ಮಂಗಳೂರು : ಉಳ್ಳಾಲದ ನೇತ್ರಾವತಿ ನದಿ ಸೇತುವೆಯ ಎರಡೂ ಕಡೆಗಳಲ್ಲಿ ಸುರಕ್ಷತಾ ತಡೆಗೋಡೆ ಅಳವಡಿಕೆಗೆ ಕ್ರಿಯಾ ಯೋಜನೆ ಹಾಗೂ ಸೇತುವೆಯ ಎರಡೂ ಬದಿಗಳಲ್ಲಿ ತಕ್ಷಣವೇ ಸಿಸಿ ಕ್ಯಾಮರಾ ಅಳವಡಿಕೆಗೆ ಶನಿವಾರ ನಡೆದ ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರ ಸಭೆಯಲ್ಲಿ ಸೂಚನೆ ನೀಡಲಾಗಿದೆ ಎಂದು ಶಾಸಕ ವೇದವ್ಯಾಸ್ ಕಾಮತ್ ತಿಳಿಸಿದ್ದಾರೆ.
ಇಂದು ನಡೆದ ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರ ಸಭೆಯಲ್ಲಿ ಮಂಗಳೂರು – ಕೇರಳ ರಾಷ್ಟ್ರೀಯ ಹೆದ್ದಾರಿಯಲ್ಲಿ ಬರುವ ನೇತ್ರಾವತಿ ಸೇತುವೆಯಲ್ಲಿ ಹೆಚ್ಚುತ್ತಿರುವ ಅಹಿತಕರ ಘಟನೆಗಳನ್ನು ತಡೆಯವ ನಿಟ್ಟಿನಲ್ಲಿ ಸೇತುವೆಯ ಎರಡು ಕಡೆಗಳಲ್ಲಿ ಸುರಕ್ಷತಾ ತಡೆಗೋಡೆ ಅಳವಡಿಸುವ ಕಾಮಗಾರಿಗೆ ಕ್ರಿಯಾ ಯೋಜನೆ ತಯಾರಿಸಿ ಮುಂದಿನ ತಿಂಗಳು ನಡೆಯುವ ಸಭೆಯಲ್ಲಿ ಅನುಮೋದನೆ ನೀಡುವ ಕುರಿತು ನಿರ್ಧರಿಸಲಾಗಿದೆ. ಹಾಗೂ ತಕ್ಷಣವೇ ಇಕ್ಕೆಲಗಳಲ್ಲಿ ಸಿಸಿಟಿವಿ ಕ್ಯಾಮರಾ ಅಳವಡಿಕೆಗೆ ಸೂಚನೆ ನೀಡಲಾಗಿದೆ ಎಂದು ಅವರು ತಿಳಿಸಿದ್ದಾರೆ.
ವೆಲೆನ್ಸಿಯಾ ಜಂಕ್ಷನ್ನಲ್ಲಿರುವ ಪಾರ್ಕನ್ನು ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಕಡೆಯಿಂದ ತಕ್ಷಣವೇ ಅಭಿವೃದ್ಧಿಪಡಿಸಲು ನಿರ್ಧರಿಸಲಾಗಿದೆ. ನಗರದ ಸೌಂದರ್ಯ ಹೆಚ್ಚಿಸಲು ಸಹಕಾರಿಯಾಗುವಂತೆ ಪಾರ್ಕ್ ಅಭಿವೃದ್ಧಿಗೊಳಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.
ಸಭೆಯಲ್ಲಿ ಜಿಲ್ಲಾಧಿಕಾರಿ ಸಿಂಧೂ ರೂಪೇಶ್, ವಿಧಾನ ಪರಿಷತ್ ಸದಸ್ಯರಾದ ಐವನ್ ಡಿಸೋಜ, ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತರಾದ ಶ್ರೀಕಾಂತ್ ರಾವ್, ಪಾಲಿಕೆ ಆಯುಕ್ತ ಶಾನಾಡಿ ಅಜಿತ್ ಕುಮಾರ್ ಹೆಗ್ಡೆ ಹಾಗೂ ಇತರ ಅಧಿಕಾರಿಗಳು ಉಪಸ್ಥಿತರಿದ್ದರು.
ಇಲ್ಲಿಯವರೆಗೂ ಏಷ್ಟೋ ದೈವ ದೇವರು ಜ್ಯೋತಿಷ್ಯರಲ್ಲಿ ಕೇಳಿ ಸರಿಯಾದ ಪರಿಹಾರ ಸಿಗದೆ ನೊಂದಿದ್ದರೆ.ಅಂತಃಹ ಯಾವುದೇ ಕಠಿಣ ಸಮಸ್ಯೆ ಗಳಿದ್ದರು ಉತ್ತಮ ಸಲಹೆ ಹಾಗೂ ಶಾಶ್ವತ ಪರಿಹಾರ ತಿಳಿಸುತ್ತಾರೆ.
ಇಂದೇ ಸಂಪರ್ಕಿಸಿ ಪಂಡಿತ್ ವೈದಿಕ ಶ್ರೀ ಗಣಪತಿ ಭಟ್
8088827292
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…