ಮಂಗಳೂರು : ಮಂಗಳೂರಿನಲ್ಲಿ ವಿವಾದಕ್ಕೆ ಕಾರಣವಾಗಿದ್ದ ಅಪಾರ್ಟ್ ಮೆಂಟ್ ಗೋಡೆಯ ಮೇಲೆ ಉಗ್ರರ ಪರ ಗೊಡೆಬರಹ ಬರೆದ ಇಬ್ಬರು ಆರೋಪಿಗಳಿಗೆ ಜಾಮೀನು ಸಿಕ್ಕಿದ್ದು, ಜೈಲಿನಿಂದ ಬಿಡುಗಡೆ ಹೊಂದಿದ್ದಾರೆ.
ತೀರ್ಥಹಳ್ಳಿಯ ಮಹಮ್ಮದ್ ಶಾರೀಕ್ ಮತ್ತು ಸಾದತ್ ಹುಸೇನ್ ಹೈಕೋರ್ಟ್ನಿಂದ ಜಾಮೀನು ಪಡೆದು ಬಿಡುಗಡೆಗೊಂಡಿದ್ದಾರೆ. 2020 ನ.27ರಂದು ಕದ್ರಿ ಠಾಣೆಯ ಬಳಿ ಬಿಜೈ ಅಪಾರ್ಟ್ಮೆಂಟ್ನ ಗೋಡೆಯಲ್ಲಿ ಈ ಬರಹ ಕಂಡು ಬಂದಿತ್ತು. ಈ ಗೋಡೆ ಬರಹದಲ್ಲಿ ‘ಇಲ್ಲಿನ ಸಂಘಿಗಳು ಮತ್ತು ಮನುವಾದಿಗಳ ಜೊತೆ ವ್ಯವಹರಿಸಲು ಲಷ್ಕರ್ ಮತ್ತು ತಾಲಿಬಾನಿಗಳನ್ನು ಸೇರುವಂತೆ ಮಾಡಬೇಡಿ. ಲಷ್ಕರ್ ಜಿಂದಾಬಾದ್, ತಾಲಿಬಾನ್ ಜಿಂದಾಬಾದ್’ ಎಂದು ಇಂಗ್ಲಿಷ್ನಲ್ಲಿ ಬರೆಯಲಾಗಿತ್ತು.ಈ ಗೋಡೆ ಬರಹ ಪ್ರಕರಣ ತಲ್ಲಣ ಸೃಷ್ಟಿಸುತ್ತಿದ್ದಂತೆ ಎನ್ಐಎ ಅಧಿಕಾರಿಗಳು ಮಂಗಳೂರಿಗೆ ಬಂದು ಆರೋಪಿಗಳ ವಿಚಾರಣೆ ನಡೆಸಿದ್ದರು. ಆದರೆ, ಇವರಿಗೆ ಯಾವುದೇ ಉಗ್ರರೊಂದಿಗೆ ನಂಟು ಇಲ್ಲ ಎಂಬ ಹಿನ್ನೆಲೆಯಲ್ಲಿ ವಿಚಾರಣೆ ನಡೆಸಿ ಕಳುಹಿಸಿದ್ದರು.
ಇಂಜಿನಿಯರಿಂಗ್ ವಿದ್ಯಾರ್ಥಿ ಮಾಝ್ ಮುನೀರ್ಗೆ ಬಂಧಿತನಾಗಿ ಎರಡು ತಿಂಗಳಿನಲ್ಲಿ ಮಂಗಳೂರು ಸೆಷನ್ಸ್ ನ್ಯಾಯಾಲಯದಿಂದ ಜಾಮೀನು ದೊರೆತಿತ್ತು..
ಮೋದಿ ದುರಾಡಳಿತದ ವಿರುದ್ಧ ಮಾತಾಡಲು ಬಿಜೆಪಿಗರಿಗೆ ಸವಾಲು.. ಬಿಜೆಪಿಯ ಬಡಜನ ವಿರೋಧಿ ಬಣ್ಣ ಮತ್ತೆ ಬಯಲು.. ವಾಣಿಜ್ಯ ಸಿಲಿಂಡರ್ ದರ…
ಪತ್ನಿಯ ಅಕ್ರಮ ಸಂಬಂಧ, ಕಿರುಕುಳಕ್ಕೆ ಬೇಸತ್ತು ಗಂಡ ನೇಣಿಗೆ ಶರಣು ಕಾರವಾರ: ಪತ್ನಿಯ ಕಿರುಕುಳಕ್ಕೆ ಬೇಸತ್ತು ಪತಿ ಆತ್ಮಹತ್ಯೆ ಮಾಡಿಕೊಂಡ…
ಮನೆಯಲ್ಲಿದ್ದ ಚಿನ್ನಾಭರಣ ಸಮೇತ ಪತ್ನಿ ಪರಾರಿ: ಮಕ್ಕಳಿಬ್ಬರನ್ನು ಕೊಲೆಗೈದು ನೇಣಿಗೆ ಶರಣಾದ ಪತಿ ಕುಣಿಗಲ್ : ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ…
NDMAಯಿಂದ ಬರುತ್ತೆ ತುರ್ತು ಎಚ್ಚರಿಕೆ ಸಂದೇಶ.. ನಿಮ್ಮ ಮೊಬೈಲ್ನಲ್ಲಿ ಅಲರ್ಟ್ ಸಂದೇಶ, ಸೈರನ್ ಮೊಳಗಿದ್ರೆ ಭಯಪಡಬೇಡಿ.. ನಿಮ್ಮ ಮೊಬೈಲ್ ಫೋನ್…
ಪಿಕಲ್ಬಾಲ್ ಆಟಗಾರರು ಪ್ರಯಾಣಿಸುತ್ತಿದ್ದ ವಿಮಾನ ಟೆಕ್ಸಾಸ್ನಲ್ಲಿ ಪತನ : ಐವರು ಮೃತ್ಯು ಆಸ್ಟಿನ್: ವಿಂಬರ್ಲಿ ಬಳಿ ಪಿಕಲ್ಬಾಲ್ ಆಟಗಾರರನ್ನು ಹೊತ್ತೊಯ್ಯುತ್ತಿದ್ದ…
ನಟ ಡಾಲಿ ಧನಂಜಯ್ ಧನ್ಯತಾ ದಂಪತಿಗೆ ಗಂಡು ಮಗು ಜನನ ಸ್ಯಾಂಡಲ್ವುಡ್ ನಟ ಡಾಲಿ ಧನಂಜಯ್ ಹಾಗೂ ಧನ್ಯತಾ ದಂಪತಿಗೆ…