ಮಂಗಳೂರು : ಮೀನುಗಾರಿಕೆಗಾಗಿ ಆಳ ಸಮುದ್ರಕ್ಕೆ ತೆರಳಿದ್ದ ಮೀನುಗಾರಿಕೆ ಬೋಟ್ ಎಂಜಿನ್ ವೈಫಲ್ಯದಿಂದ ಸಮುದ್ರ ತಟದ ಕಲ್ಲು ಬಂಡೆಗಳಿಗೆ ಬಡಿದು ಪಲ್ಟಿ ಹೊಡೆದ ಘಟನೆ ಉಳ್ಳಾಲ ಸೀಗ್ರೌಂಡ್ನಲ್ಲಿ ಸೋಮವಾರ ಮುಂಜಾನೆ ಘಟನೆ ನಡೆದಿದೆ. ಹಡಗಿನಲ್ಲಿದ್ದ 13 ಮೀನುಗಾರರ ಪ್ರಾಣ ಅಪಾಯದಿಂದ ಪಾರಾಗಿದ್ದಾರೆ.
ಬುರಾಕ್ ಟ್ರಾಲರ್ ಎಂಬ ದೋಣಿ ಉಳ್ಳಾಲದ ಮುಕ್ಕಚ್ಚೇರಿ ನಿವಾಸಿ ಮೊಹಮ್ಮದ್ ಅಶ್ಫಾಕ್ ಅವರಿಗೆ ಸೇರಿದ್ದು, ಭಾನುವಾರ ರಾತ್ರಿ ಈ ಹಡಗು ಮಂಗಳೂರು ಬಂದರಿನಿಂದ ಕೇರಳದ ಕಡೆಗೆ ಆಳ ಸಮುದ್ರ ಮೀನುಗಾರಿಕೆಗಾಗಿ ಹೊರಟಿತ್ತು.
ಅದೃಷ್ಟವಶಾತ್, ಸಮುದ್ರ ಅಲೆಗಳ ಹೊಡೆತಕ್ಕೆ ಸಿಲುಕಿ, ದೋಣಿ ಕರಾವಳಿಯ ಕಡೆಗೆ ಸಾಗಿ ಸೋಮವಾರ ಮುಂಜಾನೆ ಸೀಗ್ರೌಂಡ್ ಬಳಿ ಎಂಜಿನ್ ಹಠಾತ್ತಾಗಿ ಬಂದ್ ಆಗಿ ಕಡಲ ತೀರಕ್ಕೆ ಡಿಕ್ಕಿ ಹೊಡೆದಿದೆ. 13 ಮೀನುಗಾರರು ಯಾವುದೇ ಅಪಾಯವಿಲ್ಲದೆ ಪಾರಾಗಿದ್ದಾರೆ. ಈ ಘಟನೆಯಿಂದ ದೋಣಿ ಮಾಲೀಕರಿಗೆ ಲಕ್ಷಾಂತರ ರೂಪಾಯಿ ನಷ್ಟವಾಗಿದೆ. ಘಟನೆಗೆ ಸಂಬಂಧಿಸಿದಂತೆ ಉಳ್ಳಾಲ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…
ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಉಡುಪಿ:ಮುದರಂಗಡಿ…
ಟೈಮಿಂಗ್ ವಿವಾದ: ಕಾಪು ಪೇಟೆಯಲ್ಲಿ ಮತ್ತೆ ಖಾಸಗಿ ಎಕ್ಸ್ಪ್ರೆಸ್ ಬಸ್ ಚಾಲಕರ ವಾಗ್ವಾದ ; ಸ್ಥಳೀಯರಲ್ಲಿ ಆತಂಕ ಕಾಪು: ರಾಷ್ಟ್ರೀಯ…
ಉಡುಪಿ: 'ಭಗವತಿ ಟೂರಿಸ್ಟ್' ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ ಉಡುಪಿ: ನಗರದ ಸರ್ವಿಸ್ ಬಸ್ ನಿಲ್ದಾಣದ…
ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ ಮಂಗಳೂರು: ಇಲ್ಲಿನ ಬಾರ್ ಒಂದರಲ್ಲಿ ತಲವಾರು…