Featured

ಮಂಗಳೂರು:  ಉಳ್ಳಾಲ ಕ್ಷೇತ್ರಕ್ಕೆ ಯು ಟಿ ಖಾದರ್ ವಿರುದ್ಧ SDPI ಪಕ್ಷದ ರಿಯಾಝ್ ಫರಂಗಿ ಪೇಟೆ  – Vishwanews24

ಮಂಗಳೂರು:  ಉಳ್ಳಾಲ ಕ್ಷೇತ್ರಕ್ಕೆ ಯು ಟಿ ಖಾದರ್ ವಿರುದ್ಧ SDPI ಪಕ್ಷದ ರಿಯಾಝ್ ಫರಂಗಿ ಪೇಟೆ

ಮಂಗಳೂರು: ರಾಜ್ಯ ವಿಧಾನ ಸಭಾ ಚುನಾವಣಾ ಕಾವು ಜೋರಾಗಿದ್ದು, ಚುನಾವಣಾ ದಿನಾಂಕ ಘೋಷಣೆಗೂ ಮುನ್ನವೇ ಇದೀಗ ಸೋಲು ಗೆಲುವಿನ ಲೆಕ್ಕಾಚಾರ ಶುರುವಾಗಿದೆ. ದಕ್ಷಿಣ ಕನ್ನಡ 8 ವಿಧಾನ ಸಭಾ ಕ್ಷೇತ್ರದಲ್ಲಿ ಸತತ ಗೆಲುವಿನ ಸರದಾರ ಮಂಗಳೂರು ಅಂದರೆ ಉಳ್ಳಾಲ ಕ್ಷೇತ್ರದ ಕಾಂಗ್ರೆಸ್ ಶಾಸಕ ಯು ಟಿ ಖಾದರ್ ಅವರನ್ನು ಕಟ್ಟಿ ಹಾಕಲು ಇತರ ಪಕ್ಷಗಳು ಸತತ ಪ್ರಯತ್ನ ನಡೆಸಿವೆ. ಈ ಬಾರಿ ಉಳ್ಳಾಲ ಕ್ಷೇತ್ರದ ಚುನಾವಣೆ ಇನ್ನಷ್ಟು ರೋಚಕವಾಗಿರಲಿದೆ. ಇದಕ್ಕೆ ಪ್ರಮುಖ ಕಾರಣ ಎಸ್ ಡಿಪಿಐ ಪಕ್ಷ ಉಳ್ಳಾಲ ಕ್ಷೇತ್ರಕ್ಕೆ ರಿಯಾಝ್ ಫರಂಗಿ ಪೇಟೆಯನ್ನು ಕಣಕ್ಕಿಳಿಸಿದೆ.

ತಾಂಟ್ರೆ ಬಾ ತಾಂಟ್‌ ಭಾಷಣದ ಮೂಲಕ ಪ್ರಸಿದ್ಧಿಗೆ ಬಂದಿರುವ ರಿಯಾಝ್‌ ಎಸ್‌ಡಿಪಿಐ ಪಕ್ಷದ ಜನಪ್ರಿಯ ನಾಯಕ. ಎಲ್ಲರನ್ನೂ ಒಗ್ಗೂಡಿಸಿಕೊಂಡು ಹೋಗುವ ಚಾಕಚಕ್ಯತೆ ಉಳ್ಳವರು. ಹೀಗಾಗಿ ಯು ಟಿ ಖಾದರ್ ವಿರುದ್ಧ ಎಸ್‌ಡಿಪಿಐ ಸಮರ್ಥ ಅಭ್ಯರ್ಥಿಯನ್ನೇ ಕಣಕ್ಕಿಳಿಸಿದ್ದು,ಈ ಬಾರಿ ಉಳ್ಳಾಲವನ್ನು ಕರಾವಳಿಯಲ್ಲಿ ತನ್ನ ಗೆಲುವಿಗೆ ಮೆಟ್ಟಲನ್ನಾಗಿ ಮಾಡಬಹುದೇ ಎನ್ನುವ ಪ್ರಶ್ನೆ ಎದುರಾಗಿದೆ.

ಇನ್ನು ಬಿಜೆಪಿ ಕೂಡಾ ಇಲ್ಲಿ ಖಾದರ್ ವಿರುದ್ಧ ಸಮರ್ಥ ಅಭ್ಯರ್ಥಿಯನ್ನೇ ಕಣಕ್ಕಿಳಿಸಲು ಹುಡುಕಾಟ ನಡೆಸುತ್ತಿದೆ. ಆದರೆ ಅದಕ್ಕೂ ಖಾದರ್ ವಿರುದ್ಧ ಸ್ಪರ್ಧಿಸುವ ಅಭ್ಯರ್ಥಿ ಸಮರ್ಥ ಅಭ್ಯರ್ಥಿ ಕೊರತೆ ಕಾಡಿದೆ.ಆದರೆ ಖಾದರ್ ಮಾತ್ರ ಯಾವುದೇ ತಲೆ ಕೆಡಿಸಿಕೊಳ್ಳದೇ ತನ್ನ ಕೆಲಸ ಕಾರ್ಯಗಳನ್ನು ಯಾವುದೇ ಜಾತಿ, ಮತ, ಧರ್ಮ ಇಲ್ಲದೇ ಎಲ್ಲರನ್ನೂ ಒಗ್ಗೂಡಿಸಿಕೊಂಡು ಹೋಗುತ್ತಿದ್ದಾರೆ.ಒಟ್ಟಿನಲ್ಲಿ ಉಳ್ಳಾಲ ಕ್ಷೇತ್ರದ ಚುನಾವಣಾ ಕ್ಷೇತ್ರ ಮಾತ್ರ ಈ ಬಾರಿ ರೋಚಕವಾಗಿರಲಿದೆ.

Vishwa News 24

Recent Posts

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ -vishwanews24

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…

14 hours ago

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ -vishwanews24

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…

14 hours ago

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ -vishwanews24

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…

14 hours ago

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ -vishwanews24

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…

15 hours ago

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ -vishwanews24

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…

15 hours ago

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ -vishwanews24

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…

15 hours ago