Featured

ಮಂಗಳೂರು : ಉಳಾಯಿಬೆಟ್ಟು ಉದ್ಯಮಿ ದರೋಡೆ ಪ್ರಕರಣ; 10 ಮಂದಿ ಆರೋಪಿಗಳ ಬಂಧನ – vishwanews24

ಮಂಗಳೂರು : ಉಳಾಯಿಬೆಟ್ಟು ಉದ್ಯಮಿ ದರೋಡೆ ಪ್ರಕರಣ; 10 ಮಂದಿ ಆರೋಪಿಗಳ ಬಂಧನ

ಮಂಗಳೂರು : ಭಾರಿ ಕುತೂಹಲ ಕೆರಳಿಸಿದ್ದ ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಉಳಾಯಿಬೆಟ್ಟು ದರೋಡೆ ಪ್ರಕರಣವನ್ನು ಮಂಗಳೂರು ಪೊಲೀಸರು ಬೇಧಿಸಿದ್ದು ಪ್ರಕರಣ 10 ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ.

ಉಳಾಯಿಬೆಟ್ಟುವಿನ ಗುತ್ತಿಗೆದಾರ ಪದ್ಮನಾಭ ಕೋಟ್ಯಾನ್ ರ ನಿವಾಸದಲ್ಲಿ ಜೂ.21ರಂದು ಈ ದರೋಡೆ ಪ್ರಕರಣ ನಡೆದಿತ್ತು. ಈ ಬಗ್ಗೆ ಮಂಗಳೂರು ನಗರ ಪೊಲೀಸ್ ಆಯುಕ್ತರಾದ ಅನುಪಮ್ ಅಗರ್ವಾಲ್ ಮಾಹಿತಿ ನೀಡಿದ್ದಾರೆ.

ನೀರಮಾರ್ಗದ ವಸಂತಕುಮಾರ್ (42), ನೀರಮಾರ್ಗದ ರಮೇಶ್ (42), ಬಂಟ್ವಾಳದ ಬಾಲಕೃಷ್ಣ ರೇಮಂಡ್ ಡಿಸೋಜಾ (47) . ಕಾಸರಗೋಡಿನಿಂದ (48), ತ್ರಿಶೂರಿನ ಜಾಕೀರ್ ಹುಸೇನ್ (56), ತ್ರಿಶೂರ್‌ನಿಂದ ವಿನೋಜ್ (38), ತ್ರಿಶೂರ್‌ನಿಂದ ಸಜೀಶ್ ಎಂಎಂ (32), ತಿರುವನಂತಪುರದಿಂದ ಬಿಜು ಜಿ (41), ತ್ರಿಶೂರ್‌ನಿಂದ ಸತೀಶ್ ಬಾಬು (44), ಮತ್ತು ಶಿಜೋ ದೇವಸಿ (38) ಬಂಧಿತ ಆರೋಪಿಗಳಾಗಿದ್ದಾರೆ.

ಜೂನ್ 21ರಂದು ರಾತ್ರಿ 8 ಗಂಟೆ ಸುಮಾರಿಗೆ ಎಂಟರಿಂದ ಒಂಬತ್ತು ಮಂದಿ ಮುಸುಕುಧಾರಿಗಳು ಮನೆಗೆ ನುಗ್ಗಿ ಗುತ್ತಿಗೆದಾರ ಪದ್ಮನಾಭ ಕೋಟ್ಯಾನ್ ರವರನ್ನು ಕಟ್ಟಿ ಹಾಕಿ ಥಳಿಸಿದ್ದು ಹಾಗೂ ಪತ್ನಿ, ಮಕ್ಕಳನ್ನು ಬೆದರಿಸಿ 9 ಲಕ್ಷ ಮೌಲ್ಯದ ನಗದು ಹಾಗೂ ಚಿನ್ನಾಭರಣ ದೋಚಿ ಮನೆಯ ವಾಹನದಲ್ಲೇ ಅಲ್ಪ ದೂರದ ವರೆಗೆ ಪ್ರಯಾಣಿಸಿ ನಂತರ ಅವರ ವಾಹನವನ್ನು ಮಧ್ಯದಲ್ಲೇ ಬಿಟ್ಟು ಇನ್ನೋವಾದಲ್ಲಿ ಪರಾರಿಯಾಗಿದ್ದರು.

ಸ್ಥಳೀಯ ನಾಲ್ವರು ಆರೋಪಿಗಳಾದ ವಸಂತ್, ರಮೇಶ್, ರೇಮಂಡ್ ಮತ್ತು ಬಾಲಕೃಷ್ಣ ಈ ದರೋಡೆಗೆ ಯೋಜನೆ ರೂಪಿಸಿ ನಳಿಕ ಜಾನ್ ಬಾಸ್ಕೋ ನೇತೃತ್ವದ ಕೇರಳ ತಂಡದೊಂದಿಗೆ ಸಂಪರ್ಕ ಹೊಂದಿದ್ದರು.

ಎಂಟು ತಿಂಗಳ ಹಿಂದೆಯೇ ಯೋಜನೆ ರೂಪಿಸಲಾಗಿತ್ತು. ಕೇರಳದ ತಂಡ ಮಂಗಳೂರಿಗೆ ಭೇಟಿ ನೀಡಿದ್ದು, ದರೋಡೆಗೆ ಪ್ರದೇಶದ ಸ್ಕೆಚ್ ಮತ್ತು ನಕ್ಷೆಯನ್ನು ಸಿದ್ಧಪಡಿಸುವಂತೆ ರಮೇಶ್ ಮತ್ತು ವಸಂತ್ ಅವರನ್ನು ಕೇಳಿದ್ದರು ಅದರಂತೆಯೇ ಗುತ್ತಿಗೆದಾರನ ಬಳಿ 100 ರಿಂದ 300 ಕೋಟಿ ರೂ.ಗೂ ಹೆಚ್ಚು ಹಣವಿದೆ ಎಂದು ಸ್ಥಳೀಯ ಆರೋಪಿಗಳು ಕೇರಳ ತಂಡಕ್ಕೆ ತಿಳಿಸಿದ್ದು ಲೂಟಿಹೊಡೆಯಲು ಎಲ್ಲಾ ರೀತಿಯ ಸ್ಕೆಚ್ ತಯಾರಿಸಿದ್ದರು.

ಈ ಪ್ರಕರಣದಲ್ಲಿ ಇನ್ನೂ 4-5 ಮಂದಿಯನ್ನು ಬಂಧಿಸಬೇಕಿದ್ದು 100ರಿಂದ 300 ಕೋಟಿ ಲೂಟಿ ಮಾಡಬಹುದೆಂದು ನಂಬಿಸಿ ಮಾಸ್ಟರ್‌ ಬೆಡ್‌ರೂಮ್‌ನ ಟೈಲ್ಸ್‌ ತೆಗೆಯಲು 20ಕ್ಕೂ ಹೆಚ್ಚು ಗೋಣಿ ಚೀಲಗಳು ಮತ್ತು ಸಲಕರಣೆಗಳನ್ನು ತಂದಿದ್ದರು. ಒಂದೇ ಒಂದು ಸುಳಿವೇ ಇಲ್ಲದ ಕುರುಡು ಪ್ರಕರಣವಾಗಿರುವುದರಿಂದ ಆರೋಪಿಗಳ ಪತ್ತೆಗೆ ಪೊಲೀಸರು ಮೂರು ತಂಡಗಳನ್ನು ರಚಿಸಿದ್ದರು. ಕಳೆದ 15 ದಿನಗಳಿಂದ ಈ ಪ್ರಕರಣವನ್ನು ಭೇದಿಸಲು ಅವಿರತವಾಗಿ ಶ್ರಮಿಸಿದ ಡಿಸಿಪಿ, ಎಸಿಪಿ ಮತ್ತು ಸಿಸಿಬಿ ಸಿಬ್ಬಂದಿಯನ್ನು ನಾನು ಅಭಿನಂದಿಸುತ್ತೇನೆ ಎಂದು ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

4 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

4 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

4 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

4 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

4 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

4 days ago