Featured

ಮಂಗಳೂರು :ಉದ್ಯಾವರ ಅರಸು ದೈವಗಳ ಜಮಾತ್ ಭೇಟಿ ;”ಹಿಂದೂ-ಮುಸ್ಲಿಂ ಬಾಂಧವ್ಯದ ಅಪೂರ್ವ ಸಂಗಮ”; -Vishwanews24

ಮಂಗಳೂರು,ಮಂಜೇಶ್ವರ ಸಮೀಪದ ಉದ್ಯಾವರ ಮಾಡದ ಶ್ರೀ ಅರಸು ಮಂಜಿಷ್ಣಾರ್ ದೈವಗಳು, ಉದ್ಯಾವರ ಸಾವಿರ ಜಮಾತ್ ಮಸೀದಿಗೆ ಭೇಟಿ ನೀಡುವ ಅಪೂರ್ವ ಧಾರ್ಮಿಕ ಕಾರ್ಯಕ್ರಮ ನಡೆದಿದೆ.

ಮೇಷ ಸಂಕ್ರಮಣ ಕಳೆದು ಬರುವ ಮೊದಲ ಶುಕ್ರವಾರ ಈ ಅನುಷ್ಠಾನ ವಾಡಿಕೆಯಾಗಿದೆ.ಆ ಶುಕ್ರವಾರದ ಮಧ್ಯಾಹ್ನ ಉದ್ಯಾವರ ಕ್ಷೇತ್ರದ ಭಂಡಾರ ಮನೆಯಿಂದ ಹೊರಟ ದೈವಗಳು  ಜಮಾಹತ್ ಗೆ ತಲುಪುತ್ತವೆ .ಈ ವೇಳೆ ಜುಮಾ ನಮಾಝ್ ಮುಗಿಸಿ ಸಜ್ಜಾಗಿ ನಿಂತಿದ್ದ ಮಸೀದಿಯ ಆಡಳಿತ ಸಮಿತಿಯ ಪ್ರತಿನಿಧಿಗಳು ಹಾಗೂ ಸಹಸ್ರಾರು ಮುಸ್ಲಿಂ ಬಾಂಧವರು ಪರಂಪರಾಗತ ರೀತಿಯಲ್ಲಿ ಉದ್ಯಾವರ ಅರಸು ದೈವ ಪಾತ್ರಿಗಳಿಗೆ ಅದ್ದೂರಿಯ ಸ್ವಾಗತ ನೀಡುತ್ತಾರೆ. ಜಮಾಅತಿನ ಸರ್ವ ಮುಸ್ಲಿಂ ಬಾಂಧವರನ್ನು ಜಾತ್ರೋತ್ಸವಕ್ಕೆ ಆಹ್ವಾನಿಸಿದೆ.

ಉದ್ಯಾವರ ಶ್ರೀ ಮಾಡ ದೈವ ಕ್ಷೇತ್ರದ ದೈವ ಪಾತ್ರಿಗಳು ಉದ್ಯಾವರ ಸಾವಿರ ಜಮಾತ್ ಮಸೀದಿಗೆ ಭೇಟಿ ನೀಡಿದ ವೇಳೆ ಮಸೀದಿಯ ಆಡಳಿತ ಸಮಿತಿಯ ಪ್ರತಿನಿಧಿಗಳು, ಹಾಗೂ ಮುಸ್ಲಿಂ ಬಾಂಧವರು ದೈವ ಪಾತ್ರಿಗಳಿಗೆ ಪೂರ್ವ ಪರಂಪರೆಯಂತೆ ವೈಭವದ ಸ್ವಾಗತ ನೀಡಿದ್ದಾರೆ.

ವಿಶೇಷವೆಂದರೆ ಉದ್ಯಾವರ ಮಾಡದ ಶ್ರೀ ಅರಸು ದೈವದ ಜಾತ್ರೆಯಲ್ಲಿ ಮುಸ್ಲಿಂ ಬಾಂಧವರೂ ಕೂಡ ಪಾಲ್ಗೊಳ್ಳುತ್ತಾರೆ. ಈ ಕ್ಷೇತ್ರದಲ್ಲಿ ಹಿಂದಿನಿಂದ ನಡೆದುಕೊಂಡು ಬಂದ ಪರಂಪರೆಯಂತೆ ನೇಮೋತ್ಸವ ನಡೆಯುವ ದಿನದಂದು ಮಸೀದಿಯ ಅಧಿಕೃತರು ಕೂರಲು ದೈವಸ್ಥಾನದಲ್ಲಿ ವಿಶೇಷವಾದ ಸ್ಥಳವನ್ನು ಕೊಟ್ಟು, ಗೌರವದಿಂದ ಕಾಣುತ್ತಾರೆ. ಜಾತ್ರೆಯ ದಿನ ದೈವಗಳು ಆಶೀರ್ವದಿಸಿ ನೀಡಿದ ಹೂವನ್ನು ಜಮಾತಿನವರಿಗೆ ನೀಡಲಾಗುತ್ತದೆ.

ಈ ಪವಿತ್ರವಾದ ಮಾಡ ಕ್ಷೇತ್ರದಲ್ಲಿ ನಡೆಯುವ ಜಾತ್ರೋತ್ಸವಕ್ಕೆ ಭೇದಭಾವವಿಲ್ಲದೆ ಹಿಂದೂ ಮುಸಲ್ಮಾನರು ಪಾಲ್ಗೊಳ್ಳುದು ಇಲ್ಲಿಯ ವಿಶೇಷತೆಯಾಗಿದೆ..

ಮೇ 9ರಿಂದ 15ರ ತನಕ ಕ್ಷೇತ್ರದ ಜಾತ್ರೆ ನಡೆಯಲಿದ್ದು, ಮಾಡ ಕ್ಷೇತ್ರದ ಉತ್ಸವಕ್ಕೆ ಸಾವಿರ ಜಮಾತ್ ವ್ಯಾಪ್ತಿಯಲ್ಲಿರುವ ಹೆಚ್ಚಿನ ಮುಸ್ಲಿಂ ಬಾಂಧವರೂ ಪಾಲ್ಗೊಳ್ಳುತ್ತಾರೆ.

 

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

3 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

4 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

4 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

4 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

4 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

4 days ago