ಮಂಗಳೂರು : ಉಡುಗೊರೆ ಕೊಡಿಸುವುದಾಗಿ ಭರವಸೆ ನೀಡಿ ವ್ಯಕ್ತಿಯೊಬ್ಬನಿಂದ 2.92 ಲಕ್ಷ ರೂಪಾಯಿ ವಂಚಿಸಿ ಪರಾರಿಯಾಗಿರುವ ಬಗ್ಗೆ ನಗರದ ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸೆಪ್ಟೆಂಬರ್ 20, 2021 ರಂದು ವ್ಯಕ್ತಿಯೊಬ್ಬನನ್ನು ವಾಟ್ಸಾಪ್ ಮೂಲಕ ಸಂಪರ್ಕಿಸಿ ನಿಮಗೆ ಮನೆ ನಿರ್ಮಿಸಲು ಸಹಾಯ ಮಾಡಲು ಸಿದ್ಧ ಎಂದು ತಿಳಿಸಿದರು. ಅಲ್ಲದೆ ಅದಕ್ಕೆ ಪ್ರತಿಯಾಗಿ ಆ ವ್ಯಕ್ತಿ ಅವರಿಗೆ ಉಡುಗೊರೆ ಕಳುಹಿಸುವುದಾಗಿಯೂ ಭರವಸೆ ನೀಡಿದ್ದರು ಹೀಗಾಗಿ ದೂರುದಾರರಿಗೆ ಕೂಳೂರಿನಲ್ಲಿರುವ ಕೆನರಾ ಬ್ಯಾಂಕ್ನಲ್ಲಿ ಖಾತೆ ಹೊಂದಿದ ವ್ಯಕ್ತಿಯೂ ಹಣ ಕಳುಹಿಸಿದ್ದರು.
ಇನ್ನು ದೂರುದಾರರಿಗೆ ಅಕ್ಟೋಬರ್ 5 ರಂದು ಆಂಗ್ಲ ಭಾಷೆಯಲ್ಲಿ ಮಾತನಾಡುತ್ತಾ ಮತ್ತೊಮ್ಮೆ ಹೊಸ ಸಂಖ್ಯೆಯಿಂದ ಕರೆ ಮಾಡಿದ ವ್ಯಕ್ತಿ, ಉಡುಗೊರೆಯು ದೆಹಲಿ ತಲುಪಿದ್ದು, ಮಂಗಳೂರು ತಲುಪಿದೆಯೇ ಎಂಬುದನ್ನು ಖಚಿತಪಡಿಸಿಕೊಳ್ಳಲು 35,000 ರೂ.ನೀಡಬೇಕು ಎಂದು ಹೇಳಿದ್ದು, ಅದರಂತೆ ದೂರುದಾರರು ಕರೆ ಮಾಡಿದವರಿಗೆ ಗೂಗಲ್ ಪೇ ಮೂಲಕ ಮೊತ್ತವನ್ನು ಪಾವತಿಸಿದ್ದಾರೆ.
ಅದೇ ವ್ಯಕ್ತಿ ಮತ್ತೆ ದೂರುದಾರರಿಗೆ ಕರೆ ಮಾಡಿ 97,000 ರೂ ಹಣವನ್ನು ಖಾತೆಗೆ ಹಾಕುವಂತೆ ತಿಳಿಸಿದ್ದಾರೆ. ಮತ್ತೆ ಅದೆ ವ್ಯಕ್ತಿ ಕರೆ ಮಾಡಿ ನೆಫ್ಟ್ ಮೂಲಕ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಖಾತೆಗೆ 1.6 ಲಕ್ಷ ರೂಪಾಯಿಗಳನ್ನು ಕಳುಹಿಸಲಾಗಿದೆ. ಆದರೆ ಒಟ್ಟು 2.92 ಲಕ್ಷರೂ.ಗಳನ್ನು ಹಣ ಪಡೆದಿರುವ ವ್ಯಕ್ತಿಯು ಯಾವುದೇ ಉಡುಗೊರೆಯನ್ನು ಕಳುಹಿಸದೆ ವಂಚಿಸಿದ್ದಾರೆ ಎಂದು ವ್ಯಕ್ತಿ ತನ್ನ ದೂರಿನಲ್ಲಿ ತಿಳಿಸಿದ್ದಾರೆ.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…