ಮಂಗಳೂರು/ಉಡುಪಿ: ಕಡಲ ತೀರದಲ್ಲಿ ಹೈಅಲರ್ಟ್ – ಸಮುದ್ರ ಪ್ರಕ್ಷುಬ್ದ; ಮೀನುಗಾರರು ಹಾಗೂ ಪ್ರವಾಸಿಗರು ಸಮುದ್ರಕ್ಕಿಳಿಯದಂತೆ ಜಿಲ್ಲಾಡಳಿತ ಎಚ್ಚರಿಕೆ – vishwanews24

Featured, ಉಡುಪಿ, ದಕ್ಷಿಣ ಕನ್ನಡ

ಮಂಗಳೂರು/ಉಡುಪಿ: ಕಡಲ ತೀರದಲ್ಲಿ ಹೈಅಲರ್ಟ್ – ಸಮುದ್ರ ಪ್ರಕ್ಷುಬ್ದ; ಮೀನುಗಾರರು ಹಾಗೂ ಪ್ರವಾಸಿಗರು ಸಮುದ್ರಕ್ಕಿಳಿಯದಂತೆ ಜಿಲ್ಲಾಡಳಿತ ಎಚ್ಚರಿಕೆ

ಮಂಗಳೂರು/ಉಡುಪಿ,: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಧಾರಾಕಾರ ಮಳೆಯಾಗುತ್ತಿದ್ದು, ವರುಣನ ಅಬ್ಬರಕ್ಕೆ ಕರಾವಳಿ ಮಂದಿ ತತ್ತರಗೊಂಡಿದ್ದಾರೆ.

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮ ಮಂಗಳೂರಿನ ಸಮುದ್ರ ತೀರದಲ್ಲಿ ಹೈಅಲರ್ಟ್ ಘೋಷಿಸಲಾಗಿದೆ. ಗಂಟೆಗೆ 45 ಕಿ.ಮೀ ನಿಂದ 55 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ. ಕರಾವಳಿಯುದ್ದಕ್ಕೂ ಬಿರುಗಾಳಿ ಬೀಸುವ ಸಾಧ್ಯತೆ ಹಿನ್ನಲೆ ಮೀನುಗಾರಿಕೆಗೆ ತೆರಳದಂತೆ ದಕ್ಷಿಣ ಕನ್ನಡ ಜಿಲ್ಲಾಡಳಿತದಿಂದ ಎಚ್ಚರಿಕೆ ನೀಡಿದೆ.

ಮಂಗಳೂರಿನಲ್ಲಿ ಇಂದು ಧಾರಾಕಾರ ಮಳೆಯ ಮುನ್ಸೂಚನೆ ಇದೆ. ಹೀಗಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದಿನಿಂದ ಎರಡು ದಿನ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.

ಅಪಾರ್ಟ್ ಮೆಂಟ್ ಮೇಲ್ಛಾವಣಿಗೆ ಬಿದ್ದ ಮಗು ರಕ್ಷಣೆ : ಸಾಮಾಜಿಕ ಜಾಲತಾಣದಲ್ಲಿ ನಿಲ್ಲದ ಟೀಕೆ ; ಮನನೊಂದು ತಾಯಿ ಆತ್ಮಹತ್ಯೆ – vishwanews24

ಇನ್ನು ಕರಾವಳಿ ಜಿಲ್ಲೆ ಉಡುಪಿಯಲ್ಲಿ ತಾಪಮಾನ ವಿಪರೀತ ಏರಿಕೆಯಾಗುತ್ತಿದೆ. ಉರಿ ಬಿಸಿಲಿನ ನಡುವೆ ಮೋಡದ ವಾತಾವರಣ ಇರುವುದರಿಂದ ಆದ್ರತೆ ಹೆಚ್ಚಾಗುತ್ತಿದೆ. ಕುಂದಾಪುರ ಬೈಂದೂರಿನಲ್ಲಿ 37ಸೆ. ಉಷ್ಣಾಂಶ ದಾಖಲಾಗಿದೆ. ಉಷ್ಣಾಂಶದ ನೇರ ಪರಿಣಾಮ ಕಡಲಿನ ಮೇಲೆ ಬಿದ್ದಿದ್ದು, ಸಮುದ್ರ ಪ್ರಕ್ಷ್ಯುಬ್ದವಾಗಿದೆ. ಈ ವಾರದಲ್ಲಿ ಗುಡುಗು ಸಿಡಿಲು ಮಳೆಯ ಮುನ್ನೆಚ್ಚರಿಕೆಯನ್ನ ಜಿಲ್ಲಾಡಳಿತ ನೀಡಿದೆ. ಭಾರೀ ಗಾತ್ರದ ಸಮುದ್ರದಲೆಗಳು ದಡಕ್ಕೆ ಅಪ್ಪಳಿಸುವ ಸಾಧ್ಯತೆ ಇದೆ. ಮೀನುಗಾರರು ಹಾಗೂ ಪ್ರವಾಸಿಗರು ಸಮುದ್ರಕ್ಕಿಳಿಯಬಾರದು ಎಂದು ಜಿಲ್ಲಾಡಳಿತ ಎಚ್ಚರಿಕೆ ನೀಡಿದೆ.

ರೆಸಾರ್ಟ್ ನಲ್ಲಿ Zipline ಆಡುತ್ತಿದ್ದಾಗ ಕಟ್‌ ಆಗಿ ಕೆಳಗೆ ಬಿದ್ದು ಮಹಿಳೆ ಸಾವು – vishwanews24

Leave a Reply