Featured

ಮಂಗಳೂರು/ಉಡುಪಿ: ಐವನ್ ಡಿಸೋಜಾ ರಿಗೆ ಸಚಿವ ಸ್ಥಾನ ನೀಡುವಂತೆ ಬಿ ಕೆ ಹರಿಪ್ರಸಾದ್ ಗೆ ಕಥೊಲಿಕ್ ಸಭಾ ಮನವಿ – vishwanews24

ಮಂಗಳೂರು/ಉಡುಪಿ: ಐವನ್ ಡಿಸೋಜಾ ರಿಗೆ ಸಚಿವ ಸ್ಥಾನ ನೀಡುವಂತೆ ಬಿ ಕೆ ಹರಿಪ್ರಸಾದ್ ಗೆ ಕಥೊಲಿಕ್ ಸಭಾ ಮನವಿ

ಮಂಗಳೂರು/ಉಡುಪಿ: ವಿಧಾನಪರಿಷತ್ ಸದಸ್ಯ ಐವನ್ ಡಿಸೋಜಾ ಅವರಿಗೆ ಸಚಿವ ಸ್ಥಾನ ನೀಡುವಂತೆ ಆಗ್ರಹಿಸಿ ನೂತನ ಕೆಪಿಸಿಸಿ ಅಧ್ಯಕ್ಷರಾದ ಬಿ ಕೆ ಹರಿಪ್ರಸಾದ್ ಅವರಿಗೆ ಮಂಗಳೂರಿನಲ್ಲಿ ಕಥೊಲಿಕ್ ಸಭಾ ಮಂಗಳೂರು, ಹಾಗೂ ಉಡುಪಿ ಪ್ರದೇಶ ವತಿಯಿಂದ ಮಂಗಳವಾರ ಮನವಿ ನೀಡಲಾಯಿತು.

ಕರಾವಳಿಯಲ್ಲಿ ಕ್ರೈಸ್ತ ಸಮುದಾಯವನ್ನು ಪ್ರತಿನಿಧಿಸುತ್ತಿರುವ ಐವನ್ ಡಿಸೋಜಾ ಅವರು ಎರಡು ಬಾರಿ ವಿಧಾನ ಪರಿಷತ್ ಸದಸ್ಯರಾಗಿ, ಪರಿಷತ್ ಮುಖ್ಯ ಸಚೇತಕಾರಾಗಿ ಕ್ರೈಸ್ತ ಅಭಿವೃದ್ದಿ ನಿಗಮದಲ್ಲಿ ವಿವಿಧ ರೀತಿಯ ಜವಾಬ್ದಾರಿಯನ್ನು ವಹಿಸಿಕೊಂಡಿರುತ್ತಾರೆ. ಕಾಂಗ್ರೆಸ್ ಪಕ್ಷದ ಗೆಲುವಿಗೆ ಕ್ರೈಸ್ತ ಸಮುದಾಯದ ಕೊಡುಗೆ ಅಪಾರವಾಗಿದ್ದು ರಾಜ್ಯದ 22 ಜಿಲ್ಲೆಗಳಲ್ಲಿ ಕ್ರೈಸ್ತ ಸಮುದಾಯ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಿದೆ.

ಸಮುದಾಯಕ್ಕೆ ಪ್ರತಿ ಬಾರಿ ಉನ್ನತ ಸ್ಥಾನಗಳನ್ನು ನೀಡುವಾಗ ಅವಕಾಶ ವಂಚಿರಾಗುತ್ತಿದ್ದು ಈ ಬಾರಿ ಡಿ ಕೆ ಶಿವಕುಮಾರ್ ಅವರು ಎಲ್ಲಾ ಸಮುದಾಯಗಳನ್ನು ಸಮಾನವಾಗಿ ಅವಕಾಶ ನೀಡುವ ಕೆಲಸವನ್ನು ಮಾಡಬೇಕು. ಈ ಮೂಲಕ ಐವನ್ ಡಿಸೋಜಾ ಅವರಿಗೆ ಸಚಿವ ಸ್ಥಾನವನ್ನು ಅಥವಾ ವಿಧಾನಪರಿಷತ್ ಸಭಾಪತಿಯಾಗಿ ನೇಮಕ ಮಾಡಬೇಕು. ಅವರಿಗೆ ಸಚಿವ ಸ್ಥಾನವನ್ನು ನೀಡಿದ್ದಲ್ಲಿ ಮುಂದಿನ ದಿನಗಳಲ್ಲಿ ಪಕ್ಷದ ಏಳಿಗೆಗೆ ಮತ್ತಷ್ಟು ಸಹಕಾರಿಯಾಗಲಿದೆ. ಈ ನಿಟ್ಟಿನಲ್ಲಿ ಪಕ್ಷದ ಅಧ್ಯಕ್ಷರಾಗಿ ಕ್ರೈಸ್ತ ಸಮುದಾಯಕ್ಕೆ ನ್ಯಾಯ ಒದಗಿಸುವ ಕೆಲಸ ಮಾಡುವಂತೆ ಮನವಿಯಲ್ಲಿ ಉಲ್ಲೇಖಿಸಲಾಗಿದೆ.

ನಿಯೋಗದಲ್ಲಿ ಕಥೊಲಿಕ್ ಸಭಾ ಮಂಗಳೂರು ಪ್ರದೇಶ ಅಧ್ಯಕ್ಷರಾದ ಸಂತೋಶ್ ಡಿಸೋಜಾ, ಉಪಾಧ್ಯಕ್ಷರಾದ ಸ್ಟೀವನ್ ರೊಡ್ರಿಗಸ್, ಮಾಜಿ ಅಧ್ಯಕ್ಷರಾದ ಸ್ಟ್ಯಾನಿ ಲೋಬೊ ಉಡುಪಿ ಪ್ರದೇಶ ಅಧ್ಯಕ್ಷ ಮೆಲ್ವಿನ್ ಆರಾನ್ಹ ಶಿರ್ವ, ಮಾಜಿ ಅಧ್ಯಕ್ಷರಾದ ವಾಲ್ಟರ್ ಸಿರಿಲ್ ಪಿಂಟೊ, ವಲೇರಿಯನ್ ಫೆರ್ನಾಂಡಿಸ್ ಹಾಗೂ ಇತರರು ಉಪಸ್ಥಿತರಿದ್ದರು.

Vishwa News 24

Recent Posts

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ – vishwanews24

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…

11 hours ago

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ – vishwanews24

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…

12 hours ago

ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ – vishwanews24

ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಉಡುಪಿ:ಮುದರಂಗಡಿ…

12 hours ago

ಟೈಮಿಂಗ್‌ ವಿವಾದ: ಕಾಪು ಸರ್ವಿಸ್ ರಸ್ತೆಯಲ್ಲಿ ಮತ್ತೆ ಖಾಸಗಿ ಎಕ್ಸ್‌ಪ್ರೆಸ್ ಬಸ್‌ ಚಾಲಕರ ವಾಗ್ವಾದ – vishwanews24

ಟೈಮಿಂಗ್‌ ವಿವಾದ: ಕಾಪು ಪೇಟೆಯಲ್ಲಿ ಮತ್ತೆ ಖಾಸಗಿ ಎಕ್ಸ್‌ಪ್ರೆಸ್ ಬಸ್‌ ಚಾಲಕರ ವಾಗ್ವಾದ ; ಸ್ಥಳೀಯರಲ್ಲಿ ಆತಂಕ ಕಾಪು: ರಾಷ್ಟ್ರೀಯ…

14 hours ago

ಉಡುಪಿ: ‘ಭಗವತಿ ಟೂರಿಸ್ಟ್’ ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ – vishwanews24

ಉಡುಪಿ: 'ಭಗವತಿ ಟೂರಿಸ್ಟ್' ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ ಉಡುಪಿ: ನಗರದ ಸರ್ವಿಸ್ ಬಸ್ ನಿಲ್ದಾಣದ…

14 hours ago

ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ – vishwanews24

ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ ಮಂಗಳೂರು: ಇಲ್ಲಿನ ಬಾರ್ ಒಂದರಲ್ಲಿ ತಲವಾರು…

14 hours ago