ಮಂಗಳೂರು,: ಮಂಜೇಶ್ವರ ಸಮೀಪದ ಉದ್ಯಾವರ ಮಾಡದ ಶ್ರೀ ಅರಸು ಮಂಜಿಷ್ಣಾರ್ ದೈವಗಳು, ಉದ್ಯಾವರ ಸಾವಿರ ಜಮಾತ್ ಮಸೀದಿಗೆ ಭೇಟಿ ನೀಡುವ ಅಪೂರ್ವ ಧಾರ್ಮಿಕ ಕಾರ್ಯಕ್ರಮ ನಡೆದಿದೆ.
ಮೇಷ ಸಂಕ್ರಮಣ ಕಳೆದು ಬರುವ ಮೊದಲ ಶುಕ್ರವಾರ ಈ ಅನುಷ್ಠಾನ ವಾಡಿಕೆಯಾಗಿದೆ.ಆ ಶುಕ್ರವಾರದ ಮಧ್ಯಾಹ್ನ ಉದ್ಯಾವರ ಕ್ಷೇತ್ರದ ಭಂಡಾರ ಮನೆಯಿಂದ ಹೊರಟ ದೈವಗಳು ಜಮಾಹತ್ ಗೆ ತಲುಪುತ್ತವೆ .ಈ ವೇಳೆ ಜುಮಾ ನಮಾಝ್ ಮುಗಿಸಿ ಸಜ್ಜಾಗಿ ನಿಂತಿದ್ದ ಮಸೀದಿಯ ಆಡಳಿತ ಸಮಿತಿಯ ಪ್ರತಿನಿಧಿಗಳು ಹಾಗೂ ಸಹಸ್ರಾರು ಮುಸ್ಲಿಂ ಬಾಂಧವರು ಪರಂಪರಾಗತ ರೀತಿಯಲ್ಲಿ ಉದ್ಯಾವರ ಅರಸು ದೈವ ಪಾತ್ರಿಗಳಿಗೆ ಅದ್ದೂರಿಯ ಸ್ವಾಗತ ನೀಡುತ್ತಾರೆ. ಜಮಾಅತಿನ ಸರ್ವ ಮುಸ್ಲಿಂ ಬಾಂಧವರನ್ನು ಜಾತ್ರೋತ್ಸವಕ್ಕೆ ಆಹ್ವಾನಿಸಿದೆ.
ಉದ್ಯಾವರ ಶ್ರೀ ಮಾಡ ದೈವ ಕ್ಷೇತ್ರದ ದೈವ ಪಾತ್ರಿಗಳು ಉದ್ಯಾವರ ಸಾವಿರ ಜಮಾತ್ ಮಸೀದಿಗೆ ಭೇಟಿ ನೀಡಿದ ವೇಳೆ ಮಸೀದಿಯ ಆಡಳಿತ ಸಮಿತಿಯ ಪ್ರತಿನಿಧಿಗಳು, ಹಾಗೂ ಮುಸ್ಲಿಂ ಬಾಂಧವರು ದೈವ ಪಾತ್ರಿಗಳಿಗೆ ಪೂರ್ವ ಪರಂಪರೆಯಂತೆ ವೈಭವದ ಸ್ವಾಗತ ನೀಡಿದ್ದಾರೆ.
ವಿಶೇಷವೆಂದರೆ ಉದ್ಯಾವರ ಮಾಡದ ಶ್ರೀ ಅರಸು ದೈವದ ಜಾತ್ರೆಯಲ್ಲಿ ಮುಸ್ಲಿಂ ಬಾಂಧವರೂ ಕೂಡ ಪಾಲ್ಗೊಳ್ಳುತ್ತಾರೆ. ಈ ಕ್ಷೇತ್ರದಲ್ಲಿ ಹಿಂದಿನಿಂದ ನಡೆದುಕೊಂಡು ಬಂದ ಪರಂಪರೆಯಂತೆ ನೇಮೋತ್ಸವ ನಡೆಯುವ ದಿನದಂದು ಮಸೀದಿಯ ಅಧಿಕೃತರು ಕೂರಲು ದೈವಸ್ಥಾನದಲ್ಲಿ ವಿಶೇಷವಾದ ಸ್ಥಳವನ್ನು ಕೊಟ್ಟು, ಗೌರವದಿಂದ ಕಾಣುತ್ತಾರೆ. ಜಾತ್ರೆಯ ದಿನ ದೈವಗಳು ಆಶೀರ್ವದಿಸಿ ನೀಡಿದ ಹೂವನ್ನು ಜಮಾತಿನವರಿಗೆ ನೀಡಲಾಗುತ್ತದೆ.
ಈ ಪವಿತ್ರವಾದ ಮಾಡ ಕ್ಷೇತ್ರದಲ್ಲಿ ನಡೆಯುವ ಜಾತ್ರೋತ್ಸವಕ್ಕೆ ಭೇದಭಾವವಿಲ್ಲದೆ ಹಿಂದೂ ಮುಸಲ್ಮಾನರು ಪಾಲ್ಗೊಳ್ಳುದು ಇಲ್ಲಿಯ ವಿಶೇಷತೆಯಾಗಿದೆ..
ಮೇ 9ರಿಂದ 15ರ ತನಕ ಕ್ಷೇತ್ರದ ಜಾತ್ರೆ ನಡೆಯಲಿದ್ದು, ಮಾಡ ಕ್ಷೇತ್ರದ ಉತ್ಸವಕ್ಕೆ ಸಾವಿರ ಜಮಾತ್ ವ್ಯಾಪ್ತಿಯಲ್ಲಿರುವ ಹೆಚ್ಚಿನ ಮುಸ್ಲಿಂ ಬಾಂಧವರೂ ಪಾಲ್ಗೊಳ್ಳುತ್ತಾರೆ.
ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ - 1,52,000 ಮೌಲ್ಯದ…
ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ ಮಂಗಳೂರು: ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು…
ರಾಮಮಂದಿರ ದೇಣಿಗೆ ಕಳ್ಳತನ ವಿವಾದ: ಟ್ರಸ್ಟ್ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್ ರಾಯ್ ರಾಜೀನಾಮೆ ಲಕ್ನೋ: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ…
ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್ಐಆರ್ ಕಡ್ಡಾಯ: ಪೊಲೀಸರಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸೂಚನೆ ಬೆಂಗಳೂರು: ಪ್ರತೀಕಾರಾತ್ಮಕ ಅಶ್ಲೀಲತೆ ಹಾಗೂ…
ರಾಮಭಕ್ತರ ಅಗ್ನಿಪರೀಕ್ಷೆ ಮಾಡಬೇಡಿ, ಭಕ್ತರು ತಮ್ಮ ನಂಬಿಕೆ ಮತ್ತು ಭಕ್ತಿಯಿಂದ ಕಾಣಿಕೆ ನೀಡುತ್ತಾರೆ : ಯೋಗಿ ಆದಿತ್ಯನಾಥ್ ಲಕ್ನೋ: ರಾಮಭಕ್ತರ…
ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…