ಮಂಗಳೂರು : ನವಮಂಗಳೂರು ಬಂದರಿನ 14ನೇ ಬರ್ತ್ನಲ್ಲಿ 10 ಚಕ್ರದ ಕಂಟೈನರ್ ಲಾರಿಯೊಂದು ನಿಯಂತ್ರಣ ತಪ್ಪಿ ಸಮುದ್ರಕ್ಕೆ ಬಿದ್ದ ಪರಿಣಾಮ ಓರ್ವ ಸಾವನ್ನಪ್ಪಿ ಮತ್ತೋರ್ವ ಕಾಣೆಯಾದ ಘಟನೆ ಭಾನುವಾರ ರಾತ್ರಿ 10.30 ಕ್ಕೆ ನಡೆದಿದೆ.
ಮೃತರನ್ನು ಕಂಟೈನರ್ ಲಾರಿ ಚಾಲಕ ಉತ್ತರ ಕರ್ನಾಟಕ ಮೂಲದ ರಾಜೇಸಾಬ (26) ಎಂದು ಗುರುತಿಸಲಾಗಿದ್ದು, ಲಾರಿ ಕ್ಲೀನರ್ ಭೀಮಪ್ಪ(22) ನಾಪತ್ತೆಯಾಗಿದ್ದಾರೆ.
ಡೆಲ್ಟಾ ಕಂಪನಿಯ ಕೆಎ 22 ಸಿ 8257 ನೋಂದಣಿಯ ಟ್ರಕ್ , ಕಬ್ಬಿಣದ ಅದಿರನ್ನು ಹಡಗಿನಿಂದ ಲೋಡ್ ಮಾಡಲು ಬಂದಿದ್ದ ಈ ವೇಳೆ ಘಟನೆ ನಡೆದಿದೆ. ಇದನ್ನು ಕಂಡು ಅಲ್ಲಿಂದ ಹಾದು ಹೋಗುವ ಟಗ್ ಬೋಟ್ ನ ಪೈಲಟ್ ಘಟನೆ ಬಗ್ಗೆ ವಿಟಿಎಂಎಸ್ ಕ ಟ್ರೋಲ್ ರೂಂಗೆ ಮಾಹಿತಿ ರವಾನಿಸಿದ್ದಾರೆ.
ತಕ್ಷಣ ಸಿಐಎಸ್ಎಫ್ ಕ್ಯೂಆರ್ ಟಿ ಮತ್ತು ಸಿಸ್ಎಫ್ ಗಸ್ತು ದೋಣಿ ಅಲ್ಲಿಗೆ ತಲುಪಿ ಟಗ್ ಬೋಟ್ ಸಹಾಯದಿಂದ ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಯನ್ನು ನಡೆಸಿದ್ದಾರೆ . ಸುಮಾರು 11.30 ರ ವೇಳೆಗೆ ಸಮುದ್ರಕ್ಕೆ ಬಿದ್ದ ಓರ್ವರನ್ನು ಪತ್ತೆ ಹಚ್ಚಿ ಆಸ್ಪತ್ರೆಗೆ ರವಾನಿಸಿದರೂ ಅದಾಗಲೇ ವೈದ್ಯರು ಮೃತಪಟ್ಟಿದ್ದಾರೆ ಎಂದು ಘೋಷಿಸಿದ್ದಾರೆ .
ಕಾಣೆಯಾದ ಲಾರಿ ಕ್ಲೀನರ್ ಪತ್ತೆಗಾಗಿ ಶೋಧ ಕಾರ್ಯ ಮುಂದುವರಿದೆ. ಮಂಗಳೂರು ಉತ್ತರ ಸಂಚಾರ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸುತ್ತಿದ್ದಾರೆ.
ಅರೆಂಜ್ ಅಲರ್ಟ್ ಹಿನ್ನೆಲೆ : ದ.ಕ ಜಿಲ್ಲೆಯಲ್ಲಿ ನಾಳೆ ( ಜು.3) ಶಾಲಾ ಕಾಲೇಜಿಗೆ ರಜೆ ಘೋಷಣೆ ಮಂಗಳೂರು :…
ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ ಕಳೆದ 3 ತಿಂಗಳ ಸರಾಸರಿ ವಿದ್ಯುತ್ ಬಳಕೆಯ ಆಧಾರದ ಮೇಲೆ ಜುಲೈ…
ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ ಉಡುಪಿ: ಕಾರಿಗೆ ಫುಲ್…
ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಸತೀಶ್ ಕಡತನಮಲೆ 6 ವರ್ಷ ಪಕ್ಷದಿಂದ ಉಚ್ಛಾಟನೆ ಬೆಂಗಳೂರು: ರಾಜ್ಯ ರೈತ…
ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: “ಮಾಗಡಿ…
ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ ಮಡಿಕೇರಿ : ಯುನೈಟೆಡ್ ಅರಬ್ ಎಮಿರೇಟ್ಸ್ನಲ್ಲಿ ಆರಂಭವಾದ 'ಇತ್ತಿಹಾದ್' ರೈಲು ಸೇವೆಯ…