ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದೋಚಿದ ಘಟನೆ ಸೋಮವಾರ ಬೆಳಗ್ಗಿನ ಜಾವ ಬೈಕಂಪಾಡಿಯಲ್ಲಿ ನಡೆದಿದೆ.
ಕೇರಳದ ಪಯ್ಯನ್ನೂರು ನಿವಾಸಿ ವಿಕಾಸ್ ದರೋಡೆಗೆ ಒಳಗಾದವರು. ಇವರು ತನ್ನ ಪತ್ನಿ ಮತ್ತು ಮಗನೊಂದಿಗೆ ಮುಂಬೈಯ ತನ್ನ ಸ್ನೇಹಿತರೊಬ್ಬರ ಮದುವೆ ತೆರಳಿ ಹಿಂದಿರುಗುತ್ತಿದ್ದ ವೇಳೆ ಈ ಕೃತ್ಯ ಎಸಗಲಾಗಿದೆ.
ಬೆಳಗ್ಗಿನ ಜಾವ 2:30 ಸುಮಾರಿಗೆ ವಿಕಾಸ್ ಅವರ ಕಾರು ರಾಷ್ಟ್ರೀಯ ಹೆದ್ದಾರಿ 66ರ ಬೈಕಂಪಾಡಿ ದ್ವಾರ ಹೋಟೆಲ್ ಬಳಿ ತಲುಪುತ್ತಿದ್ದಂತೆ ಮೂರು ಕಾರುಗಳಲ್ಲಿ ಬಂದ ಸುಮಾರು 7-8 ಮಂದಿ ದರೋಡೆಕೋರರು ವಿಕಾಸ್ ಅವರನ್ನು ಕಾರಿನಿಂದ ಇಳಿಸಿ ಪತ್ನಿ ಮತ್ತು ಮಗನನ್ನು ಕಾರು ಸಮೇತ ಅಪಹರಿಸಿದ್ದಾರೆ. ಬಳಿಕ ಪಣಂಬೂರು ಬೀಚ್ ರಸ್ತೆ ಬಳಿ ವಿಕಾಸ್ ಅವರ ಪತ್ನಿ ಮತ್ತು ಮಗನ ಬಳಿಯಿದ್ದ ಚಿನ್ನಾಭರಣ, ಬೆಲೆಬಾಳುವ ವಸ್ತುಗಳು ದೋಚಿ ಅವರನ್ನು ರಸ್ತೆಯಲ್ಲಿ ತೊರೆದು ಕಾರು ಜೊತೆ ಪರಾರಿಯಾಗಿದ್ದಾರೆ ಎಂದು ತಿಳಿದು ಬಂದಿದೆ.
ಘಟನೆಗೆ ಸಂಬಂಧಿಸಿ ಉದ್ಯಮಿ ವಿಕಾಸ್ ಅವರು ಪಣಂಬೂರು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಅದರಂತೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕಾನೂನು ಕ್ರಮಗಳನ್ನು ಕೈಗೊಂಡಿದ್ದಾರೆ ಎಂದು ತಿಳಿದು ಬಂದಿದೆ.
ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…
ಕರ್ನಾಟಕ ಬಂದ್ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…
ವಿಧಾನ ಪರಿಷತ್ ಸಭಾ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್ ಕಲಾಪ…
ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…
ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…
ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…