ಕೈಕಂಬ, : ಗುರುಪುರ ಮಾಣಿ ಬೆಟ್ಟು ಶ್ರೀಕೋರ್ದಬ್ಬು ಪರಿವಾರ ದೈವಸ್ಥಾನದ ಮೂಲ ಸಾನ್ನಿಧ್ಯವಿದ್ದ ಜಾಗದಲ್ಲಿ ಸುಮಾರು 350 ವರ್ಷಗಳಷ್ಟು ಹಳೆಯದಾದ ದೈವದ ಮೂರ್ತಿ, ಪರಿಕರಗಳು ಬುಧವಾರ ಪತ್ತೆಯಾಗಿವೆ.
ಆ ಪ್ರದೇಶದ ಜನರಿಗೆ ಸಮಸ್ಯೆಗಳು ಎದುರಾಗುತ್ತಿದ್ದು ಇದರಿಂದ ಬುಧವಾರ ಮಾಣಿಬೆಟ್ಟು ಗುತ್ತು, ಕಾರಮೊಗೆರು ಗುತ್ತು, ಬರ್ಕೆ ಹಾಗೂ ಊರಿನವರು ಒಟ್ಟು ಸೇರಿ ಮೂಲ ಸಾನಿಧ್ಯವಿದ್ದ ಜಾಗದಲ್ಲಿ ಉತ್ಖನನ ಆರಂಭಿಸಿದ್ದರು. ಈ ಸಂದರ್ಭ ಸುಮಾರು 350 ವರ್ಷಗಳಷ್ಟು ಹಳೆಯದಾದ ದೈವದ ಮೂರ್ತಿ, ಪರಿಕರಗಳು ಪತ್ತೆಯಾಗಿವೆ. ಇತ್ತೀಚೆಗೆ ದೈವಸ್ಥಾನದಲ್ಲಿ ಇಡಲಾಗಿದ್ದ ತಾಂಬೂಲ ಪ್ರಶ್ನೆಯ ವೇಳೆ ಶಶಿಕುಮಾರ್ ಪಂಡಿತ್ ಅವರು ದೈವಸ್ಥಾನವಿದ್ದ ಪ್ರದೇಶದಲ್ಲಿ ದೈವದ ಪರಿಕರಗಳು ಇರುವ ಬಗ್ಗೆ ಹೇಳಿದ್ದರು.
ಉತ್ಖನನದ ವೇಳೆ ಸುಮಾರು300 ವರ್ಷಗಳಷ್ಟು ಹಳೆಯದಾದ ದೈವದ ಮೂರ್ತಿ, ಕಂಚಿನ ಮೊಲ, ಖಡ್ಸಲೆ, ಗೋಣ (ಕೋಣ), ದೈವದ ಕಲ್ಲು, ಗಂಟೆಮಣಿ, ಸುತ್ತಿಗೆ, ತಂದೇಲ್, ದೀಪ ಮತ್ತಿತರ ಸೊತ್ತುಗಳು ಪತ್ತೆಯಾಗಿವೆ. ಇವುಗಳಲ್ಲಿ ದೀಪ ಮಣ್ಣಿದ್ದಾಗಿದ್ದರೆ, ಉಳಿದ ಸೊತ್ತುಗಳು ಪಂಚಲೋಹ, ಕಂಚು, ಹಿತ್ತಾಳೆ ಮತ್ತು ಕಬ್ಬಿಣದ್ದಾಗಿವೆ.
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…
ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ : ಡಿಕೆಶಿ ಬೆಂಗಳೂರು : ಕೇಂದ್ರ ಸರ್ಕಾರ…