Featured

ಮಂಗಳೂರು: ಉದ್ಯಮಿ, ಶ್ರೀಮಂತ ವ್ಯಕ್ತಿಗಳಿಗೆ ಕೋಟ್ಯಂತರ ರೂ. ವಂಚಿಸಿದ ಆರೋಪಿ ಬಂಧನ – vishwanews24

ಮಂಗಳೂರು: ಉದ್ಯಮಿ, ಶ್ರೀಮಂತ ವ್ಯಕ್ತಿಗಳಿಗೆ ಕೋಟ್ಯಂತರ ರೂ. ವಂಚಿಸಿದ ಆರೋಪಿ ಬಂಧನ

ಮಂಗಳೂರು: ಮಂಗಳೂರು ನಗರ ಪೊಲೀಸ್ ಆಯುಕ್ತರ ನೇತೃತ್ವದಲ್ಲಿ ಗುರುವಾರ ತಡರಾತ್ರಿ ನಡೆದ ಮಹತ್ವದ ಕಾರ್ಯಾಚರಣೆಯೊಂದರಲ್ಲಿ ಉದ್ಯಮಿ ಮತ್ತು ಶ್ರೀಮಂತ ವ್ಯಕ್ತಿಗಳಿಗೆ ಕೋಟ್ಯಂತರ ರೂ. ವಂಚಿಸಿದ ಪ್ರಕರಣದ ಆರೋಪಿಯೊಬ್ಬನನ್ನು ಬಂಧಿಸಿರುವುದು ವರದಿಯಾಗಿದೆ.

ಜಪ್ಪಿನಮೊಗರು ನಿವಾಸಿ ರೋಹನ್ ಸಲ್ಡಾನ(45) ಬಂಧಿತ ಆರೋಪಿ. ಈತನನ್ನು ಗುರುವಾರ ರಾತ್ರಿ ಮಂಗಳೂರು ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಮತ್ತು ಎಸಿಪಿ ರವೀಶ್ ನಾಯಕ್ ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿ ಬಂಧಿಸಿದೆ ಎಂದು ತಿಳಿದುಬಂದಿದೆ.

ರೋಹನ್ ಸಲ್ಡಾನ ಉದ್ಯಮಿಯೆಂದು ಹೇಳಿಕೊಂಡು ಹೊರರಾಜ್ಯ, ಹೊರಜಿಲ್ಲೆಯ ಶ್ರೀಮಂತ ವ್ಯಕ್ತಿಗಳನ್ನು ಗುರಿಯಾಗಿಸಿ ಜಾಗದ ವ್ಯವಹಾರದ ಜೊತೆಗೆ ಸಾಲ ನೀಡುವುದಾಗಿ ಹೇಳಿ ನಂಬಿಸುತ್ತಿದ್ದ. ಈ ರೀತಿಯಾಗಿ ಆರೋಪಿ ಕೇವಲ 3 ತಿಂಗಳಲ್ಲೇ 45 ಕೋಟಿ ರೂ. ವ್ಯವಹಾರ ಮಾಡಿರುವುದು ಪತ್ತೆಯಾಗಿದೆ. ಕಳೆದ ಅನೇಕ ವರ್ಷಗಳಿಂದ 200 ಕೋಟಿ ರೂ.ಗೂ ಅಧಿಕ ವಂಚನೆ ಮಾಡಿದ್ದಾನೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಉದ್ಯಮಿ ಹಾಗೂ ಶ್ರೀಮಂತ ವ್ಯಕ್ತಿಗಳನ್ನು ತನ್ನ ಮೋಸದ ಬಲೆಗೆ ಬೀಳಿಸುತ್ತಿದ್ದ ಆರೋಪಿ ತನ್ನ ಜಪ್ಪಿನಮೊಗರುವಿನ ಐಷಾರಾಮಿ ಬಂಗಲೆಗೆ ಕರೆದು ವ್ಯವಹಾರ ನಡೆಸುತ್ತಿದ್ದ. ಈತ 5ರಿಂದ 100 ಕೋಟಿ ರೂ.ವರೆಗೆ ವ್ಯವಹಾರ ಕುದುರಿಸಿಕೊಳ್ಳುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ಆರಂಭಿಕ ಮಾತುಕತೆ ಬಳಿಕ ಉದ್ಯಮಿಗಳಿಂದ 50-100 ಕೋಟಿ ರೂ. ವ್ಯವಹಾರ ಅಥವಾ ಅದಕ್ಕಿಂತ ದೊಡ್ಡ ಮೊತ್ತದ ವ್ಯವಹಾರಕ್ಕೆ 5-10 ಕೋಟಿ ರೂ. ಸ್ಟ್ಯಾಂಪ್ ಡ್ಯೂಟಿ ಹಣ ಪಡೆದು ವ್ಯವಹಾರ ನಡೆಸಿ ತಾನು ನಿರೀಕ್ಷೆ ಮಾಡಿದಷ್ಟು ಹಣ ವಸೂಲಿಯಾದ ಬಳಿಕ ನಾನಾ ನೆಪ ಹೇಳಿ ಉದ್ಯಮಿಗಳಿಂದ ತಪ್ಪಿಸಿಕೊಳ್ಳುತ್ತಿದ್ದ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಆರೋಪಿಯು ತನ್ನ ಮೋಸದ ಬಲೆಗೆ ಬಿದ್ದವರಿಂದ 50 ಲಕ್ಷ ರೂ.ನಿಂದ ನಾಲ್ಕು ಕೋಟಿ ರೂ.ವರೆಗೆ ಪಡೆದು ಆಮೇಲೆ ಯಾರಿಗೂ ಕಾಣದಂತೆ ನಿಗೂಢವಾಗಿ ತಪ್ಪಿಸಿಕೊಳ್ಳುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

Vishwa News 24

Recent Posts

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ – vishwanews24

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…

5 hours ago

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

1 day ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

1 day ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

1 day ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

1 day ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

1 day ago