ಮಂಗಳೂರು: ನಗರದ ಮಣಪ್ಪುರಂ ಫೈನಾನ್ಸ್ನ ಉದ್ಯೋಗಿಯಾಗಿದ್ದ ಯುವತಿಯೊಬ್ಬಳು ನಾಪತ್ತೆಯಾದ ಬಗ್ಗೆ ಸುರತ್ಕಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಮಲಾಕ್ಷ ಎಂಬವರ ಪುತ್ರಿ ಶಿವಾನಿ (20) ಕಾಣೆಯಾದ ಯುವತಿ. ಈಕೆ ಜ.16ರಂದು ಬೆಳಗ್ಗೆ 7ಕ್ಕೆ ಕೆಲಸಕ್ಕೆ ತೆರಳಿದ್ದು, ಸಂಜೆ 6 ಗಂಟೆಯಾದರೂ ಮರಳಿ ಬಂದಿಲ್ಲ ಎಂದು ದೂರಿನಲ್ಲಿ ತಿಳಿಸಲಾಗಿದೆ. ಮೊಬೈಲ್ ಸ್ವಿಚ್ ಆಫ್ ಆಗಿದ್ದು ಸಂಸ್ಥೆಯ ಸಿಬ್ಬಂದಿಯವರಲ್ಲಿ ವಿಚಾರಿಸಿದಾಗಲೂ ಹೆಚ್ಚಿನ ಮಾಹಿತಿ ತಿಳಿದುಬಂದಿಲ್ಲ.
5.6 ಅಡಿ ಎತ್ತರದ, ಬಿಳಿ ಮೈಬಣ್ಣದ, ದಪ್ಪಮುಖದ, ಸಾಧಾರಣ ಮೈಕಟ್ಟಿನ ಈಕೆ ತುಳು ಮತ್ತು ಕನ್ನಡ ಭಾಷೆ ಮಾತನಾಡುತ್ತಾರೆ.ಮನೆಯಿಂದ ಹೊರಟು ಹೋದಾಗ ಹಸಿರು ಬಣ್ಣದ ಟಾಪ್ ಹಾಗೂ ಗೋಲ್ಡನ್ ಕಲರ್ ಪ್ಯಾಂಟ್ ಧರಿಸಿರುತ್ತಾರೆ. ಈಕೆಯನ್ನು ಕಂಡವರು ಸುರತ್ಕಲ್ ಠಾಣೆ (0824-2220540, 9480805360, 9480802345) ಅಥವಾ ಮಂಗಳೂರು ನಗರ ಕಂಟ್ರೋಲ್ ರೂಮ್ (0824-2220800) ಮಾಹಿತಿ ನೀಡಬಹುದು ಎಂದು ಪ್ರಕಟನೆ ತಿಳಿಸಿದೆ.
Join our Whatsapp group by clicking the below link 👇👇
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…
ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…