ಮಂಗಳೂರು: ಉದ್ಯಮಿ, ಬಿಜೆಪಿ ಹಿರಿಯ ನಾಯಕ ಸುಧೀರ್ ಘಾಟೆ ಅವರು ಶುಕ್ರವಾರ ವಿಧಿವಶರಾಗಿದ್ದಾರೆ. ಅವರಿಗೆ 64 ವರ್ಷ ಪ್ರಾಯವಾಗಿತ್ತು.
1992 ರಲ್ಲಿ ಜಾಹೀರಾತು ಸಂಸ್ಥೆ,’ ಮ್ಯಾಗ್ನಮ್ ಇಂಟರ್ ಗ್ರಾಫಿಕ್ಸ್’ ಕಟ್ಟಿ ಬೆಳೆಸಿದ್ದ ಸುಧೀರ್ ಘಾಟೆ ಮಂಗಳೂರಿನ ಪ್ರಸಿದ್ಧ ಉದ್ಯಮಿಯಾಗಿದ್ದರು.500 ಕ್ಕೂ ಹೆಚ್ಚು ಮಂದಿಗೆ ಉದ್ಯೋಗ ನೀಡಿದ್ದರು.
ಆರ್ ಎಸ್ಎಸ್ ಲೆಕ್ಕ ಪರಿಶೋಧಕರ ಕಚೇರಿಯಲ್ಲಿ ತನ್ನ ವೃತ್ತಿ ಜೀವನವನ್ನು ಆರಂಭಿಸಿದ್ದ ಸುಧೀರ್ ಘಾಟೆ 1995ರಲ್ಲಿ ರಾಜ್ಯ ಬಿಜೆಪಿಯ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿಯಾಗಿ ಪಕ್ಷ ಕಟ್ಟಿದ್ದರು.
ಬಿ ಎಂಎಸ್ ನ ಪ್ರಧಾನ ಕಾರ್ಯದರ್ಶಿಯಾಗಿದ್ದ ದಿವಂಗತ ಪ್ರಭಾಕರ್ ಘಾಟೆ- ಶಾರದಾ ಘಾಟೆ ದಂಪತಿ ಪುತ್ರರಾದ ಸುಧೀರ್ ಪಿಆರ್ ಐಎಸ್ ನ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು.
ಅಟಲ್ ಬಿಹಾರಿ ವಾಜಪೇಯಿ, ಸುಷ್ಮಾ ಸ್ವರಾಜ್, ಲಾಲ್ ಕೃಷ್ಣ ಆಡ್ವಾಣಿ, ಮುರಳಿ ಮನೋಹರ್ ಜೋಷಿ ಸೇರಿ ರಾಜ್ಯದ ಹಿರಿಯ ಬಿಜೆಪಿ ನಾಯಕರ ಒಡನಾಟ ಸುಧೀರ್ ಘಾಟೆಯವರಿಗಿತ್ತು.
ಘಾಟೆ ಅವರು ಪತ್ನಿ, ಪುತ್ರ , ಪುತ್ರಿ ಸಹಿತ ಅಪಾರ ಬಂಧುಗಳನ್ನು ಅಗಲಿದ್ದಾರೆ. ಅಪಾರ ಗಣ್ಯರು ತೀವ್ರ ಸಂತಾಪ ಸೂಚಿಸಿದ್ದಾರೆ.
ಉಡುಪಿ: ಕಾಕ್ರೋಚ್’ ಹೆಸರಿನಲ್ಲಿ ಯುವ ಸಮುದಾಯವನ್ನು ಪ್ರಚೋದಿಸುವ ಕೆಲಸ ನಡೆಯುತ್ತಿದೆ: ಸುನಿಲ್ ಕುಮಾರ್ ಆರೋಪ ಉಡುಪಿ: ಚಳವಳಿಯ ಹೆಸರಿನಲ್ಲಿ ದೇಶದಲ್ಲಿ…
ಕಾಪು : ಉದ್ಯಮಿ ಸಖೇಂದ್ರ ಬಿ. ಸುವರ್ಣ ಹೃದಯಾಘಾತದಿಂದ ನಿಧನ ಕಾಪು : ಕಾಪುವಿನ ಹಿರಿಯ ಉದ್ಯಮಿ, ಧಾರ್ಮಿಕ, ಸಾಮಾಜಿಕ…
ಜು.29ರಂದು ಕಿನ್ನಿಮುಲ್ಕಿಯಲ್ಲಿ ಕಿದಿಯೂರು ಕ್ರೆಡಿಟ್ ಕೋ-ಆಪರೇಟಿವ್ನ ನೂತನ ಶಾಖೆ ಉದ್ಘಾಟನೆ ಉಡುಪಿ: ನಗರದ ಕಿನ್ನಿಮುಲ್ಕಿಯ ಶಾಂತಾ ಬಿಲ್ಡಿಂಗ್ನಲ್ಲಿ ಕಿದಿಯೂರು ಕ್ರೆಡಿಟ್…
ಪಡುಬಿದ್ರಿ : ಆ.1ರಂದು ಹೆಜಮಾಡಿ ಟೋಲ್ ವಿರುದ್ದ ಬೃಹತ್ ಹೋರಾಟ: ಪೋಸ್ಟರ್ ಬಿಡುಗಡೆ ಪಡುಬಿದ್ರಿ : ಹೆಜಮಾಡಿ ಟೋಲ್ನಲ್ಲಿ ಸ್ಥಳೀಯ…
ಲಾವಣ್ಯ ಹತ್ಯೆ ಪ್ರಕರಣ : ಆಸ್ಪತ್ರೆಯಿಂದ ಡಿಸ್ಚಾರ್ಜ್ ಬಳಿಕ ಆರೋಪಿ ಪೊಲೀಸ್ ವಶಕ್ಕೆ ಮಂಗಳೂರು: ಬಿ.ಸಿ.ರೋಡಿನ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದಲ್ಲಿ ಜುಲೈ…
ಮಂಗಳೂರು : ಮೀನುಗಾರ ಮುಖಂಡನ ಕೊಲೆ ಪ್ರಕರಣ: ನಾಲ್ವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಮಂಗಳೂರು : ನಗರ ಹೊರವಲಯದ ಬೈಕಂಪಾಡಿಯ…