆ ಜಾಮೀನು ಸಿಕ್ಕಿದ್ದು, ಜೈಲಿನಿಂದ ಬಿಡುಗಡೆ ಹೊಂದಿದ್ದಾರೆ.
ತೀರ್ಥಹಳ್ಳಿಯ ಮಹಮ್ಮದ್ ಶಾರೀಕ್ ಮತ್ತು ಸಾದತ್ ಹುಸೇನ್ ಹೈಕೋರ್ಟ್ನಿಂದ ಜಾಮೀನು ಪಡೆದು ಬಿಡುಗಡೆಗೊಂಡಿದ್ದಾರೆ. 2020 ನ.27ರಂದು ಕದ್ರಿ ಠಾಣೆಯ ಬಳಿ ಬಿಜೈ ಅಪಾರ್ಟ್ಮೆಂಟ್ನ ಗೋಡೆಯಲ್ಲಿ ಈ ಬರಹ ಕಂಡು ಬಂದಿತ್ತು. ಈ ಗೋಡೆ ಬರಹದಲ್ಲಿ ‘ಇಲ್ಲಿನ ಸಂಘಿಗಳು ಮತ್ತು ಮನುವಾದಿಗಳ ಜೊತೆ ವ್ಯವಹರಿಸಲು ಲಷ್ಕರ್ ಮತ್ತು ತಾಲಿಬಾನಿಗಳನ್ನು ಸೇರುವಂತೆ ಮಾಡಬೇಡಿ. ಲಷ್ಕರ್ ಜಿಂದಾಬಾದ್, ತಾಲಿಬಾನ್ ಜಿಂದಾಬಾದ್’ ಎಂದು ಇಂಗ್ಲಿಷ್ನಲ್ಲಿ ಬರೆಯಲಾಗಿತ್ತು.ಈ ಗೋಡೆ ಬರಹ ಪ್ರಕರಣ ತಲ್ಲಣ ಸೃಷ್ಟಿಸುತ್ತಿದ್ದಂತೆ ಎನ್ಐಎ ಅಧಿಕಾರಿಗಳು ಮಂಗಳೂರಿಗೆ ಬಂದು ಆರೋಪಿಗಳ ವಿಚಾರಣೆ ನಡೆಸಿದ್ದರು. ಆದರೆ, ಇವರಿಗೆ ಯಾವುದೇ ಉಗ್ರರೊಂದಿಗೆ ನಂಟು ಇಲ್ಲ ಎಂಬ ಹಿನ್ನೆಲೆಯಲ್ಲಿ ವಿಚಾರಣೆ ನಡೆಸಿ ಕಳುಹಿಸಿದ್ದರು.
ಇಂಜಿನಿಯರಿಂಗ್ ವಿದ್ಯಾರ್ಥಿ ಮಾಝ್ ಮುನೀರ್ಗೆ ಬಂಧಿತನಾಗಿ ಎರಡು ತಿಂಗಳಿನಲ್ಲಿ ಮಂಗಳೂರು ಸೆಷನ್ಸ್ ನ್ಯಾಯಾಲಯದಿಂದ ಜಾಮೀನು ದೊರೆತಿತ್ತು..
ವಿಟ್ಲ: ಕಾರು ಮತ್ತು ದ್ವಿಚಕ್ರ ವಾಹನ ಭೀಕರ ಅಪಘಾತ; ಸವಾರ ಮೃತ್ಯು ವಿಟ್ಲ: ಮಿತ್ತೂರು ಸಮೀಪದ ಪರ್ಲೋಟು ಎಂಬಲ್ಲಿ ಸಂಭವಿಸಿದ…
ಉಡುಪಿ: ಸೆ. 4ರಂದು ಶ್ರೀಕೃಷ್ಣ ಜನ್ಮಾಷ್ಟಮಿ ; ಸೆ.5ರಂದು ವಿಟ್ಲಪಿಂಡಿ ಉತ್ಸವ ಉಡುಪಿ: ಉಡುಪಿ ಶ್ರೀಕೃಷ್ಣಮಠ ಪರ್ಯಾಯ ಶಿರೂರು ಮಠದ…
ರೇಣುಕಾಸ್ವಾಮಿ ಕೊಲೆ ಪ್ರಕರಣ : ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್ ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ…
ಜವಾಬ್ದಾರಿಗಳನ್ನು ಹೊಸ ಪೀಳಿಗೆಗೆ ಹಸ್ತಾಂತರಿಸುವ ಸಮಯ ಬಂದಿದೆ : ನಿತಿನ್ ಗಡ್ಕರಿ ಮುಂಬೈ: ಈ ಹಿಂದೆ ಮಾಡುತ್ತಿದ್ದಷ್ಟು ಕೆಲಸವನ್ನು ಇನ್ನು…
ಹಬ್ಬಗಳ ಹಿನ್ನೆಲೆ : ದಕ್ಷಿಣ ಕನ್ನಡ ಪೊಲೀಸರ ಕಟ್ಟುನಿಟ್ಟಿನ ಮಾರ್ಗಸೂಚಿ ಬಿಡುಗಡೆ ರಾತ್ರಿ 11:30 ಗಂಟೆಯ ನಂತರ ಮೆರವಣಿಗೆ ,…
ಸೆ. 1 ರಿಂದ 10 ರವರೆಗೆ ಬೃಹತ್ ಪಾದಯಾತ್ರೆ : ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಬೆಂಗಳೂರು : ರಾಜ್ಯ ಸರ್ಕಾರದ…