ಮಂಗಳೂರು : ಉಡುಗೊರೆ ಕೊಡಿಸುವುದಾಗಿ ಭರವಸೆ ನೀಡಿ ವ್ಯಕ್ತಿಯೊಬ್ಬನಿಂದ 2.92 ಲಕ್ಷ ರೂಪಾಯಿ ವಂಚಿಸಿ ಪರಾರಿಯಾಗಿರುವ ಬಗ್ಗೆ ನಗರದ ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸೆಪ್ಟೆಂಬರ್ 20, 2021 ರಂದು ವ್ಯಕ್ತಿಯೊಬ್ಬನನ್ನು ವಾಟ್ಸಾಪ್ ಮೂಲಕ ಸಂಪರ್ಕಿಸಿ ನಿಮಗೆ ಮನೆ ನಿರ್ಮಿಸಲು ಸಹಾಯ ಮಾಡಲು ಸಿದ್ಧ ಎಂದು ತಿಳಿಸಿದರು. ಅಲ್ಲದೆ ಅದಕ್ಕೆ ಪ್ರತಿಯಾಗಿ ಆ ವ್ಯಕ್ತಿ ಅವರಿಗೆ ಉಡುಗೊರೆ ಕಳುಹಿಸುವುದಾಗಿಯೂ ಭರವಸೆ ನೀಡಿದ್ದರು ಹೀಗಾಗಿ ದೂರುದಾರರಿಗೆ ಕೂಳೂರಿನಲ್ಲಿರುವ ಕೆನರಾ ಬ್ಯಾಂಕ್ನಲ್ಲಿ ಖಾತೆ ಹೊಂದಿದ ವ್ಯಕ್ತಿಯೂ ಹಣ ಕಳುಹಿಸಿದ್ದರು.
ಇನ್ನು ದೂರುದಾರರಿಗೆ ಅಕ್ಟೋಬರ್ 5 ರಂದು ಆಂಗ್ಲ ಭಾಷೆಯಲ್ಲಿ ಮಾತನಾಡುತ್ತಾ ಮತ್ತೊಮ್ಮೆ ಹೊಸ ಸಂಖ್ಯೆಯಿಂದ ಕರೆ ಮಾಡಿದ ವ್ಯಕ್ತಿ, ಉಡುಗೊರೆಯು ದೆಹಲಿ ತಲುಪಿದ್ದು, ಮಂಗಳೂರು ತಲುಪಿದೆಯೇ ಎಂಬುದನ್ನು ಖಚಿತಪಡಿಸಿಕೊಳ್ಳಲು 35,000 ರೂ.ನೀಡಬೇಕು ಎಂದು ಹೇಳಿದ್ದು, ಅದರಂತೆ ದೂರುದಾರರು ಕರೆ ಮಾಡಿದವರಿಗೆ ಗೂಗಲ್ ಪೇ ಮೂಲಕ ಮೊತ್ತವನ್ನು ಪಾವತಿಸಿದ್ದಾರೆ.
ಅದೇ ವ್ಯಕ್ತಿ ಮತ್ತೆ ದೂರುದಾರರಿಗೆ ಕರೆ ಮಾಡಿ 97,000 ರೂ ಹಣವನ್ನು ಖಾತೆಗೆ ಹಾಕುವಂತೆ ತಿಳಿಸಿದ್ದಾರೆ. ಮತ್ತೆ ಅದೆ ವ್ಯಕ್ತಿ ಕರೆ ಮಾಡಿ ನೆಫ್ಟ್ ಮೂಲಕ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಖಾತೆಗೆ 1.6 ಲಕ್ಷ ರೂಪಾಯಿಗಳನ್ನು ಕಳುಹಿಸಲಾಗಿದೆ. ಆದರೆ ಒಟ್ಟು 2.92 ಲಕ್ಷರೂ.ಗಳನ್ನು ಹಣ ಪಡೆದಿರುವ ವ್ಯಕ್ತಿಯು ಯಾವುದೇ ಉಡುಗೊರೆಯನ್ನು ಕಳುಹಿಸದೆ ವಂಚಿಸಿದ್ದಾರೆ ಎಂದು ವ್ಯಕ್ತಿ ತನ್ನ ದೂರಿನಲ್ಲಿ ತಿಳಿಸಿದ್ದಾರೆ.
ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…
ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…
ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…
ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…