ಮಂಗಳೂರು: ಉದ್ಯೋಗಕ್ಕೆ ತೆರಳಿದ್ದ ಯುವತಿ ನಾಪತ್ತೆ – Vishwanews24
ಮಂಗಳೂರು: ಉದ್ಯೋಗಕ್ಕೆ ತೆರಳಿದ್ದ ಯುವತಿ ನಾಪತ್ತೆ
ಮಂಗಳೂರು: ನಗರದ ಮಣಪ್ಪುರಂ ಫೈನಾನ್ಸ್ನ ಉದ್ಯೋಗಿಯಾಗಿದ್ದ ಯುವತಿಯೊಬ್ಬಳು ನಾಪತ್ತೆಯಾದ ಬಗ್ಗೆ ಸುರತ್ಕಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಮಲಾಕ್ಷ ಎಂಬವರ ಪುತ್ರಿ ಶಿವಾನಿ (20) ಕಾಣೆಯಾದ ಯುವತಿ. ಈಕೆ ಜ.16ರಂದು ಬೆಳಗ್ಗೆ 7ಕ್ಕೆ ಕೆಲಸಕ್ಕೆ ತೆರಳಿದ್ದು, ಸಂಜೆ 6 ಗಂಟೆಯಾದರೂ ಮರಳಿ ಬಂದಿಲ್ಲ ಎಂದು ದೂರಿನಲ್ಲಿ ತಿಳಿಸಲಾಗಿದೆ. ಮೊಬೈಲ್ ಸ್ವಿಚ್ ಆಫ್ ಆಗಿದ್ದು ಸಂಸ್ಥೆಯ ಸಿಬ್ಬಂದಿಯವರಲ್ಲಿ ವಿಚಾರಿಸಿದಾಗಲೂ ಹೆಚ್ಚಿನ ಮಾಹಿತಿ ತಿಳಿದುಬಂದಿಲ್ಲ.
ಬ್ರಹ್ಮಾವರ: ಲಾರಿ ಹಾಗೂ ಬೈಕ್ ಅಫಘಾತ :: ಇಬ್ಬರು ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವು – Vishwanews24
5.6 ಅಡಿ ಎತ್ತರದ, ಬಿಳಿ ಮೈಬಣ್ಣದ, ದಪ್ಪಮುಖದ, ಸಾಧಾರಣ ಮೈಕಟ್ಟಿನ ಈಕೆ ತುಳು ಮತ್ತು ಕನ್ನಡ ಭಾಷೆ ಮಾತನಾಡುತ್ತಾರೆ.ಮನೆಯಿಂದ ಹೊರಟು ಹೋದಾಗ ಹಸಿರು ಬಣ್ಣದ ಟಾಪ್ ಹಾಗೂ ಗೋಲ್ಡನ್ ಕಲರ್ ಪ್ಯಾಂಟ್ ಧರಿಸಿರುತ್ತಾರೆ. ಈಕೆಯನ್ನು ಕಂಡವರು ಸುರತ್ಕಲ್ ಠಾಣೆ (0824-2220540, 9480805360, 9480802345) ಅಥವಾ ಮಂಗಳೂರು ನಗರ ಕಂಟ್ರೋಲ್ ರೂಮ್ (0824-2220800) ಮಾಹಿತಿ ನೀಡಬಹುದು ಎಂದು ಪ್ರಕಟನೆ ತಿಳಿಸಿದೆ.
Join our Whatsapp group by clicking the below link 👇👇
